AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಆಗಿರೋ ಸಮಸ್ಯೆಗಳೇನು? ಆಪರೇಷನ್ ಇಲ್ಲ ಎಂದರೆ ಮುಂದೇನು? 

ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಪೂರ್ಣ ಪ್ರಮಾಣದ ಜಾಮೀನು ನೀಡಿದೆ. ಮಧ್ಯಂತರ ಜಾಮೀನಿನಲ್ಲಿದ್ದ ಅವರು ಈಗ ಯಾವುದೇ ಹೆಚ್ಚಿನ ಚಿಂತೆಯಿಲ್ಲದೆ ಚಿಕಿತ್ಸೆ ಪಡೆಯಬಹುದು. ಬೆನ್ನು ನೋವಿಗೆ ಸದ್ಯ ಕನ್ಸರ್ವೇಟಿವ್ ಟ್ರೀಟ್‌ಮೆಂಟ್ ಮತ್ತು ಫಿಸಿಯೋಥೆರಪಿ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಮುಂದೂಡುವ ಸಾಧ್ಯತೆ ಹೆಚ್ಚಿದೆ. ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ.

ದರ್ಶನ್​ಗೆ ಆಗಿರೋ ಸಮಸ್ಯೆಗಳೇನು? ಆಪರೇಷನ್ ಇಲ್ಲ ಎಂದರೆ ಮುಂದೇನು? 
ದರ್ಶನ್
Follow us
Shivaprasad
| Updated By: ರಾಜೇಶ್ ದುಗ್ಗುಮನೆ

Updated on: Dec 14, 2024 | 10:49 AM

ನಟ ದರ್ಶನ್​ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಅವರು ಈಗಾಗಲೇ ಮಧ್ಯಂತರ ಜಾಮೀನು ಪಡೆದು ಹೊರಗೆ ಇರುವುದರಿಂದ ಅವರಿಗೆ ಯಾವುದೇ ಹೆಚ್ಚಿನ ಚಿಂತೆ ಇಲ್ಲ. ತುರ್ತು ಆಪರೇಷನ್ ಅಗತ್ಯ ಎಂದು ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ವೈದ್ಯರು ಡಿಸೆಂಬರ್ 11ಕ್ಕೆ ಆಪರೇಷನ್ ನಿಗದಿ ಮಾಡಿದ್ದರು. ಆದರೆ, ಈಗ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿಕೊಳ್ಳುತ್ತಾರಾ ಅಥವಾ ಆಪರೇಷನ್ ಮಾಡಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ದರ್ಶನ್ ಸದ್ಯಕ್ಕೆ ಕನ್ಸರ್ವೇಟಿವ್ ಟ್ರೀಟ್​ಮೆಂಟ್ ಪಡೆಯುತ್ತಿದ್ದಾರೆ. ಸಿನಿಮಾ ನಟ ಆದ ಕಾರಣ ಭವಿಷ್ಯವನ್ನು ದೃಷ್ಟಿಯಾಗಿಟ್ಟುಕೊಂಡು ಆಪರೇಷನ್ ಮಾಡಿಸಿಕೊಳ್ಳೋದು ಡೌಟ್ ಎಂದು ಹೇಳಲಾಗುತ್ತಿದೆ. ಸದ್ಯ ವೈದ್ಯರು ಕನ್ಸರ್ವೇಟಿವ್ ಟ್ರೀಟ್​ಮೆಂಟ್ ಜೊತೆಗೆ ಪಿಜಿಯೋಥೆರಪಿ ಮಾಡಿ ದರ್ಶನ್ ಬೆನ್ನು ನೋವು ಗುಣ ಮುಖ ಮಾಡುವ ಪ್ರಯತ್ನದಲ್ಲಿ ಇದ್ದಾರೆ.

ಒಂದು ವಾರ ಚಿಕಿತ್ಸೆ?

ಜಾಮೀನು ಸಿಕ್ಕ ಬಳಿಕವೂ ದರ್ಶನ್​ಗೆ ಒಂದು ವಾರಗಳ ಕಾಲ ಬಿಜಿಎಸ್ ಆಸ್ಪತ್ರೆಯಲ್ಲಿ ಟ್ರೀಟ್ ಮೆಂಟ್ ಪಡೆಯೋ ಸಾಧ್ಯತೆ ಇದೆ. ವಾರಗಳ ಚಿಕಿತ್ಸೆ ಬಳಿಕ ಅವರು ಡಿಸ್ಸಾರ್ಜ್ ಆಗ್ತಾರೆ ಅನ್ನೋ ಮಾಹಿತಿ ಇದೆ.  ಹೀಗಾಗಿ, ಸದ್ಯಕ್ಕೆ ಆಪರೇಷನ್ ಮೊರೆ ಹೋಗೋದು ಡೌಟ್ ಎನ್ನಲಾಗಿದೆ.

ಕನ್ಸವೇರ್ಟಿವ್ ಟ್ರಿಟ್​ಮೆಂಟ್ ಎಂದರೆ ಏನು?

ಶಸ್ತ್ರಚಿಕಿತ್ಸೆ ಬದಲು ಅನುಸರಿಸುವ ಪರ್ಯಾಯ ಚಿಕಿತ್ಸಾ ಪದ್ಧತಿಗೆ ಕನ್ಸರ್ವೇಟಿವ್ ಟ್ರೀಟ್​ಮೆಂಟ್ ಎಂದು ಕರೆಯಲಾಗುತ್ತದೆ. ಸರ್ಜರಿ ಮಾಡದೇ ಬೆನ್ನು ನೋವಿಗೆ ಮಾತ್ರೆ ಮತ್ತು ಔಷದಿಗಳನ್ನ ನೀಡಿ ಗುಣಮುಖ ಮಾಡುವ ಪ್ರಯತ್ನ ಇದಾಗಿದೆ.

ದರ್ಶನ್ ಮುಂದಿರೋ ಆಯ್ಕೆಗಳು

ದರ್ಶನ್​ ಬೆನ್ನು ನೋವಗೆ ಫಿಜಿಯೋಥೆರಪಿ ನೀಡಿ ಗುಣ ಮುಖ ಮಾಡುವ ಪ್ರಯತ್ನ ಮಾಡಬಹುದು. ಆಪರೇಷನ್ ಮಾಡದೇ ವ್ಯಾಯಾಮಗಳನ್ನು ಮಾಡಿಸಿ ಬೆನ್ನು ನೋವನ್ನ ಗುಣಮುಖ ಮಾಡುವ ಪ್ರಯತ್ನ ನಡೆಬಹುದು. ಆಪರೇಷನ್ ಮಾಡದೇ ಅಲ್ಟ್ರಾ ಸೌಂಡ್‌ ಚಿಕಿತ್ಸಾ ಪದ್ಧತಿ ಮೂಲಕ ಟ್ರೀಟ್​ಮೆಂಟ್ ನೀಡುವ ಪ್ರಯತ್ನ ನಡೆಯಲಿದೆ.

ಇದನ್ನೂ ಓದಿ: ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ

ದರ್ಶನ್​ಗೆ ಆಗಿರೋದೇನು?

ಸೊಂಟದ ಭಾಗದಲ್ಲಿ ಇರುವ ಬೆನ್ನು ಮೂಳೆ ಸರಿದಿದೆ. ಈ‌  ಕಾರಣ ನರದ ಮೇಲೆ ಒತ್ತಡ ಉಂಟಾಗಿ ತೀವ್ರ ನೋವು ಉಂಟಾಗುತ್ತಿದೆ. ಸ್ಪೈನಲ್ ಕಾರ್ಡ್ ಹಾದು ಹೋಗಿರುವ ಭಾಗದಲ್ಲಿ ನರಗಳ ಮೇಲೆ ಒತ್ತಡ ಬೀಳುತ್ತಿದೆ. ಬೆನ್ನಿನ ನರಹುರಿಯ ಮೇಲೆ ಒತ್ತಡ ಹಿನ್ನೆಲೆ ಬೆನ್ನು ನೋವು ಜಾಸ್ತಿ ಆಗ್ತಿದೆ. ನರದ ಮೇಲೆ ಒತ್ತಡ ಆಗ್ತಿರುವ ಕಾರಣ ಪಿಜಿಯೋಥೆರಪಿ ಮತ್ತು ವ್ಯಾಯಾಮ ಅಗತ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್