AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದ ಮರೆತು ‘ಮುತ್ತರಸ’ ಸಿನಿಮಾ ಕೆಲಸ ಶುರು ಮಾಡಿದ ಮಡೆನೂರು ಮನು

ನಟ ಮಡೆನೂರು ಮನು ಅವರು ಇತ್ತೇಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಸುದ್ದಿಗೋಷ್ಠಿ ನಡೆಯಿತು. ವಿವಾದಗಳಿಂದ ಹೊರಬಂದಿರುವ ಮನು ಅವರು ಹೊಸ ಸಿನಿಮಾದ ಕೆಲಸ ಆರಂಭಿಸಿದ್ದಾರೆ. ಈ ಚಿತ್ರಕ್ಕೆ ಮುತ್ತರಸ ಎಂದು ಶೀರ್ಷಿಕೆ ಇಡಲಾಗಿದೆ. ನಟರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಹಲವು ಗಣ್ಯರು ಶೀರ್ಷಿಕೆ ಅನಾವರಣ ಮಾಡಿದರು.

ವಿವಾದ ಮರೆತು ‘ಮುತ್ತರಸ’ ಸಿನಿಮಾ ಕೆಲಸ ಶುರು ಮಾಡಿದ ಮಡೆನೂರು ಮನು
Madenur Manu
ಮದನ್​ ಕುಮಾರ್​
|

Updated on: Sep 12, 2025 | 7:16 PM

Share

ಒಂದಷ್ಟು ತಿಂಗಳ ಹಿಂದೆ ನಟ ಮಡೆನೂರು ಮನು (Madenur Manu) ಅವರು ಬರೀ ವಿವಾದದ ಮೂಲಕವೇ ಹೆಚ್ಚು ಸುದ್ದಿ ಆಗಿದ್ದರು. ಅದು ಅವರ ಬದುಕಿನ ಕಹಿ ಅಧ್ಯಾಯ ಆಗಿತ್ತು. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆ ವೇಳೆಯೇ ಅವರ ಹೆಸರು ವಿವಾದದಲ್ಲಿ ಸಿಲುಕಿಕೊಂಡಿತ್ತು. ಈಗ ಅವರು ಅದರಿಂದ ಹೊರಬಂದು ಸಿನಿಮಾ ಕೆಲಸಗಳತ್ತ ಮುಖಮಾಡಿದ್ದಾರೆ. ಇತ್ತೀಚೆಗೆ ಮಡೆನೂರು ಮನು ಅವರು ಹುಟ್ಟುಹಬ್ಬ ಆಚರಿಸಿಕೊಂಡರು. ಈ ಪ್ರಯುಕ್ತ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಆ ಚಿತ್ರಕ್ಕೆ ‘ಮುತ್ತರಸ’ (Muttarasa) ಎಂದು ಶೀರ್ಷಿಕೆ ಇಡಲಾಗಿದೆ.

‘ಜೆ.ಕೆ. ಮೂವೀಸ್’ ಮೂಲಕ ಕೆ.ಎಂ. ನಟರಾಜ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ವಸಿಷ್ಠ ಸಿಂಹ, ಎಂ.ಎಸ್. ಉಮೇಶ್, ಕರಿಸುಬ್ಬು, ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರಿದರು. ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ ಅವರು ಟೈಟಲ್ ಅನಾವರಣ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಡೆನೂರು ಮನು ಅವರು ಮಾತನಾಡಿದರು. ‘ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನೆಲ್ಲ ಮರೆತಿದ್ದೇನೆ. ಈಗ ಯಾವುದೇ ಸಮಸ್ಯೆ ಇಲ್ಲ. ಆ ಸಂದರ್ಭದಲ್ಲಿ ನನ್ನ ಜೊತೆಗೆ ನಿಂತ ಎಲ್ಲರಿಗೂ ನಾನು ಚಿರಋಣಿ . ಇಂದು ನನ್ನ ಹೊಸ ಸಿನಿಮಾದ ಟೈಟಲ್ ಬಿಡುಗಡೆ ಆಗಿದೆ. ವಸಿಷ್ಠ ಸಿಂಹ ಹಾಗೂ ಎಲ್ಲ ಗಣ್ಯರಿಗೆ ಧನ್ಯವಾದಗಳು’ ಎಂದು ಅವರು ಹೇಳಿದರು.

‘ನಾನು ವಸಿಷ್ಠ ಸಿಂಹ ಅವರ ಜೊತೆ ತಲ್ವಾರ್ ಪೇಟೆ ಸಿನಿಮಾದಲ್ಲಿ ನಟಿಸಿದ್ದೆ. ‘ಮುತ್ತರಸ’ ಎಂಬ ಶೀರ್ಷಿಕೆ ಕೊಟ್ಟಿರುವುದು ನಿರ್ದೇಶಕ ರಾಮ್ ನಾರಾಯಣ್. ಮುಂದಿನ ತಿಂಗಳಿನಿಂದ ಈ ಸಿನಿಮಾದ ಶೂಟಿಂಗ್ ಪ್ರಾರಂಭ ಆಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ಪಾತ್ರವರ್ಗದಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ’ ಎಂದಿದ್ದಾರೆ ಮಡೆನೂರು ಮನು.

ಇದನ್ನೂ ಓದಿ: ‘ಜೈಲು ನರಕಯಾತನೆ, ಡಿಪ್ರೆಶನ್​ ಕಾಡುತ್ತೆ’; ದರ್ಶನ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಡೆನೂರು ಮನು

‘ಎನ್.ಆರ್. ರಮೇಶ್, ಶಿವಕುಮಾರ್ ನಾಯಕ್, ಯೋಗರಾಜ್ ಭಟ್, ಸಂತೋಷ್ ಕುಮಾರ್, ವಿದ್ಯಾ, ರಾಮ್ ನಾರಾಯಣ್ ಅವರನ್ನು ನೆನೆಯುತ್ತೇನೆ. ಈ ವರ್ಷದ ಕೊನೆಗೆ ನಾನು ನಟಿಸಿರುವ ‘ವಿಚಾರಣೆ’ ಸಿನಿಮಾ ಕೂಡ ಬಿಡುಗಡೆ ಆಗಲಿದೆ’ ಎಂದು ಮಡೆನೂರು ಮನು ಹೇಳಿದ್ದಾರೆ. ‘ನನ್ನ ಹಿಂದಿನ ನಿರ್ಮಾಣದ ಸಿನಿಮಾದಲ್ಲೂ ಮನು ನಟಿಸಿದ್ದರು. ಈಗ ನನ್ನ ಮತ್ತು ಅವರ ಕಾಂಬಿನೇಷನ್​​ನಲ್ಲಿ 2ನೇ ಸಿನಿಮಾ ಮೂಡಿಬರುತ್ತಿದೆ. ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ’ ಎಂದು ‘ಮುತ್ತರಸ’ ಚಿತ್ರದ ನಿರ್ಮಾಪಕ ನಟರಾಜ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್