AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishne Gowda: ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ

Krishne Gowda Death: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೃಷ್ಣೇಗೌಡ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮಂಗಳವಾರ ಮುಂಜಾನೆ ಕೊಲೆಯುಸಿರೆಳೆದರು. ಕೃಷ್ಣೇಗೌಡ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

Krishne Gowda: ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ
ಕೃಷ್ಣೇ ಗೌಡ
ಮದನ್​ ಕುಮಾರ್​
|

Updated on:May 25, 2021 | 1:49 PM

Share

ಚಿತ್ರರಂಗದ ಪಾಲಿಗೆ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಹಲವಾರು ಸಿನಿಮಾ, ನಾಟಕ, ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ನಟ ಕೃಷ್ಣೇಗೌಡ ಅವರು ಮಂಗಳವಾರ (ಮೇ 25) ನಿಧನರಾದರು. 80 ವರ್ಷ ವಯಸ್ಸಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಕೃಷ್ಣೇಗೌಡ ಅವರು ತಮ್ಮ ಸಹಜ ಅಭಿನಯದಿಂದ ಗಮನ ಸೆಳೆದಿದ್ದರು. ಪೋಷಕ ಪಾತ್ರಗಳಿಗೆ ಅವರು ಬಹುಬೇಡಿಕೆಯ ಕಲಾವಿದನಾಗಿದ್ದರು. ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಕೃಷ್ಣೇಗೌಡ ಅವರು ಯಾವ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬುತ್ತಿದ್ದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೃಷ್ಣೇಗೌಡ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮಂಗಳವಾರ ಮುಂಜಾನೆ ಕೊಲೆಯುಸಿರೆಳೆದರು. ಕೃಷ್ಣೇಗೌಡ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಶಿವರಾಜ್​ಕುಮಾರ್​, ರಮೇಶ್​ ಅರವಿಂದ್​, ವಿಷ್ಣುವರ್ಧನ್​, ಅಂಬರೀಷ್ ಮುಂತಾದ ಅನೇಕ ಸ್ಟಾರ್​ ನಟರ ಜೊತೆಗೆ ಕೃಷ್ಣೇಗೌಡ ಅಭಿನಯಿಸಿದ್ದರು.

ಬೈರಸಂದ್ರದಲ್ಲಿ ಜನಿಸಿದ ಕೃಷ್ಣೇಗೌಡ ಅವರು ಒಳ್ಳೆಯ ವಾಲಿಬಾಲ್​ ಆಟಗಾರ ಕೂಡ ಆಗಿದ್ದರು. ಕೃಷ್ಣೇಗೌಡ ಅವರ ತಂದೆ ನಾಟಕಗಳಲ್ಲಿ ಅಭಿನಯಿಸುತ್ತ, ತರಬೇತಿಯನ್ನೂ ನೀಡುತ್ತಿದ್ದರು. ಹಾಗಾಗಿ ಅಂತಹ ವಾತಾವರಣದಲ್ಲಿ ಬೆಳೆದ ಕೃಷ್ಣೇಗೌಡರಿಗೆ ಸಹಜವಾಗಿ ಬಾಲ್ಯದಿಂದಲೇ ನಟನೆ ಬಗ್ಗೆ ಆಸಕ್ತಿ ಮೂಡಿತು. ಚಿತ್ರರಂಗಕ್ಕೆ ಬರುವುದಕ್ಕೂ ಮುನ್ನ ಅವರು ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಹಲವಾರು ನಾಟಕಗಳಲ್ಲಿ ಅಭಿನಯಿಸಿ ಅಪಾರ ಅನುಭವ ಪಡೆದುಕೊಂಡಿದ್ದರು.

ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆದ ಬಳಿಕ ಚಿತ್ರರಂಗದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್​. ಮಂಜುನಾಥ್​, ಪುಟ್ಟಣ್ಣ ಕಣಗಾಲ್​ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ರೇಣುಕಾ ಶರ್ಮಾ ಸೇರಿದಂತೆ ಅನೇಕರನ್ನು ಸ್ಯಾಂಡಲ್​ವುಡ್​ ಕಳೆದುಕೊಂಡಿದೆ. ಈಗ ಹಿರಿಯ ನಟ ಕೃಷ್ಣೇ ಗೌಡ ಅವರ ನಿಧನದ ಸುದ್ದಿ ಕೇಳಿ ಕನ್ನಡ ಚಿತ್ರರಂಗದನಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ:

Ram Laxman Death: ಹೃದಯಾಘಾತದಿಂದ ರಾಮ್​ ಲಕ್ಷಣ್​ ನಿಧನ; ‘ಹಮ್​ ಆಪ್ಕೆ ಹೈ ಕೌನ್​’ ಚಿತ್ರದ ಸಂಗೀತ ನಿರ್ದೇಶಕ ಇನ್ನಿಲ್ಲ

BA Raju: ಹೃದಯಾಘಾತದಿಂದ ನಿರ್ಮಾಪಕ, ಪ್ರಚಾರಕ ಬಿಎ ರಾಜು ನಿಧನ; ಮಹೇಶ್​ ಬಾಬು ಸಂತಾಪ

Published On - 12:57 pm, Tue, 25 May 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ