AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ’, ‘ಅಮರನ್’ ಹೊಡೆತಕ್ಕೆ ತತ್ತರಿಸಿದ ‘ಕಂಗುವ’; ಒಂದಂಕಿಗೆ ಬಂದ ಕಲೆಕ್ಷನ್

ಕಂಗುವ ಚಿತ್ರವು ಬಿಡುಗಡೆಯಾದ ನಂತರ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಮೊದಲ ದಿನ 24 ಕೋಟಿ ರೂಪಾಯಿಗಳನ್ನು ಗಳಿಸಿದ್ದ ಚಿತ್ರ, ಎರಡನೇ ದಿನ ಕೆಲವೇ 9 ಕೋಟಿ ರೂಪಾಯಿ ಗಳಿಸಿದೆ. ಕಡಿಮೆ ರೇಟಿಂಗ್ ಮತ್ತು ಟೀಕೆಗಳಿಂದಾಗಿ ಚಿತ್ರದ ಗಳಿಕೆ ಕುಸಿದಿದೆ.

‘ಭೈರತಿ’, ‘ಅಮರನ್’ ಹೊಡೆತಕ್ಕೆ ತತ್ತರಿಸಿದ ‘ಕಂಗುವ’; ಒಂದಂಕಿಗೆ ಬಂದ ಕಲೆಕ್ಷನ್
ರಾಜೇಶ್ ದುಗ್ಗುಮನೆ
|

Updated on: Nov 16, 2024 | 7:25 AM

Share

‘ಕಂಗುವ’ ಸಿನಿಮಾ ನವೆಂಬರ್ 14ರಂದು ರಿಲೀಸ್ ಆಯಿತು. ಎರಡು ಕಾಲ ಘಟ್ಟದಲ್ಲಿ ಸಿನಿಮಾದ ಕಥೆ ಸಾಗಲಿದೆ. ಈ ಚಿತ್ರವನ್ನು ನೋಡಿದ ಎಲ್ಲರೂ ಬಾಯಿಗೆ ಬಂದಂತೆ ಬೈಯ್ಯುತ್ತಿದ್ದಾರೆ. ಈ ಚಿತ್ರಕ್ಕೆ ರೇಟಿಂಗ್ ಕೂಡ ಕಡಿಮೆ ಸಿಕ್ಕಿದೆ. ಈಗ ಚಿತ್ರದ ಗಳಿಕೆ ದಿನ ಕಳೆದಂತೆ ಮತ್ತಷ್ಟು ತಗ್ಗಿದೆ. ಮೊದಲ ದಿನ ಎರಂಡಕಿ ಇದ್ದ ಗಳಿಕೆ ಈಗ ಒಂದಂಕಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಹೀಗೆ ಮುಂದುವರಿದರೆ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಡಿಸಾಸ್ಟರ್ ಆಗಲಿದೆ.

‘ಕಂಗುವ’ ಸಿನಿಮಾದ ಮೊದಲ ದಿನದ ಗಳಿಕೆ 24 ಕೋಟಿ ರೂಪಾಯಿ ಆಗಿತ್ತು. ಎರಡನೇ ದಿನ ಈ ಚಿತ್ರ ಗಳಿಕೆ ಮಾಡಿದ್ದು ಕೇವಲ 9 ಕೋಟಿ ರೂಪಾಯಿ! ಹೌದು, ಆರಂಭಿಕ ಲೆಕ್ಕಾಚಾರಗಳ ಪ್ರಕಾರ ಈ ಸಿನಿಮಾ ಎರಡನೇ ದಿನ ಕಲೆಕ್ಷನ್ ಮಾಡಿದ್ದು ಕೆಲವೇ ಕೋಟಿಗಳು. ಇದು ತಂಡಕ್ಕೆ ಶಾಕ್ ಆಗಿದೆ. ನಿರ್ಮಾಪಕರು ಈ ಸಿನಿಮಾದಿಂದ ದೊಡ್ಡ ನಷ್ಟ ಅನುಭವಿಸಿದ್ದಾರೆ.

ಸದ್ಯ ಚಿತ್ರದ ಒಟ್ಟಾರೆ ಗಳಿಕೆ 30 ಕೋಟಿ ರೂಪಾಯಿ. ಈ ಚಿತ್ರದ ಬಜೆಟ್ 350 ಕೋಟಿ ರೂಪಾಯಿ. ಅಂದರೆ, ಸಿನಿಮಾ ಒಟ್ಟೂ ಬಜೆಟ್​ನ ಶೇ.10ರಷ್ಟು ಗಳಿಕೆ ಮಾಡಲು ಸಿನಿಮಾ ವಿಫಲವಾಗಿದೆ. ಹೀಗೆ ಮುಂದುವರಿದರೆ ಸಿನಿಮಾ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.

ಇದನ್ನೂ ಓದಿ: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

ತಮಿಳಿನಲ್ಲಿ ‘ಅಮರನ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಕರ್ನಾಟಕದಲ್ಲಿ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆ ಕಂಡಿದೆ. ಹೀಗಾಗಿ, ತಮಿಳುನಾಡಿನಲ್ಲಿ ‘ಕಂಗುವ’ ಬದಲಿಗೆ ‘ಅಮರನ್’ ಚಿತ್ರ ಪ್ರದರ್ಶನ ಆರಂಭಿಸಲಾಗಿದೆ. ಕರ್ನಾಟಕದಲ್ಲಿ ‘ಕಂಗುವ’ ಜಾಗಕ್ಕೆ ‘ಭೈರತಿ’ಯ ಎಂಟ್ರಿ ಆಗಿದೆ. ಶನಿವಾರ ಹಾಗೂ ಭಾನುವಾರ ‘ಕಂಗುವ’ ಒಳ್ಳೆಯ ಪ್ರದರ್ಶನ ಕಂಡರೆ ನಿರ್ಮಾಪಕರ ಮೊಗದಲ್ಲಿ ನಗು ಮೂಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ