AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ರೂಪಾಯಿ ಬಜೆಟ್​ನ ಹೊಸ ಚಿತ್ರದಲ್ಲಿ ನಟ ರಿಷಿ; ಜೂನ್​ 2ರಂದು ಸಿಗಲಿದೆ ಚಾಲನೆ

ರಿಷಿ ನಟಿಸಲಿರುವ ಹೊಸ ಸಿನಿಮಾವನ್ನು ‘ಡಿಯರ್ ವಿಕ್ರಂ’ ಖ್ಯಾತಿಯ ಕೆ.ಎಸ್. ನಂದೀಶ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ..

ಬಹುಕೋಟಿ ರೂಪಾಯಿ ಬಜೆಟ್​ನ ಹೊಸ ಚಿತ್ರದಲ್ಲಿ ನಟ ರಿಷಿ; ಜೂನ್​ 2ರಂದು ಸಿಗಲಿದೆ ಚಾಲನೆ
ರಿಷಿ
ಮದನ್​ ಕುಮಾರ್​
|

Updated on: May 20, 2023 | 7:39 PM

Share

ಕನ್ನಡ ಚಿತ್ರರಂಗದಲ್ಲಿ (Kannada Film Industry) ನಟ ರಿಷಿ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ‘ಕವಲುದಾರಿ’ ಮತ್ತು ‘ಆಪರೇಷನ್ ಅಲಮೇಲಮ್ಮ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಅವರು ನಟಿಸುತ್ತಿರುವ ಬಹುಕೋಟಿ ರೂಪಾಯಿ ಬಜೆಟ್​ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ (Rishi) ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿದ್ದಾರೆ. ಕಥೆಯ ಆಯ್ಕೆಯಲ್ಲಿಯೂ ಕೂಡ ತುಂಬಾ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ವಿಶೇಷ. ಅವರ ಹೊಸ ಸಿನಿಮಾ ಚಿತ್ರ ಜೂನ್ 2ರಂದು ಅಧಿಕೃತವಾಗಿ ಆರಂಭವಾಗಲಿದೆ ಎಂಬ ವಿಷಯ ಬಹಿರಂಗ ಆಗಿದೆ. ಸಿನಿಮಾದ ಹೆಸರು, ನಿರ್ಮಾಣ ಸಂಸ್ಥೆ ಮತ್ತು ಪಾತ್ರವರ್ಗದ ಬಗ್ಗೆ ಜೂನ್ 2ರಂದು ಚಿತ್ರತಂಡರಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ.

ರಿಷಿ ಅಭಿನಯಿಸಲಿರುವ ಈ ಚಿತ್ರವನ್ನು ‘ಡಿಯರ್ ವಿಕ್ರಂ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಸ್.ನಂದೀಶ್ ಅವರು ನಿರ್ದೇಶನ ಮಾಡಲಿದ್ದಾರೆ. ತಮ್ಮ ಮೊದಲ ಸಿನಿಮಾ ಒಟಿಟಿ ಪ್ಲಾಟ್​ಫಾರ್ಮ್​ ಮೂಲಕ ಬಿಡುಗಡೆಯಾಗಿ ಯಶಸ್ಸು ಸಾಧಿಸಿರುವುದು ನಿರ್ದೇಶಕರಿಗೆ ಮತ್ತೊಂದು ಚಿತ್ರ ಮಾಡಲು ಹುಮ್ಮಸ್ಸು ನೀಡಿದೆ. ‘ಡಿಯರ್ ವಿಕ್ರಂ’ ಸಿನಿಮಾವನ್ನು ಒಟಿಟಿಯಲ್ಲಿ ನೋಡಿದ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ರೀಮೇಕ್ ಮಾಡಲು ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ‘ನಂಗೆ ವೋಟ್​ ಹಾಕ್ರಿ, ವಿಧಾನಸೌಧ ಮಾರಿ ನಿಮ್ಮ ಸಾಲ ತೀರಿಸ್ತೀನಿ’: ಆಶ್ವಾಸನೆ ಕೊಟ್ಟ ನಟ ರಿಷಿ

ನೈಜ ಘಟನೆಗಳನ್ನು ಆಧರಿಸಿದ ‘ಡಿಯರ್ ವಿಕ್ರಂ’ ಚಿತ್ರವು ನಕ್ಸಲ್ ಮತ್ತು ರಾಜಕೀಯದ ಕುರಿತಾದ ಕತೆಯನ್ನು ಒಳಗೊಂಡಿತ್ತು. ಒಟಿಟಿ ಮೂಲಕ ಬಿಡುಗಡೆಯಾದ ನಂತರ ತುಂಬಾ ಜನ ಇದು ಥಿಯೇಟರ್​ನಲ್ಲಿ ಬಿಡುಗಡೆ ಆಗಬೇಕಾಗಿತ್ತು ಎಂದು ಅನಿಸಿಕೆ ವ್ಯಕ್ತಪಡಿಸಿದ್ದರು. ಆದರೆ ನಿರ್ದೇಶಕರಿಗೆ ಆ ಬಗ್ಗೆ ಬೇಸರ ಇಲ್ಲ. ಯಾಕೆಂದರೆ ಇದು ಒಟಿಟಿ ಜಮಾನಾ.

ಇದನ್ನೂ ಓದಿ: ಶರಣ್ ಈಗ ಎಲೆಕ್ಟ್ರಿಷಿಯನ್; ಹುಟ್ಟುಹಬ್ಬದ ದಿನವೇ ಹೊಸ ಅಪ್​ಡೇಟ್ ನೀಡಿದ ನಟ  

‘ಪ್ರಸ್ತುತ ಕಾಲದಲ್ಲಿ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಅನಿವಾರ್ಯ. ಥಿಯೇಟರ್​​ನಷ್ಟೇ ಒಟಿಟಿ ಕೂಡ ಮನರಂಜನೆಯನ್ನು ಜನಕ್ಕೆ ತಲುಪಿಸುವ ಒಂದು ಮಾಧ್ಯಮ’ ಎಂದು ನಂದೀಶ್​ ಹೇಳಿದ್ದಾರೆ. ಆದರೆ ಈಗ ತಯಾರಿ ನಡೆಯುತ್ತಿರುವ ಹೊಸ ಚಿತ್ರವು ಥಿಯೇಟರ್​​ಗಳಲ್ಲಿ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಹಲವು ಪ್ರಸಿದ್ಧ ನಟರು ಅಭಿನಯಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!