AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಧನ್ವೀರ್​ ಗೌಡ 3ನೇ ಸಿನಿಮಾ ಹೇಗಿರಲಿದೆ? ಟೈಟಲ್​, ಫಸ್ಟ್​ಲುಕ್​ ಬಿಡುಗಡೆಗೆ ದಿನಾಂಕ ಫಿಕ್ಸ್​​

ಮೂರನೇ ಸಿನಿಮಾಗಾಗಿ ಧನ್ವೀರ್ ಗೌಡ​ ಅವರು ಒಂದಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರಕ್ಕಾಗಿ ವರ್ಕೌಟ್​ ಮಾಡುತ್ತಿದ್ದಾರೆ. ದೇಹವನ್ನು ಹುರಿಗೊಳಿಸಿಕೊಂಡು ಅವರು ಕ್ಯಾಮೆರಾ ಎದುರಿಸಲಿದ್ದಾರೆ.

ನಟ ಧನ್ವೀರ್​ ಗೌಡ 3ನೇ ಸಿನಿಮಾ ಹೇಗಿರಲಿದೆ? ಟೈಟಲ್​, ಫಸ್ಟ್​ಲುಕ್​ ಬಿಡುಗಡೆಗೆ ದಿನಾಂಕ ಫಿಕ್ಸ್​​
ಧನ್ವೀರ್ ಗೌಡ
TV9 Web
| Edited By: |

Updated on: Jan 08, 2022 | 4:36 PM

Share

ನಟನೆ ಮತ್ತು ಕಟ್ಟುಮಸ್ತಾದ ಬಾಡಿಯಿಂದಾಗಿ ಗಮನ ಸೆಳೆದವರು ನಟ ಧನ್ವೀರ್​ ಗೌಡ. ‘ಬಜಾರ್​’ ಸಿನಿಮಾ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಗಮನ ಸೆಳೆದರು. ಸಿನಿಮಾಗಳ ಆಯ್ಕೆಯಲ್ಲಿ ತಮ್ಮದೇ ಆದಂತಹ ಕೆಲವು ನಿಯಮಗಳನ್ನು ಪಾಲಿಸುತ್ತಿರುವ ಅವರು ಹೊಸ ಪ್ರಾಜೆಕ್ಟ್​ ಒಪ್ಪಿಕೊಂಡಿದ್ದಾರೆ. ಸದ್ಯ ಧನ್ವೀರ್​ ಗೌಡ ‘ಬೈ ಟು ಲವ್​’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅದು ಅವರ 2ನೇ ಸಿನಿಮಾ. ಧನ್ವೀರ್​ ನಟಿಸಲಿರುವ ಮೂರನೇ ಸಿನಿಮಾ ಬಗ್ಗೆಯೂ ಈಗ ಒಂದಷ್ಟು ಮಾಹಿತಿ ಹೊರಬಿದ್ದಿದೆ. ಮಾಸ್​ ಅವತಾರದಲ್ಲಿ ಪ್ರೇಕ್ಷಕರನ್ನು ರಂಜಿಸಲು ಅವರು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಶೀಘ್ರವೇ ಇನ್ನಷ್ಟು ಅಪ್​​ಡೇಟ್​ ಸಿಗಲಿದೆ. ಅದಕ್ಕಾಗಿ ದಿನಾಂಕ ಕೂಡ ನಿಗದಿ ಆಗಿದೆ.

ಧನ್ವೀರ್​ ನಟಿಸಲಿರುವ ಮೂರನೇ ಚಿತ್ರವನ್ನು ಸದ್ಯಕ್ಕೆ ‘ಡಿ3’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.14ರಂದು ಬಹಿರಂಗ ಆಗಲಿದೆ. ಅದೇ ದಿನ ಫಸ್ಟ್​ಲುಕ್​ ಮೋಷನ್​ ಪೋಸ್ಟರ್​ ಸಹ ಬಿಡುಗಡೆ ಆಗಲಿದೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಪ್ರೊಡಕ್ಷನ್ ಬ್ಯಾನರ್​ನಲ್ಲಿ ಚೇತನ್ ಕುಮಾರ್ ಗೌಡ ಅವರು ಈ ಸಿನಿಮಾಗೆ ಬಂಡವಾಳ‌ ಹೂಡಲಿದ್ದಾರೆ.

ಈ ಚಿತ್ರಕ್ಕೆ ನಿರ್ದೇಶನ ಮಾಡುವವರು ಯಾರು ಎಂಬುದು ಕೂಡ ಬಹಿರಂಗ ಆಗಿದೆ. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಅವರದ್ದು 13 ವರ್ಷಗಳ ಅನುಭವ. ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಧನ್ವೀರ್​ಗಾಗಿ ಶಂಕರ್ ರಾಮನ್ ಅವರು ಮಾಫಿಯಾ ಲೋಕದ ಕಥೆ ಸಿದ್ಧಪಡಿಸಿದ್ದಾರೆ. ಈ ಸಿನಿಮಾ ಮಾಸ್​ ಆಕ್ಷನ್ ಎಂಟರ್​ಟೇನರ್​ ಪ್ರಕಾರದಲ್ಲಿ ಮೂಡಿಬರಲಿದೆ.

ಈ ಚಿತ್ರಕ್ಕಾಗಿ ಧನ್ವೀರ್​ ಅವರು ಒಂದಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರಕ್ಕಾಗಿ ತಯಾರಿ ನಡೆಯುತ್ತಿದೆ. ದೇಹವನ್ನು ಹುರಿಗೊಳಿಸಿಕೊಂಡು ಅವರು ಕ್ಯಾಮೆರಾ ಎದುರಿಸಲಿದ್ದಾರೆ. ಮೊದಲೆರಡು ಸಿನಿಮಾಗಳಿಗಿಂತಲೂ ಈ ಚಿತ್ರ ಭಿನ್ನವಾಗಿ ಇರಲಿದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ಇರಲಿದ್ದಾರೆ ಎಂಬುದು ಕೂಡ ಇನ್ನಷ್ಟೇ ತಿಳಿಯಬೇಕಿದೆ. ಜ.20ರಿಂದ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​