AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದ ದತ್ತಣ್ಣ ಅವರ ಅಣ್ಣ ಸೋಮಣ್ಣ ಇನ್ನಿಲ್ಲ!

ಬೆಂಗಳೂರು: ಕಲಾವಿದ ದತ್ತಣ್ಣ ಅವರ ಅಣ್ಣ ಹೆಚ್.ಜಿ.ಸೋಮಶೇಖರ ರಾವ್(86) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಣ್ಣ ಇಂದು ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ಸೋಮಣ್ಣ […]

ಕಲಾವಿದ ದತ್ತಣ್ಣ ಅವರ ಅಣ್ಣ ಸೋಮಣ್ಣ ಇನ್ನಿಲ್ಲ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 03, 2020 | 3:24 PM

Share

ಬೆಂಗಳೂರು: ಕಲಾವಿದ ದತ್ತಣ್ಣ ಅವರ ಅಣ್ಣ ಹೆಚ್.ಜಿ.ಸೋಮಶೇಖರ ರಾವ್(86) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಣ್ಣ ಇಂದು ಕೊನೆಯುಸಿರೆಳೆದಿದ್ದಾರೆ.

ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ಸೋಮಣ್ಣ ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.

ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವೀಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾವ್ ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.

ಕೆನರಾ ಬ್ಯಾಂಕ್​ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ರಾಯರಿಗೆ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು. ಸೋಮಶೇಖರರಾಯರ ಬದುಕಿನ ಅನುಭವ ಕಥನವು ಪ್ರಕಟವಾಗಿದೆ. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ರಾಯರು ತಮ್ಮ 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ.

Published On - 3:22 pm, Tue, 3 November 20

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ