AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ’, ‘ಅಮರನ್’ ಹೊಡೆತಕ್ಕೆ ತತ್ತರಿಸಿದ ‘ಕಂಗುವ’; ಒಂದಂಕಿಗೆ ಬಂದ ಕಲೆಕ್ಷನ್

ಕಂಗುವ ಚಿತ್ರವು ಬಿಡುಗಡೆಯಾದ ನಂತರ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಮೊದಲ ದಿನ 24 ಕೋಟಿ ರೂಪಾಯಿಗಳನ್ನು ಗಳಿಸಿದ್ದ ಚಿತ್ರ, ಎರಡನೇ ದಿನ ಕೆಲವೇ 9 ಕೋಟಿ ರೂಪಾಯಿ ಗಳಿಸಿದೆ. ಕಡಿಮೆ ರೇಟಿಂಗ್ ಮತ್ತು ಟೀಕೆಗಳಿಂದಾಗಿ ಚಿತ್ರದ ಗಳಿಕೆ ಕುಸಿದಿದೆ.

‘ಭೈರತಿ’, ‘ಅಮರನ್’ ಹೊಡೆತಕ್ಕೆ ತತ್ತರಿಸಿದ ‘ಕಂಗುವ’; ಒಂದಂಕಿಗೆ ಬಂದ ಕಲೆಕ್ಷನ್
ರಾಜೇಶ್ ದುಗ್ಗುಮನೆ
|

Updated on: Nov 16, 2024 | 7:25 AM

Share

‘ಕಂಗುವ’ ಸಿನಿಮಾ ನವೆಂಬರ್ 14ರಂದು ರಿಲೀಸ್ ಆಯಿತು. ಎರಡು ಕಾಲ ಘಟ್ಟದಲ್ಲಿ ಸಿನಿಮಾದ ಕಥೆ ಸಾಗಲಿದೆ. ಈ ಚಿತ್ರವನ್ನು ನೋಡಿದ ಎಲ್ಲರೂ ಬಾಯಿಗೆ ಬಂದಂತೆ ಬೈಯ್ಯುತ್ತಿದ್ದಾರೆ. ಈ ಚಿತ್ರಕ್ಕೆ ರೇಟಿಂಗ್ ಕೂಡ ಕಡಿಮೆ ಸಿಕ್ಕಿದೆ. ಈಗ ಚಿತ್ರದ ಗಳಿಕೆ ದಿನ ಕಳೆದಂತೆ ಮತ್ತಷ್ಟು ತಗ್ಗಿದೆ. ಮೊದಲ ದಿನ ಎರಂಡಕಿ ಇದ್ದ ಗಳಿಕೆ ಈಗ ಒಂದಂಕಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಹೀಗೆ ಮುಂದುವರಿದರೆ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಡಿಸಾಸ್ಟರ್ ಆಗಲಿದೆ.

‘ಕಂಗುವ’ ಸಿನಿಮಾದ ಮೊದಲ ದಿನದ ಗಳಿಕೆ 24 ಕೋಟಿ ರೂಪಾಯಿ ಆಗಿತ್ತು. ಎರಡನೇ ದಿನ ಈ ಚಿತ್ರ ಗಳಿಕೆ ಮಾಡಿದ್ದು ಕೇವಲ 9 ಕೋಟಿ ರೂಪಾಯಿ! ಹೌದು, ಆರಂಭಿಕ ಲೆಕ್ಕಾಚಾರಗಳ ಪ್ರಕಾರ ಈ ಸಿನಿಮಾ ಎರಡನೇ ದಿನ ಕಲೆಕ್ಷನ್ ಮಾಡಿದ್ದು ಕೆಲವೇ ಕೋಟಿಗಳು. ಇದು ತಂಡಕ್ಕೆ ಶಾಕ್ ಆಗಿದೆ. ನಿರ್ಮಾಪಕರು ಈ ಸಿನಿಮಾದಿಂದ ದೊಡ್ಡ ನಷ್ಟ ಅನುಭವಿಸಿದ್ದಾರೆ.

ಸದ್ಯ ಚಿತ್ರದ ಒಟ್ಟಾರೆ ಗಳಿಕೆ 30 ಕೋಟಿ ರೂಪಾಯಿ. ಈ ಚಿತ್ರದ ಬಜೆಟ್ 350 ಕೋಟಿ ರೂಪಾಯಿ. ಅಂದರೆ, ಸಿನಿಮಾ ಒಟ್ಟೂ ಬಜೆಟ್​ನ ಶೇ.10ರಷ್ಟು ಗಳಿಕೆ ಮಾಡಲು ಸಿನಿಮಾ ವಿಫಲವಾಗಿದೆ. ಹೀಗೆ ಮುಂದುವರಿದರೆ ಸಿನಿಮಾ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.

ಇದನ್ನೂ ಓದಿ: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

ತಮಿಳಿನಲ್ಲಿ ‘ಅಮರನ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಕರ್ನಾಟಕದಲ್ಲಿ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆ ಕಂಡಿದೆ. ಹೀಗಾಗಿ, ತಮಿಳುನಾಡಿನಲ್ಲಿ ‘ಕಂಗುವ’ ಬದಲಿಗೆ ‘ಅಮರನ್’ ಚಿತ್ರ ಪ್ರದರ್ಶನ ಆರಂಭಿಸಲಾಗಿದೆ. ಕರ್ನಾಟಕದಲ್ಲಿ ‘ಕಂಗುವ’ ಜಾಗಕ್ಕೆ ‘ಭೈರತಿ’ಯ ಎಂಟ್ರಿ ಆಗಿದೆ. ಶನಿವಾರ ಹಾಗೂ ಭಾನುವಾರ ‘ಕಂಗುವ’ ಒಳ್ಳೆಯ ಪ್ರದರ್ಶನ ಕಂಡರೆ ನಿರ್ಮಾಪಕರ ಮೊಗದಲ್ಲಿ ನಗು ಮೂಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ