AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಸೇರಿದ ಹಿರಿಯ ನಟ ಉಮೇಶ್ ಪರೀಕ್ಷೆ ವೇಳೆ ವೈದ್ಯರಿಗೆ ಗೊತ್ತಾಯ್ತು ಶಾಕಿಂಗ್ ವಿಚಾರ

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಬಾತ್‌ರೂಂನಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ 80 ವರ್ಷದ ಉಮೇಶ್ ಅವರಿಗೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ವೈದ್ಯರು ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸುವ ಮೂಲಕ ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಮತ್ತು ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆ ಸೇರಿದ ಹಿರಿಯ ನಟ ಉಮೇಶ್ ಪರೀಕ್ಷೆ ವೇಳೆ ವೈದ್ಯರಿಗೆ ಗೊತ್ತಾಯ್ತು ಶಾಕಿಂಗ್ ವಿಚಾರ
ಉಮೇಶ್
ರಾಜೇಶ್ ದುಗ್ಗುಮನೆ
|

Updated on: Oct 11, 2025 | 3:16 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಮನೆಯ ಬಾತ್​ರೂಂನಲ್ಲಿ ಕಾಲು ಜಾರಿ ಬಿದ್ದಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರಿಗೆ 80 ವರ್ಷ. ಪರೀಕ್ಷೆ ಮಾಡುವ ವೇಳೆ ಒಂದು ಶಾಕಿಂಗ್ ವಿಚಾರ ರಿವೀಲ್ ಆಗಿದೆ. ಅವರಿಗೆ ಲಿವರ್ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರೋಗವನ್ನು ಖಚಿತಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಜಾರಿ ಬಿದ್ದ ವೇಳೆ ಉಮೇಶ್ ಅವರ ಮೂಳೆಗೆ ಏಟಾಗಿತ್ತು. ಇಂದು (ಅಕ್ಟೋಬರ್ 11) ಸರ್ಜರಿ ಮಾಡುವ ಪ್ಲ್ಯಾನ್ ಇತ್ತು. ಈ ವೇಳೆ ಲಿವರ್​ನಲ್ಲಿ ಹಾನಿ ಉಂಟುಮಾಡುವ ಗಡ್ಡೆ ಇರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ವೈದ್ಯರು ಅವರ ಕುಟುಂಬದ ಜೊತೆ ಚರ್ಚೆ ಮಾಡಿದ್ದಾರೆ.

ಸದ್ಯ ವೈದ್ಯರ ಪರೀಕ್ಷೆ ಪ್ರಕಾರ ಲಿವರ್​ನಲ್ಲಿ ಕ್ಯಾನ್ಸರ್ ಉಂಟಾಗಿದ್ದು, ಅದು ಬೇರೆ ಅಂಗಗಳಿಗೆ ಸ್ಪ್ರೆಡ್ ಆಗಿದೆ. ‘ಉಮೇಶ್ ಅವರು ನೋಡಲು ಆರೋಗ್ಯವಾಗಿಯೇ ಕಾಣಿಸಿದ್ದಾರೆ. ಆದರೆ, ಕ್ಯಾನ್ಸರ್ ಇದೆ. ಇದನ್ನು ಖಚಿತಪಡಿಸಲು ಕೆಲವು ಟೆಸ್ಟ್ ಮಾಡಬೇಕಿದೆ. ಲಿವರ್ ಒಳಗೆ ಇರೋ ಗಡ್ಡೆಯನ್ನು ತೆಗೆದು ಪರೀಕ್ಷೆಗೆ ಕಳುಹಿಸಬೇಕಿದೆ’ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು

‘ಕಿಮೋಥೆರಪಿ‌‌, ಇಮಿನೋಥೆರಪಿ ಮಾಡಬೇಕಾಗಿದೆ. ಕ್ಯಾನ್ಸರ್ ಸ್ಪೆಶಲಿಸ್ಟ್ ಬಂದಿದ್ದಾರೆ. ಇಂಜೆಕ್ಷನ್ ಅಲ್ಲಿ ಗಡ್ಡೆ ಕರಗಿಸೋ ಪ್ರಯತ್ನ ನಡೆಯುತ್ತಿದೆ. ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ. ರಿಕವರಿ ಆಗುವ ಚಾನ್ಸ್ ಇದೆ’ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಕಾಲು ಜಾರಿ ಬಿದ್ದ ಹಿರಿಯ ನಟ ಎಂ.ಎಸ್. ಉಮೇಶ್: ಆಸ್ಪತ್ರೆಗೆ ದಾಖಲು

ಸದ್ಯ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆಯಿಂದ ಬಂದ ಮಾಹಿತಿಗಳನ್ನು ಇಟ್ಟುಕೊಂಡು ಉಮೇಶ್​ಗೆ ಕ್ಯಾನ್ಸರ್ ಇದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸಂಪೂರ್ಣ ಪರೀಕ್ಷೆ ಬಳಿಕ ಅಸಲಿ ವಿಚಾರ ಏನು ಎಂಬ ವಿಚಾರ ರಿವೀಲ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ