AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

ಸುನೀಲ್​ ಸಿನಿಮಾಗಳ ಶೂಟಿಂಗ್​ಗೆ ತೆರಳುತ್ತಿದ್ದಾಗ ಹೆಚ್ಚಿನ ಸಂದರ್ಭದಲ್ಲಿ ಅವರ ಜೊತೆ ಸಚಿನ್​ ಇರುತ್ತಿದ್ದರು. ಸುನಿಲ್​ ಅಪಘಾತವಾಗಿ ನಿಧನರಾದ ದಿನ ಕೂಡ ಅವರ ಜೊತೆ ಸಚಿನ್ ಇದ್ದರು.

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ
ರಸ್ತೆ ಅಪಘಾತದಲ್ಲಿ ನಿಧನರಾದ ನಟ ಸುನೀಲ್​
ಮದನ್​ ಕುಮಾರ್​
|

Updated on:Jun 11, 2021 | 4:26 PM

Share

ಕನ್ನಡ ಚಿತ್ರರಂಗದಲ್ಲಿ ಆಗತಾನೇ ಮಿಂಚಲು ಆರಂಭಿಸಿದ್ದ ಸ್ಫುರದ್ರೂಪಿ ನಟ ಸುನೀಲ್​ ಅವರು 1994ರಲ್ಲಿ ನಿಧನರಾಗಿದ್ದು ಅವರ ಅಭಿಮಾನಿಗಳನ್ನು ನೋವಿನ ಕಂದಕಕ್ಕೆ ದೂಡಿತ್ತು. ಭೀಕರ ರಸ್ತೆ ಅಪಘಾತದಲ್ಲಿ 1994ರ ಜು.24ರಂದು ಸುನೀಲ್​ ಮೃತಪಟ್ಟರು. ನಿಜಕ್ಕೂ ಅಂದು ಏನು ನಡೆಯಿತು ಎಂಬುದನ್ನು ಅವರ ಮಾವನ ಮಗ ಸಚಿನ್​ ಈಗ ವಿವರಿಸಿದ್ದಾರೆ. ಕನ್ನಡ ಚಿತ್ರರಂಗದ ನಟ, ನಿರ್ದೇಶಕ ರಘುರಾಮ್​ ಅವರು ಇತ್ತೀಚೆಗೆ ಮಾಡಿರುವ ಒಂದು ಸಂದರ್ಶನದಲ್ಲಿ ಆ ಬಗ್ಗೆ ಸಚಿನ್​ ಮಾತನಾಡಿದ್ದಾರೆ.

ಸುನೀಲ್​ ಸಿನಿಮಾಗಳ ಶೂಟಿಂಗ್​ಗೆ ತೆರಳುತ್ತಿದ್ದಾಗ ಹೆಚ್ಚಿನ ಸಂದರ್ಭದಲ್ಲಿ ಅವರ ಜೊತೆ ಸಚಿನ್​ ಇರುತ್ತಿದ್ದರು. ಸುನಿಲ್​ ಅಪಘಾತವಾಗಿ ನಿಧನರಾದ ದಿನ ಕೂಡ ಅವರ ಜೊತೆ ಸಚಿನ್ ಇದ್ದರು. ‘ನಿರಂತರವಾಗಿ ಜರ್ನಿ ಮಾಡುತ್ತ ಇದ್ದೆವು. ಆಗ ಎರಡು ಕಾರ್ಯಕ್ರಮದ ಸಲುವಾಗಿ ಸುನೀಲ್​ ಅವರು ಹೈದರಾಬಾದ್​ನಿಂದ ಕರ್ನಾಟಕಕ್ಕೆ ಬರುತ್ತಿದ್ದರು. ನಮ್ಮ ಡ್ರೈವರ್​ ಬೆಂಗಳೂರಿನಿಂದ ಹೈದರಾಬಾದ್​ಗೆ ಬಂದು ಸುನೀಲ್​ರನ್ನು ಕರೆದುಕೊಂಡು ಬಂದರು’ ಎಂದು ಆ ದಿನದ ಬಗ್ಗೆ ಸಚಿನ್​ ಮಾತು ಆರಂಭಿಸುತ್ತಾರೆ.

‘ಒಂದು ಕಾರ್ಯಕ್ರಮ ಮುಗಿಸಿಕೊಂಡು ರಾತ್ರಿಯೇ ಇನ್ನೊಂದು ಜಾಗಕ್ಕೆ ಹೋದೆವು. ಡ್ರೈವರ್​ಗೆ ಸರಿಯಾಗಿ ನಿದ್ರೆ ಆಗಿರಲಿಲ್ಲ ಎನಿಸುತ್ತದೆ. ಅದೇ ಸಮಸ್ಯೆ ಆಯ್ತು. ಕಾಂಟೆಸಾ ಕಾರಿನಲ್ಲಿ ಚಲಿಸುತ್ತಿದ್ದಾಗ, ನಿನಗೆ ಏನಾದರೂ ನಿದ್ರೆ ಬಂದರೆ ಹೇಳು ಎಂದು ಚಾಲಕನಿಗೆ ಸುನೀಲ್​ ಕೇಳಿದರು. ಅಷ್ಟೇ ನನಗೆ ನೆನಪಿರುವುದು. ಆಮೇಲೆ ಎಚ್ಚರ ಆದಾಗ ಆಸ್ಪತ್ರೆಯಲ್ಲಿ ಇದ್ದೆ’ ಎಂದು ಆ ಭೀಕರ ದಿನವನ್ನು ಸಚಿನ್​ ನೆಪಿಸಿಕೊಂಡಿದ್ದಾರೆ.

‘ಆ ದಿನ ನಾವು ಹೊರಡಬೇಕು ಎಂದುಕೊಂಡಿರಲಿಲ್ಲ. ಒಂದು ದಿನ ಉಳಿದುಕೊಳ್ಳೋಣ ಎನಿಸುತ್ತಿತ್ತು. ಆದರೆ ಡ್ರೈವರ್​ ಮಗಳ ಬರ್ತ್​ಡೇ ಇದೆ ಎಂಬ ಕಾರಣಕ್ಕೆ ನಾವು ಅದೇ ದಿನ ರಾತ್ರಿ ಹೊರೆಟೆವು. ಅಪಘಾತ ಆದ ಬಳಿಕ ನಮ್ಮನ್ನು ಬೆಂಗಳೂರಿಗೆ ಶಿಫ್ಟ್​ ಮಾಡುವಾಗ ಸುನೀಲ್​ ನಿಧನರಾದರು. ನನಗೆ ಎಷ್ಟೋ ದಿನಗಳ ಬಳಿಕ ಪ್ರಜ್ಞೆ ಬಂತು’ ಎಂದಿದ್ದಾರೆ ಸಚಿನ್​.

ಸುನೀಲ್​ ಅವರ ಬಾಲ್ಯದ ಕೆಲವು ವಿವರಗಳನ್ನೂ ಸಚಿನ್​ ಹಂಚಿಕೊಂಡಿದ್ದಾರೆ. ‘ಹುಟ್ಟಿದಾಗ ಅವರಿಗೆ ಸುನಿಲ್​ ಅಂತ ಹೆಸರು ಇಟ್ಟಿದ್ದರು. ನಂತರ ಮೂರು ವರ್ಷದವನಾಗಿದ್ದಾಗ ರಾಮಕೃಷ್ಣ ಅಂತ ಹೆಸರಿಟ್ಟರು. ಅದು ನಮ್ಮ ತಾತನ ಹೆಸರು. ಶಾಲೆಯಲ್ಲೂ ಅದೇ ಹೆಸರು ಇತ್ತು. ನಂತರ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಾಗ ಸುನೀಲ್​ ಅಂತ ಬದಲಾಯಿಸಿಕೊಂಡರು’ ಎಂದು ಸಚಿನ್​ ಹೇಳಿದ್ದಾರೆ.

‘ವಯಸ್ಸಿನಲ್ಲಿ ನನಗೂ ಮತ್ತು ಸುನೀಲ್​ಗೆ 9 ವರ್ಷ ವ್ಯತ್ಯಾಸ. ಆದರೂ ನಮ್ಮಿಬ್ಬರ ನಡುವೆ ಒಳ್ಳೆಯ ಒಡನಾಟ ಇತ್ತು. ಮಂಗಳೂರಿನ ಬ್ರಹ್ಮಾವರದ ಬಳಿ ಇರುವ ಯಡ್ತಾಡಿ ಎಂಬಲ್ಲಿ ಸುನೀಲ್​ ಹುಟ್ಟಿ ಬೆಳೆದಿದ್ದು. ಪಿಯುಸಿವರೆಗೆ ಅಲ್ಲಿಯೇ ಓದಿದ್ದು. ಇಂಜಿನಿಯರಿಂಗ್​ ಮಾಡಲು ಬೆಂಗಳೂರಿಗೆ ಬಂದರು. ಆರ್​ವಿ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಸಿವಿಲ್​ ಬ್ರ್ಯಾಂಚ್​ ಸೇರಿಕೊಂಡರು’ ಎಂದು ಸಚಿನ್​ ಆ ದಿನಗಳನ್ನು ಮೆಲುಕು ಹಾಕಿದ್ದಾರೆ.

‘ಸುನೀಲ್​ಗೆ ಮೂರು ಜನ ಒಡಹುಟ್ಟಿದವರು. ತಂದೆ-ತಾಯಿಗೆ ಸುನೀಲ್​ ನಾಲ್ಕನೇ ಮಗು. ಈಗ ದೊಡ್ಡಕ್ಕ ಬಾರ್ಕೂರಿನಲ್ಲಿ ಇದ್ದಾರೆ. ಎರಡನೇ ಅಕ್ಕ ಬೆಂಗಳೂರಿನಲ್ಲಿ ಇದ್ದಾರೆ. ಒಬ್ಬ ಅಣ್ಣ ಕೂಡ ಬೆಂಗಳೂರಿನಲ್ಲಿಯೇ ಇದ್ದಾರೆ’ ಎಂದು ಮಾಹಿತಿ ನೀಡಿರುವ ಸಚಿನ್​ ಅಮೆರಿಕದಲ್ಲಿ ನೆಲೆಸಿದ್ದಾರೆ.

ಇದನ್ನೂ ಓದಿ:

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

Published On - 4:22 pm, Fri, 11 June 21

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ