AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಹುಟ್ಟುಹಬ್ಬದ ಪ್ರಯುಕ್ತ ಒಂದು ದಿನ ಮುನ್ನ ಬಿಡುಗಡೆ ಆಗಲಿದೆ ‘ಕಾಂಗರೂ’ ಸಿನಿಮಾ

ನಟ ಆದಿತ್ಯ ಹಾಗೂ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್ ಅವರು ‘ಕಾಂಗರೂ’ ಸಿನಿಮಾದಲ್ಲಿ ಪ್ರಧಾನ ಪಾತ್ರಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಚಿತ್ರತಂಡದವರು ಈ ಸಿನಿಮಾದ ಟ್ರೇಲರ್​ ಅನಾವರಣ ಮಾಡಿದರು. ಮೇ 4ಕ್ಕೆ ಆದಿತ್ಯ ಅವರ ಜನ್ಮದಿನ. ಮೇ 3ರಂದು ‘ಕಾಂಗರೂ’ ಸಿನಿಮಾ ತೆರೆಕಾಣಲಿದೆ. ಸಾಧು ಕೋಕಿಲ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಆದಿತ್ಯ ಹುಟ್ಟುಹಬ್ಬದ ಪ್ರಯುಕ್ತ ಒಂದು ದಿನ ಮುನ್ನ ಬಿಡುಗಡೆ ಆಗಲಿದೆ ‘ಕಾಂಗರೂ’ ಸಿನಿಮಾ
ಆದಿತ್ಯ, ರಂಜನಿ ರಾಘವನ್
ಮದನ್​ ಕುಮಾರ್​
|

Updated on: Apr 29, 2024 | 10:53 PM

Share

‘ಕಾಂಗರೂ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ನಟ ಆದಿತ್ಯ (Aditya) ಅವರು ಹೀರೋ ಆಗಿ ನಟಿಸಿದ್ದಾರೆ. ‘ಆರೋಹ ಪ್ರೊಡಕ್ಷನ್ಸ್’ ಮೂಲಕ ಚೆನ್ನಕೇಶವ, ರಮೇಶ್‌ ಬಂಡೆ, ನರಸಿಂಹಮೂರ್ತಿ ಚಕ್ರಭಾವಿ, ಸ್ವಾಮಿ ಚಕ್ರಭಾವಿ, ಕೆ.ಜಿ.ಆರ್. ಗೌಡ, ರವಿ ಕೀಲಾರ ಮಂಡ್ಯ ಅವರು ನಿರ್ಮಾಣ ಮಾಡಿದ್ದಾರೆ. ಕಿಶೋರ್ ಮೇಗಳಮನೆ ಅವರ ನಿರ್ದೇಶನದಲ್ಲಿ ‘ಕಾಂಗರೂ’ ಸಿನಿಮಾ (Kangaroo Movie) ಮೂಡಿಬಂದಿದೆ. ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಚಿತ್ರತಂಡದವರು ಒಂದಷ್ಟು ಮಾಹಿತಿ ಹಂಚಿಕೊಂಡರು. ಮೇ 4ರಂದು ಅದಿತ್ಯ ಅವರ ಹುಟ್ಟುಹಬ್ಬ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಮೇ 3ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ನಟಿ ರಂಜನಿ ರಾಘವನ್​ (Ranjani Raghavan) ಅವರು ‘ಕಾಂಗರೂ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಈ ಸಿನಿಮಾದ ನಿರ್ಮಾಪಕರೇ ಟ್ರೇಲರ್​ ರಿಲೀಸ್​ ಮಾಡಿದ್ದಾರೆ. ಆ ಬಗ್ಗೆ ಮಾತನಾಡಿದ ಆದಿತ್ಯ, ‘ನಿರ್ಮಾಪಕರೇ ನಮ್ಮ ಅನ್ನದಾತರು. ಆದ್ದರಿಂದ ಅವರಿಂದಲೇ ಟ್ರೇಲರ್ ಬಿಡುಗಡೆ ಮಾಡಿಸಬೇಕು ಎಂದು ನಾನು ಮತ್ತು ನಿರ್ದೇಶಕರು ಅಂದುಕೊಂಡೆವು. ಹಾಗಾಗಿ ನಿರ್ಮಾಪಕರೇ ಟ್ರೇಲರ್ ಅನಾವರಣ ಮಾಡಿದ್ದಾರೆ’ ಎಂದು ಹೇಳಿದರು. ಈ ಸಿನಿಮಾದಲ್ಲಿ ಹಾರರ್, ಸಸ್ಪೆನ್ಸ್, ಥ್ರಿಲ್ಲರ್, ತಾಯಿ ಸೆಂಟಿಮೆಂಟ್​ ಮುಂತಾದ ಅಂಶಗಳು ಇವೆ ಎಂದು ಆದಿತ್ಯ ಹೇಳಿದ್ದಾರೆ.

ಸಾಧು ಕೋಕಿಲ ಅವರು ‘ಕಾಂಗರೂ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈ ಮೊದಲು ಆದಿತ್ಯ ಅವರ ಕಾಂಬಿನೇಷನ್​ನಲ್ಲಿ ‘ನೀನೊಂದು ಮುಗಿಯದ ಮೌನ..’ ಹಾಡನ್ನು ಸಾಧುಕೋಕಿಲ ನೀಡಿದ್ದರು. ಈಗ ಅವರೊಂದಿಗೆ ಮತ್ತೆ ಸಿನಿಮಾ ಮಾಡಿದ್ದಕ್ಕೆ ಆದಿತ್ಯ ಅವರಿಗೆ ಖುಷಿ ಇದೆ. ‘ಸಾಧು ಕೋಕಿಲ ಅವರು ಮತ್ತೊಮ್ಮೆ ನನ್ನ ಸಿನಿಮಾಗೆ ಅದ್ಭುತವಾದ ಸಂಗೀತ ನೀಡಿದ್ದಾರೆ. ಅದೇ ರೀತಿ ಕ್ಯಾಮೆರಾ ವರ್ಕ್ ಕೂಡ ನಮ್ಮ ಸಿನಿಮಾದ ಮತ್ತೊಂದು ಹೈಲೈಟ್. ಉದಯಲೀಲಾ ಅವರು ತುಂಬಾ ಚೆನ್ನಾಗಿ ಛಾಯಾಗ್ರಹಣ ಮಾಡಿದ್ದಾರೆ. ನನಗೆ ಈ ಚಿತ್ರದಲ್ಲಿ ತನಿಖಾಧಿಕಾರಿ ಪಾತ್ರವಿದೆ’ ಎಂದಿದ್ದಾರೆ ಆದಿತ್ಯ.

Kangaroo Movie Producers

‘ಕಾಂಗರೂ’ ಸಿನಿಮಾದ ನಿರ್ಮಾಪಕರು

‘ಕನ್ನಡತಿ’ ಸೀರಿಯಲ್​ ಖ್ಯಾತಿಯ ರಂಜನಿ ರಾಘವನ್ ಅವರಿಗೆ ಈ ಸಿನಿಮಾದಲ್ಲಿ ನಾಯಕಿ ಪಾತ್ರವಿದೆ. ‘ನಾನು ಆದಿತ್ಯ ನಟನೆಯ ಸಿನಿಮಾಗಳನ್ನು ನೋಡಿ ಬೆಳೆದವಳು. ಈಗ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕಿತು. ಪ್ರೇಕ್ಷಕಳಾಗಿ ನಾನು ಈಗಾಗಲೇ ಸಿನಿಮಾ ನೋಡಿದ್ದೇನೆ. ನಿರ್ದೇಶಕರು ಪ್ರತಿ ಪಾತ್ರವನ್ನು ಬಹಳ ಅಚ್ಚುಕಟ್ಟಾಗಿ ತೆರೆಗೆ ತಂದಿದ್ದಾರೆ’ ಎಂದಿದ್ದಾರೆ ರಂಜನಿ ರಾಘವನ್​.

ಇದನ್ನೂ ಓದಿ: ಸೆಟ್ಟೇರಿತು ಆರ್​. ಚಂದ್ರು ನಿರ್ಮಾಣದ ‘ಫಾದರ್​’ ಸಿನಿಮಾ; ಶುಭಕೋರಿದ ಶಿವಣ್ಣ

ಅಂದಾಜು 150ರಿಂದ 200 ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಮಾಡುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ತಿಳಿಸಿದ್ದಾರೆ. ‘ಇದು ಫ್ಯಾಮಿಲಿ ಪ್ರೇಕ್ಷಕರಿಗಾಗಿ ಮಾಡಿದ ಸಿನಿಮಾ’ ಎಂದು ಅವರು ಹೇಳಿದಾರೆ. ಬೆಂಗಳೂರು, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು, ಹೊರನಾಡು ಸುತ್ತಮುತ್ತ ಶೂಟಿಂಗ್​ ಮಾಡಲಾಗಿದೆ. ‘ಯು ಟರ್ನ್’ ಸಿನಿಮಾದಿಂದ ಸ್ಫೂರ್ತಿ ಪಡೆದು ಕಿಶೋರ್​ ಮೇಗಳಮನೆ ಅವರು ‘ಕಾಂಗರೂ’ ಸಿನಿಮಾ ಮಾಡಿದ್ದಾರೆ. ಒಂದು ಚಿಕ್ಕ ತಪ್ಪಿನಿಂದ ಮುಂದೆ ಏನೆಲ್ಲ ಆಗಬಹುದು ಎಂಬುದು ಈ ಸಿನಿಮಾವನ್ನು ಅವರು ತೋರಿಸಿದ್ದಾರಂತೆ.

ನಿರ್ಮಾಪಕ ರಮೇಶ್ ಬಂಡೆ ಮಾತನಾಡಿ, ‘ನಾವು ಆರು ಮಂದಿ ಸ್ನೇಹಿತರು ಪೀಣ್ಯದಲ್ಲಿ ಇಂಡಸ್ಟ್ರಿ ನಡೆಸುತ್ತಿದ್ದೇವೆ. ಹೊಸದಾಗಿ ಏನಾದರೂ ಮಾಡೋಣ ಎಂಬ ಉದ್ದೇಶದಿಂದ ಈ ಸಿನಿಮಾ ನಿರ್ಮಾಣ ಮಾಡಿದ್ದೇವೆ. ಜನರು ಕೊಡುವ ಹಣಕ್ಕೆ ಈ ಸಿನಿಮಾ ನ್ಯಾಯ ಒದಗಿಸುತ್ತದೆ’ ಎಂದರು. ಸಿನಿಮಾ ಉತ್ತಮವಾಗಿ ಮೂಡಿಬಂದಿದೆ ಎಂದು ರವಿ ಕೀಲಾರ ಮಂಡ್ಯ ಹೇಳಿದ್ದಾರೆ. ‘ಕನ್ನಡದ ಪ್ರೇಕ್ಷಕರಿಗಾಗಿ ಒಳ್ಳೆಯ ಸಿನಿಮಾವನ್ನು ಮಾಡಿರುವ ಖುಷಿಯಿದೆ’ ಎಂದು ಮತ್ತೋರ್ವ ನಿರ್ಮಾಪಕ ಚೆನ್ನಕೇಶವ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು