AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leelavathi: ನಟಿ ಲೀಲಾವತಿ ಇನ್ನಿಲ್ಲ: ಬಡ ಕಲಾವಿದರಿಗೆ ಪ್ರತಿ ತಿಂಗಳು ಹಣ ಕಳಿಸುತ್ತಿದ್ದ ಹಿರಿಯ ಕಲಾವಿದೆ

86 ವರ್ಷ ತುಂಬು ಜೀವನ ನಡೆಸಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಲೀಲಾವತಿಯವರು ನಟನೆ ಮೂಲಕ ಮಾತ್ರ ಹೆಸರು ಗಳಿಸದೇ ತಮ್ಮ ದಾನದ ಮತ್ತು ಸಹಾಯ ಗುಣಗಳಿಂದ ಮನೆ ಮಾತಾಗಿದ್ದರು. ಕಷ್ಟದಲ್ಲಿರುವ ಬಡ ಕಲಾವಿದರಿಗೆ ನೆರವಾಗುವ ಮೂಲಕ ಕನ್ನಡ ಚಿತ್ರರಂಗದ ಅಮ್ಮ ಎನಿಸಿಕೊಂಡಿದ್ದಾರೆ.

Leelavathi: ನಟಿ ಲೀಲಾವತಿ ಇನ್ನಿಲ್ಲ: ಬಡ ಕಲಾವಿದರಿಗೆ ಪ್ರತಿ ತಿಂಗಳು ಹಣ ಕಳಿಸುತ್ತಿದ್ದ ಹಿರಿಯ ಕಲಾವಿದೆ
ನಟಿ ಲೀಲಾವತಿ
ವಿವೇಕ ಬಿರಾದಾರ
| Edited By: |

Updated on: Dec 08, 2023 | 7:45 PM

Share

ಚಂದನವನದ ಹಿರಿಯ ನಟಿ ಲೀಲಾವತಿ (Leelavathi) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ 15 ದಿನಗಳಿಂದ ಲೀಲಾವತಿ ಅವರ ಆರೋಗ್ಯದಲ್ಲಿ ಸಾಕಷ್ಟು ವ್ಯತ್ಯಾಸಗಳಾಗಿತ್ತು. ಹೀಗಾಗಿ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು, ಜನಪ್ರತಿನಿಧಿಗಳು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇತ್ತೀಚಿಗೆ ನಟಿ ಲೀಲಾವತಿಯವರ ಆಸೆಯಂತೆ ಪುತ್ರ ವಿನೋದ್​ ರಾಜ್ (Vinod Raj)​ ಸೋಲದೇವನಹಳ್ಳಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣ ಮಾಡಿದ್ದರು. ಈ ಆಸ್ಪತ್ರೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಉದ್ಘಾಟಿಸಿದ್ದರು.

ಇದಕ್ಕೂ ಮುನ್ನ 2022ರಲ್ಲಿ ಇದೇ ಸೋಲದೇವನಹಳ್ಳಿಯಲ್ಲಿ ಸ್ವಂತ ಖರ್ಚಿನಲ್ಲಿ ನಟಿ ಲೀಲಾವತಿಯವರು ಆಸ್ಪತ್ರೆ ನಿರ್ಮಿಸಿದ್ದರು. ಇವರ ಸಮಾಜಮುಖಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇಷ್ಟು ಮಾತ್ರವಲ್ಲದೆ ನಟಿ ಲೀಲಾವತಿಯವರು ಬಡ ಕಲಾವಿದರಿಗೂ ನೆರವಾಗಿದ್ದರು. ಇತ್ತೀಚಿಗೆ ನಟಿ ಲೀಲಾವತಿ ಅವರ ಮನೆಗೆ ಹಿರಿಯ ನಟ ವೈಜನಾಥ್​ ಬಿರಾದಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ಅವರು ಲೀಲಾವತಿ ಅವರ ಕೊಡುಗೈ ದಾನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ‘‘ಅಮ್ಮ ಲೀಲಾವತಿ, ಎಂಜಿಆರ್ ಜೊತೆ ನಟಿಸುವಾಗ ಒಮ್ಮೆ ಹೀಗಾಗಿತ್ತು’’

ಕಷ್ಟದಲ್ಲಿ ಇರುವ ಸಹ ಕಲಾವಿದರನ್ನು ಗುರುತಿಸಿ ಅವರಿಗೆ ಲೀಲಾವತಿಯವರು ಮಾಶಾಸನ ನೀಡುತ್ತಿದ್ದರು. ‘ನಟಿ ಲೀಲಾವತಿಯವರು ನನ್ನನ್ನು ಸೇರಿದಂತೆ ಸಾಕಷ್ಟು ಕಲಾವಿದರಿಗೆ ಪ್ರತಿ ತಿಂಗಳು ಹಣವನ್ನು ನೀಡುತ್ತಿದ್ದಾರೆ. ಇದರಿಂದ ಕಷ್ಟದಲ್ಲಿ ಇರುವ ಕಲಾವಿದರಿಗೆ ಸಹಾಯವಾಗುತ್ತಿದೆ. ಬಣ್ಣ ಹಚ್ಚಿದರೆ ಮಾತ್ರ ನಮ್ಮ ಜೀವನ ನಡೆಯುತ್ತದೆ. ಆದರೆ ಕೊರೊನಾ ನಂತರ ಅವಕಾಶ ಕಡಿಮೆಯಾಗಿದೆ. ಇದರಿಂದ ಸಾಕಷ್ಟು ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ನಟಿ ಲೀಲಾವತಿಯವರ ಮಾಶಾಸನ ನೀಡುತ್ತಿದ್ದಾರೆ. ಸರ್ಕಾರ ಮಾಡುವ ಕೆಲಸ ಲೀಲಾವತಿಯವರು ಮಾಡುತ್ತಿದ್ದಾರೆ’ ಎಂದು ನಟ ವೈಜನಾಥ್​ ಬಿರಾದಾರ ಹೇಳಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ