AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sathyajith Death News: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸತ್ಯಜಿತ್ ಇನ್ನಿಲ್ಲ

Sathyajith Passes Away: ಕನ್ನಡದ ಹಿರಿಯ ನಟ ಸತ್ಯಜಿತ್ ಇಂದು (ಭಾನುವಾರ) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Sathyajith Death News: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸತ್ಯಜಿತ್ ಇನ್ನಿಲ್ಲ
ಸತ್ಯಜಿತ್
TV9 Web
| Edited By: |

Updated on:Oct 10, 2021 | 7:27 AM

Share

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ‌ ಬಳಲುತ್ತಿದ್ದ ಕನ್ನಡದ ಖ್ಯಾತ ನಟ ಸತ್ಯಜಿತ್ ಇಂದು (ಭಾನುವಾರ) ನಿಧನಹೊಂದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 2 ಗಂಟೆ ಸುಮಾರಿಗೆ ಸತ್ಯಜಿತ್ ಕೊನೆಯುಸಿರೆಳೆದಿದ್ದಾರೆ ಎಂದು ಟಿವಿ9ಗೆ ಸತ್ಯಜಿತ್ ಪುತ್ರ ಆಕಾಶ್ ಮಾಹಿತಿ ನೀಡಿದ್ದಾರೆ. ಹೆಗಡೆ ನಗರದ ಶಬರಿ ನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 1.30ರ ನಂತರ ಸತ್ಯಜಿತ್ ಅಂತ್ಯಕ್ರಿಯೆ ನಡೆಯಲಿದೆ.

ಸೈಯ್ಯದ್ ನಿಜಾಮುದ್ದೀನ್ ಚಿತ್ರರಂಗದಲ್ಲಿ ಸತ್ಯಜಿತ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. 1986ರಿಂದಲೂ​ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಪ್ಪು, ಅರಸು, ಅಭಿ, ಆಪ್ತಮಿತ್ರ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿದ್ದು, ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆದಿದ್ದರು.

ಸತ್ಯಜಿತ್​ ಅವರಿಗೆ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಬೇಡಿಕೆ ಕಡಿಮೆಯಾಗಿತ್ತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ‘ಸೆಕೆಂಡ್​ ಹಾಫ್​’ ಚಿತ್ರದಲ್ಲಿ ವೀಲ್​ಚೇರ್​ನಲ್ಲಿ ಕುಳಿತುಕೊಂಡೇ ಅವರು ನಟಿಸಿದ್ದರು. ಆ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್​ ಕಾಣಿಸಿಕೊಂಡಿರಲಿಲ್ಲ. ನಟ ಸತ್ಯಜಿತ್, ವಿಲನ್, ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ಪುಟ್ನಂಜ, ಆಪ್ತಮಿತ್ರ, ಚೈತ್ರದ ಪ್ರೇಮಾಂಜಲಿ, ಅರುಣ ರಾಗ, ಶಿವ ಮೆಚ್ಚಿದ ಕಣ್ಣಪ್ಪ, ಯುದ್ಧಕಾಂಡ, ಮಂಡ್ಯದ ಗಂಡು, ಪೊಲೀಸ್ ಸ್ಟೋರಿ, ಅಪ್ಪು, ಧಮ್, ಅಭಿ, ಉಪ್ಪಿ 2, ಮಾಣಿಕ್ಯ, ರನ್ನ, ರಣವಿಕ್ರಮ, ಮೈತ್ರಿ ಸೇರಿ ಹಲವು ಚಿತ್ರಗಳು ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಸತ್ಯಜಿತ್ ನಿಧನದಿಂದ ಕನ್ನಡ ಚಿತ್ರರಂಗ ಆಘಾತಕ್ಕೊಳಗಾಗಿದ್ದು, ಅಭಿಮಾನಿಗಳು ಶೋಕ ವ್ಯಕ್ತಪಡಿಸುತ್ತಿದ್ಧಾರೆ.

ಇದನ್ನೂ ಓದಿ:

Karnataka Weather Today: ಕರ್ನಾಟಕದಲ್ಲಿ ಅ. 13ರವರೆಗೂ ಮಳೆಯ ಅಬ್ಬರ; ಕರಾವಳಿಯಲ್ಲಿಂದು ಹಳದಿ ಅಲರ್ಟ್ ಘೋಷಣೆ

Published On - 6:38 am, Sun, 10 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ