AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Devaraj: ಹಿರಿಯ ನಟ ದೇವರಾಜ್​ ಜನ್ಮದಿನ: ಸಂಭ್ರಮ ಹೆಚ್ಚಿಸಿದ ಸೈಮಾ ಅವಾರ್ಡ್​

1985ರಿಂದಲೂ ದೇವರಾಜ್​ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಖಳನಟನಾಗಿ, ಹೀರೋ ಆಗಿ, ಪೋಷಕ ಪಾತ್ರಧಾರಿಯಾಗಿ ಅವರು ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದಾರೆ. ಇಂದಿಗೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

Happy Birthday Devaraj: ಹಿರಿಯ ನಟ ದೇವರಾಜ್​ ಜನ್ಮದಿನ: ಸಂಭ್ರಮ ಹೆಚ್ಚಿಸಿದ ಸೈಮಾ ಅವಾರ್ಡ್​
ಹಿರಿಯ ನಟ ದೇವರಾಜ್​ ಜನ್ಮದಿನ: ಸಂಭ್ರಮ ಹೆಚ್ಚಿಸಿದ ಸೈಮಾ ಅವಾರ್ಡ್​
TV9 Web
| Edited By: |

Updated on: Sep 20, 2021 | 12:08 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ದೇವರಾಜ್​ ಅವರಿಗೆ ಇಂದು (ಸೆ.20) ಜನ್ಮದಿನದ ಸಂಭ್ರಮ. ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಸ್ನೇಹಿತರು ಅವರಿಗೆ ಹುಟ್ಟುಹಬ್ಬದ ಶುಭಕೋರುತ್ತಿದ್ದಾರೆ. ಈ ಖುಷಿಯನ್ನು ಹೆಚ್ಚಿಸಲು ದೇವರಾಜ್​ಗೆ ಈ ಬಾರಿ ಸೈಮಾ ಅವಾರ್ಡ್​ ಕೂಡ ಸಿಕ್ಕಿದೆ. ಹುಟ್ಟುಹಬ್ಬದ ಹೊಸ್ತಿಲಲ್ಲೇ ಅವರಿಗೆ ಈ ಪ್ರಶಸ್ತಿ ಸಿಕ್ಕಿರುವುದು ವಿಶೇಷ. ‘ಯಜಮಾನ’ ಸಿನಿಮಾದಲ್ಲಿನ ನಟನೆಗೆ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಸಂಭ್ರಮಕ್ಕಾಗಿ ಎಲ್ಲರಿಂದಲೂ ಅಭಿನಂದನೆ ಸಲ್ಲಿಕೆ ಆಗುತ್ತಿದೆ.

1985ರಿಂದಲೂ ದೇವರಾಜ್​ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಖಳನಟನಾಗಿ, ಹೀರೋ ಆಗಿ, ಪೋಷಕ ಪಾತ್ರಧಾರಿಯಾಗಿ ಅವರು ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದಾರೆ. ಇಂದಿಗೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಮನಸ್ಸಿಗೆ ಒಪ್ಪುವಂತಹ ಪಾತ್ರಗಳನ್ನು ಮಾತ್ರ ಅವರೀಗ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದರ್ಶನ್​ ನಟನೆಯ ಬಹುತೇಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ತಾರಕ್​, ಯಜಮಾನ, ರಾಬರ್ಟ್​ ಚಿತ್ರಗಳಲ್ಲಿ ಅವರು ಗಮನಾರ್ಹ ಪಾತ್ರ ಮಾಡಿದ್ದಾರೆ.

ಯಜಮಾನ ಸಿನಿಮಾದಲ್ಲಿ ಕಥಾನಾಯಕಿಯ ತಂದೆ ಪಾತ್ರದಲ್ಲಿ ದೇವರಾಜ್​ ನಟಿಸಿದ್ದಾರೆ. ಆ ಪಾತ್ರಕ್ಕಾಗಿ ಅವರಿಗೆ ಸೈಮಾ ಸಮಾರಂಭದಲ್ಲಿ ಈಗ ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿ ಸಿಕ್ಕಿದೆ. ಅವರ ಮಕ್ಕಳಾದ ಪ್ರಜ್ವಲ್​ ದೇವರಾಜ್​, ಪ್ರಣವ್​ ದೇವರಾಜ್​, ಸೊಸೆ ರಾಗಿಣಿ ಚಂದ್ರನ್​ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ಜಂಟಲ್​ ಮನ್​’ ಸಿನಿಮಾದ ನಟನೆಗಾಗಿ ಪ್ರಜ್ವಲ್​ ದೇವರಾಜ್​ ಅವರು ಈ ಬಾರಿ ‘ಅತ್ಯುತ್ತಮ ನಟ’ ಕ್ರಿಟಿಕ್ಸ್​ ಅವಾರ್ಡ್​ ಪಡೆದಿರುವುದು ವಿಶೇಷ. ಒಟ್ಟಿನಲ್ಲಿ ದೇವರಾಜ್​ ಅವರ ಬರ್ತ್​ಡೇ ಸಮಯಕ್ಕೆ ಅವರ ಕುಟುಂಬದಲ್ಲಿ ಸೈಮಾ ಪ್ರಶಸ್ತಿಗಳಿಂದ ಸಂಭ್ರಮ ಹೆಚ್ಚಿದೆ.

ನೂರಾರು ಸಿನಿಮಾಗಳಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದವರು ದೇವರಾಜ್​. ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳಿನ ಅನೇಕ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. 1991ರಲ್ಲಿ ‘ವೀರಪ್ಪನ್’​ ಚಿತ್ರದ ನಟನೆಗಾಗಿ ಅವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. 1987ರಲ್ಲಿ ‘ಆಗಂತುಕ’ ಚಿತ್ರದಲ್ಲಿನ ನಟನೆಗೆ ‘ಅತ್ಯುತ್ತಮ ಪೋಷಕ ನಟ’ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು. ಈಗ ಅವರ ಮುಡಿಗೆ ಸೈಮಾ ಗರಿ ಸೇರ್ಪಡೆ ಆಗಿದೆ. ಅವರು ನಿಭಾಯಿಸಿದ ಪೊಲೀಸ್​ ಆಫೀಸರ್​ ಪಾತ್ರಗಳನ್ನು ಅಭಿಮಾನಿಗಳು ಎಂದಿಗೂ ಮರೆಯುವಂತಿಲ್ಲ.

ಇದನ್ನೂ ಓದಿ:

‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು..’; ಸೈಮಾ ಡಬಲ್​ ಸಂಭ್ರಮದ ಬಗ್ಗೆ ರಶ್ಮಿಕಾ ಮನದ ಮಾತು​

SIIMA Awards 2021: ಸೈಮಾ ಅವಾರ್ಡ್ಸ್​​ ವೇದಿಕೆಯ ಕಲರ್​ಫುಲ್​ ಫೋಟೋಗಳು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು