AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

ಸುನೀಲ್​ ಸಿನಿಮಾಗಳ ಶೂಟಿಂಗ್​ಗೆ ತೆರಳುತ್ತಿದ್ದಾಗ ಹೆಚ್ಚಿನ ಸಂದರ್ಭದಲ್ಲಿ ಅವರ ಜೊತೆ ಸಚಿನ್​ ಇರುತ್ತಿದ್ದರು. ಸುನಿಲ್​ ಅಪಘಾತವಾಗಿ ನಿಧನರಾದ ದಿನ ಕೂಡ ಅವರ ಜೊತೆ ಸಚಿನ್ ಇದ್ದರು.

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ
ರಸ್ತೆ ಅಪಘಾತದಲ್ಲಿ ನಿಧನರಾದ ನಟ ಸುನೀಲ್​
ಮದನ್​ ಕುಮಾರ್​
|

Updated on:Jun 11, 2021 | 4:26 PM

Share

ಕನ್ನಡ ಚಿತ್ರರಂಗದಲ್ಲಿ ಆಗತಾನೇ ಮಿಂಚಲು ಆರಂಭಿಸಿದ್ದ ಸ್ಫುರದ್ರೂಪಿ ನಟ ಸುನೀಲ್​ ಅವರು 1994ರಲ್ಲಿ ನಿಧನರಾಗಿದ್ದು ಅವರ ಅಭಿಮಾನಿಗಳನ್ನು ನೋವಿನ ಕಂದಕಕ್ಕೆ ದೂಡಿತ್ತು. ಭೀಕರ ರಸ್ತೆ ಅಪಘಾತದಲ್ಲಿ 1994ರ ಜು.24ರಂದು ಸುನೀಲ್​ ಮೃತಪಟ್ಟರು. ನಿಜಕ್ಕೂ ಅಂದು ಏನು ನಡೆಯಿತು ಎಂಬುದನ್ನು ಅವರ ಮಾವನ ಮಗ ಸಚಿನ್​ ಈಗ ವಿವರಿಸಿದ್ದಾರೆ. ಕನ್ನಡ ಚಿತ್ರರಂಗದ ನಟ, ನಿರ್ದೇಶಕ ರಘುರಾಮ್​ ಅವರು ಇತ್ತೀಚೆಗೆ ಮಾಡಿರುವ ಒಂದು ಸಂದರ್ಶನದಲ್ಲಿ ಆ ಬಗ್ಗೆ ಸಚಿನ್​ ಮಾತನಾಡಿದ್ದಾರೆ.

ಸುನೀಲ್​ ಸಿನಿಮಾಗಳ ಶೂಟಿಂಗ್​ಗೆ ತೆರಳುತ್ತಿದ್ದಾಗ ಹೆಚ್ಚಿನ ಸಂದರ್ಭದಲ್ಲಿ ಅವರ ಜೊತೆ ಸಚಿನ್​ ಇರುತ್ತಿದ್ದರು. ಸುನಿಲ್​ ಅಪಘಾತವಾಗಿ ನಿಧನರಾದ ದಿನ ಕೂಡ ಅವರ ಜೊತೆ ಸಚಿನ್ ಇದ್ದರು. ‘ನಿರಂತರವಾಗಿ ಜರ್ನಿ ಮಾಡುತ್ತ ಇದ್ದೆವು. ಆಗ ಎರಡು ಕಾರ್ಯಕ್ರಮದ ಸಲುವಾಗಿ ಸುನೀಲ್​ ಅವರು ಹೈದರಾಬಾದ್​ನಿಂದ ಕರ್ನಾಟಕಕ್ಕೆ ಬರುತ್ತಿದ್ದರು. ನಮ್ಮ ಡ್ರೈವರ್​ ಬೆಂಗಳೂರಿನಿಂದ ಹೈದರಾಬಾದ್​ಗೆ ಬಂದು ಸುನೀಲ್​ರನ್ನು ಕರೆದುಕೊಂಡು ಬಂದರು’ ಎಂದು ಆ ದಿನದ ಬಗ್ಗೆ ಸಚಿನ್​ ಮಾತು ಆರಂಭಿಸುತ್ತಾರೆ.

‘ಒಂದು ಕಾರ್ಯಕ್ರಮ ಮುಗಿಸಿಕೊಂಡು ರಾತ್ರಿಯೇ ಇನ್ನೊಂದು ಜಾಗಕ್ಕೆ ಹೋದೆವು. ಡ್ರೈವರ್​ಗೆ ಸರಿಯಾಗಿ ನಿದ್ರೆ ಆಗಿರಲಿಲ್ಲ ಎನಿಸುತ್ತದೆ. ಅದೇ ಸಮಸ್ಯೆ ಆಯ್ತು. ಕಾಂಟೆಸಾ ಕಾರಿನಲ್ಲಿ ಚಲಿಸುತ್ತಿದ್ದಾಗ, ನಿನಗೆ ಏನಾದರೂ ನಿದ್ರೆ ಬಂದರೆ ಹೇಳು ಎಂದು ಚಾಲಕನಿಗೆ ಸುನೀಲ್​ ಕೇಳಿದರು. ಅಷ್ಟೇ ನನಗೆ ನೆನಪಿರುವುದು. ಆಮೇಲೆ ಎಚ್ಚರ ಆದಾಗ ಆಸ್ಪತ್ರೆಯಲ್ಲಿ ಇದ್ದೆ’ ಎಂದು ಆ ಭೀಕರ ದಿನವನ್ನು ಸಚಿನ್​ ನೆಪಿಸಿಕೊಂಡಿದ್ದಾರೆ.

‘ಆ ದಿನ ನಾವು ಹೊರಡಬೇಕು ಎಂದುಕೊಂಡಿರಲಿಲ್ಲ. ಒಂದು ದಿನ ಉಳಿದುಕೊಳ್ಳೋಣ ಎನಿಸುತ್ತಿತ್ತು. ಆದರೆ ಡ್ರೈವರ್​ ಮಗಳ ಬರ್ತ್​ಡೇ ಇದೆ ಎಂಬ ಕಾರಣಕ್ಕೆ ನಾವು ಅದೇ ದಿನ ರಾತ್ರಿ ಹೊರೆಟೆವು. ಅಪಘಾತ ಆದ ಬಳಿಕ ನಮ್ಮನ್ನು ಬೆಂಗಳೂರಿಗೆ ಶಿಫ್ಟ್​ ಮಾಡುವಾಗ ಸುನೀಲ್​ ನಿಧನರಾದರು. ನನಗೆ ಎಷ್ಟೋ ದಿನಗಳ ಬಳಿಕ ಪ್ರಜ್ಞೆ ಬಂತು’ ಎಂದಿದ್ದಾರೆ ಸಚಿನ್​.

ಸುನೀಲ್​ ಅವರ ಬಾಲ್ಯದ ಕೆಲವು ವಿವರಗಳನ್ನೂ ಸಚಿನ್​ ಹಂಚಿಕೊಂಡಿದ್ದಾರೆ. ‘ಹುಟ್ಟಿದಾಗ ಅವರಿಗೆ ಸುನಿಲ್​ ಅಂತ ಹೆಸರು ಇಟ್ಟಿದ್ದರು. ನಂತರ ಮೂರು ವರ್ಷದವನಾಗಿದ್ದಾಗ ರಾಮಕೃಷ್ಣ ಅಂತ ಹೆಸರಿಟ್ಟರು. ಅದು ನಮ್ಮ ತಾತನ ಹೆಸರು. ಶಾಲೆಯಲ್ಲೂ ಅದೇ ಹೆಸರು ಇತ್ತು. ನಂತರ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಾಗ ಸುನೀಲ್​ ಅಂತ ಬದಲಾಯಿಸಿಕೊಂಡರು’ ಎಂದು ಸಚಿನ್​ ಹೇಳಿದ್ದಾರೆ.

‘ವಯಸ್ಸಿನಲ್ಲಿ ನನಗೂ ಮತ್ತು ಸುನೀಲ್​ಗೆ 9 ವರ್ಷ ವ್ಯತ್ಯಾಸ. ಆದರೂ ನಮ್ಮಿಬ್ಬರ ನಡುವೆ ಒಳ್ಳೆಯ ಒಡನಾಟ ಇತ್ತು. ಮಂಗಳೂರಿನ ಬ್ರಹ್ಮಾವರದ ಬಳಿ ಇರುವ ಯಡ್ತಾಡಿ ಎಂಬಲ್ಲಿ ಸುನೀಲ್​ ಹುಟ್ಟಿ ಬೆಳೆದಿದ್ದು. ಪಿಯುಸಿವರೆಗೆ ಅಲ್ಲಿಯೇ ಓದಿದ್ದು. ಇಂಜಿನಿಯರಿಂಗ್​ ಮಾಡಲು ಬೆಂಗಳೂರಿಗೆ ಬಂದರು. ಆರ್​ವಿ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಸಿವಿಲ್​ ಬ್ರ್ಯಾಂಚ್​ ಸೇರಿಕೊಂಡರು’ ಎಂದು ಸಚಿನ್​ ಆ ದಿನಗಳನ್ನು ಮೆಲುಕು ಹಾಕಿದ್ದಾರೆ.

‘ಸುನೀಲ್​ಗೆ ಮೂರು ಜನ ಒಡಹುಟ್ಟಿದವರು. ತಂದೆ-ತಾಯಿಗೆ ಸುನೀಲ್​ ನಾಲ್ಕನೇ ಮಗು. ಈಗ ದೊಡ್ಡಕ್ಕ ಬಾರ್ಕೂರಿನಲ್ಲಿ ಇದ್ದಾರೆ. ಎರಡನೇ ಅಕ್ಕ ಬೆಂಗಳೂರಿನಲ್ಲಿ ಇದ್ದಾರೆ. ಒಬ್ಬ ಅಣ್ಣ ಕೂಡ ಬೆಂಗಳೂರಿನಲ್ಲಿಯೇ ಇದ್ದಾರೆ’ ಎಂದು ಮಾಹಿತಿ ನೀಡಿರುವ ಸಚಿನ್​ ಅಮೆರಿಕದಲ್ಲಿ ನೆಲೆಸಿದ್ದಾರೆ.

ಇದನ್ನೂ ಓದಿ:

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

Published On - 4:22 pm, Fri, 11 June 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್