AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raju Talikote: ಮುಸ್ಲಿಂ ಸಂಪ್ರದಾಯದಂತೆ ನೆರವೇರಿತು ರಾಜು ತಾಳಿಕೋಟೆ ಅಂತ್ಯಕ್ರಿಯೆ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯ ಖಬರಸ್ತಾನದಲ್ಲಿ ರಾಜು ತಾಳಿಕೋಟೆ ಅವರ ಅಂತ್ಯಕ್ರಿಯೆ ನೆರವೇರಿತು. ರಾಜು ತಾಳಿಕೋಟೆ ಜೊತೆ ನಾಟಕಗಳಲ್ಲಿ ವೇದಿಕೆ ಹಂಚಿಕೊಂಡಿದ್ದ ಅನೇಕ ಕಲಾವಿದರು, ಸ್ಥಳೀಯ ನಾಯಕರು ಅಂತಿಮ ನಮನ ಸಲ್ಲಿಸಿದದರು. ಶಿವಾನಂದ ಪಾಟೀಲ್, ಉಮಾಶ್ರೀ, ಅಶೋಕ ಮನಗೂಳಿ, ಎ.ಎಸ್. ಪಾಟೀಲ್ ನಡಹಳ್ಳಿ ಕೂಡ ರಂಗಾಶ್ರಮಕ್ಕೆ ಬಂದು ಅಂತಿಮ ದರ್ಶನ ಪಡೆದರು.

Raju Talikote: ಮುಸ್ಲಿಂ ಸಂಪ್ರದಾಯದಂತೆ ನೆರವೇರಿತು ರಾಜು ತಾಳಿಕೋಟೆ ಅಂತ್ಯಕ್ರಿಯೆ
Raju Talikote
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 14, 2025 | 8:10 PM

Share

‘ಕಲಿಯುಗದ ಕುಡುಕ’ ನಾಟಕದ ಮೂಲಕ ಉತ್ತರ ಕರ್ನಾಟಕದಲ್ಲಿ ಕ್ಯಾಸೆಟ್ ಕಿಂಗ್ ಎಂದು ಹೆಸರಾಗಿದ್ದ ನಟ ರಾಜು ತಾಳಿಕೋಟೆ (Raju Talikote) ಉಸಿರು ನಿಲ್ಲಿಸಿದ್ದಾರೆ . ರಂಗಭೂಮಿ ಬಳಿಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟು ನಗುವಿನ ಹೊಳೆ ಹರಿಸಿದ್ದ ತಾಳಿಕೋಟೆ ತಮ್ಮ ನಗು ನಿಲ್ಲಿಸಿದ್ದಾರೆ‌. ಹೃದಯಾಘಾತದಿಂದ ಸಾವನ್ನಪ್ಪಿದ ತಾಳಿಕೋಟೆ ಅಂತ್ಯ ಸಂಸ್ಕಾರ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯ ಖಬರಸ್ತಾನದಲ್ಲಿ ನೆರವೇರಿತು. ಮುಸ್ಲಿಂ (Muslim) ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ.

ಹಾಸ್ಯ ಭರಿತ ನಾಟಕಗಳು, ಆಡಿಯೋ ಕ್ಯಾಸೇಟ್‌ಗಳು, ತಮ್ಮ ಹಾಸ್ಯಭರಿತ ನಟನಾ ಶೈಲಿಯಿಂದ ಸ್ಯಾಂಡಲ್‌ವುಡ್‌ನಲ್ಲಿ ಜನಪ್ರಿಯತೆ ಪಡೆದಿದ್ದ ರಾಜು ತಾಳಿಕೋಟೆ ವಿಧಿವಶರಾಗಿದ್ದಾರೆ. ಸಿನಿಮಾ ಶೂಟಿಂಗ್ ಸಲುವಾಗಿ ಉಡುಪಿಗೆ ತೆರಳಿದ್ದ ರಾಜು ತಾಳಿಕೋಟೆಗೆ ಅ.13ರಂದು ಹೃದಯಾಘಾತ ಆಗಿತ್ತು. ಮನಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ‌‌.

ಧಾರವಾಡರ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆಯವರ ಮೃತದೇಹವನ್ನ ಧಾರವಾಡಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಗೀತಗಾಯನದ ಮೂಲಕ ಕಲಾವಿದರು ತಾಳಿಕೋಟೆ ನಿಧನಕ್ಕೆ ಕಂಬಿನಿ ಮಿಡಿದರು. ಧಾರವಾಡ ರಂಗಾಯಣದಲ್ಲಿ 2 ಗಂಟೆಗಳ ಅಂತಿಮ ದರ್ಶನ ಮುಗಿದ ಬಳಿಕ ಮೃತದೇಹವನ್ನು ವಿಜಯಪುರ ಜಿಲ್ಲೆಯ ಚಿಕ್ಕ ಸಿಂದಗಿಯ ತೋಟದ ಮನೆಯಾದ ರಂಗಾಶ್ರಮಕ್ಕೆ ತರಲಾಯಿತು. ಮೃತದೇಹದ ಆಗಮನವಾಗುತ್ತಿದ್ದಂತೆ ಸಹೋದರರು, ಇಬ್ಬರು ಪತ್ನಿಯರು, ಸಹೋದರಿಯರು, ಮೊಮ್ಮಕ್ಕಳು ಬಿಕ್ಕಿಬಿಕ್ಕಿ ಅತ್ತು ಕಣ್ಣೀರಾದರು. ಅವರ ಸಹೋದರಿಯರು, ಒಡನಾಡಿಗಳು ಸಹ‌ಕಲಾವಿದರು ರಾಜೂ ತಾಳಿಕೋಟೆ ನೆನಪುಗಳನ್ನು ನೆನೆದರು.

ರಾಜು ತಾಳಿಕೋಟೆಯವರ ಜೊತೆಗೆ ನಾಟಕಗಳಲ್ಲಿ ವೇದಿಕೆ ಹಂಚಿಕೊಂಡಿದ್ದ ಅನೇಕ ರಂಗಭೂಮಿ ಕಲಾವಿದರು, ಸ್ಥಳೀಯ ನಾಯಕರು ಅಂತಿಮ ದರ್ಶನ ಪಡೆದರು. ಸಚಿವ ಶಿವಾನಂದ ಪಾಟೀಲ್, ಮಾಜಿ ಸಚಿವೆ, ನಟಿ ಉಮಾಶ್ರೀ, ಸಿಂದಗಿ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಸಹ ರಂಗಾಶ್ರಮಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಸಚಿವ ಶಿವಾನಂದ ಪಾಟೀಲ್ ರಾಜು ತಾಳಿಕೋಟೆಯ ಕಲಾಸೇವೆಯನ್ನ ಶ್ಲಾಘಿಸಿದರು. ಹಿರಿಯ ನಟಿ ಉಮಾಶ್ರೀ ಅವರು ರಾಜೂ ತಾಳಿಕೋಟೆ ಅವರೊಂದಿಗೆ ನಟಿಸಿದ ನಾಟಕಗಳ ಕುರಿತು ಹೇಳಿದರು. ರಾಜೂ ತಾಳಿಕೋಟೆ ಸಾಯೋ ವಯಸ್ಸಲ್ಲ ಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: ಹೃದಯಾಘಾತ ಆಗುವುದಕ್ಕೂ ಮುನ್ನ ರಾಜು ತಾಳಿಕೋಟೆ ಸ್ಥಿತಿ ಹೇಗಿತ್ತು? ವಿವರಿಸಿದ ಶೈನ್ ಶೆಟ್ಟಿ

ಮುಸ್ಲಿಂ ಸಂಪ್ರದಾಯದ ವಿಧಿಗಳನ್ನು ನೆರವೇರಿಸಲಾಯಿತು. ತೋಟದ ಮನೆಯಿಂದ ಮೃತ ದೇಹವನ್ನು ಮೆರವಣಿಗೆ ಮೂಲಕ ಚಿಕ್ಕ ಸಿಂದಗಿ ಗ್ರಾಮದ ಖಬರಸ್ತಾನಕ್ಕೆ ತೆಗೆದುಕೊಂಡು ಬರಲಾಯಿತು. ಅಲ್ಲಿ ಅಂತಿಮ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು. ಬಳಿಕ ಅಂತಿಮ ಕ್ರಿಯಾ ವಿಧಾನಗಳು ನಡೆದವು. ಈ ವೇಳೆ ಕಲಾವಿದರು, ಗ್ರಾಮಸ್ಥರು ಸೇರಿದಂತೆ, ಸಾವಿರಾರು ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಗುವಿನ ನಾಯಕನಿಗೆ ಅಂತಿಮ ವಿದಾಯ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?