AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niveditha Shivarajkumar: ಸಿನಿಮಾ ನಿರ್ಮಾಪಕಿ ಆದ ಶಿವರಾಜ್​ಕುಮಾರ್​ ಪುತ್ರಿ ನಿವೇದಿತಾ; ಮೊದಲ ಚಿತ್ರದ ಬಗ್ಗೆ ಸಿಕ್ತು ಮಾಹಿತಿ

Shri Mutthu Cine Services: ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಸಂಸ್ಥೆಯನ್ನು ನಿವೇದಿತಾ ಶಿವರಾಜ್​ಕುಮಾರ್​ ಅವರು ಮುನ್ನಡೆಸುತ್ತಿದ್ದಾರೆ. ಅವರು ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ವಂಶಿ ಹೀರೋ ಆಗಿದ್ದಾರೆ.

Niveditha Shivarajkumar: ಸಿನಿಮಾ ನಿರ್ಮಾಪಕಿ ಆದ ಶಿವರಾಜ್​ಕುಮಾರ್​ ಪುತ್ರಿ ನಿವೇದಿತಾ; ಮೊದಲ ಚಿತ್ರದ ಬಗ್ಗೆ ಸಿಕ್ತು ಮಾಹಿತಿ
ವಂಶಿ, ನಿವೇದಿತಾ ಶಿವರಾಜ್​ಕುಮಾರ್
ಮದನ್​ ಕುಮಾರ್​
|

Updated on: May 01, 2023 | 4:26 PM

Share

ಮುಖ್ಯಾಂಶಗಳು

  • ಸಿನಿಮಾ ನಿರ್ಮಾಣದಲ್ಲಿ ಅಣ್ಣಾವ್ರ ಕುಟುಂಬಕ್ಕೆ ಅಪಾರ ಅನುಭವ ಇದೆ
  • ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಈ ಕುಟುಂಬಕ್ಕೆ ಸಲ್ಲುತ್ತದೆ
  • ನಿವೇದಿತಾ ಶಿವರಾಜ್​ಕುಮಾರ್ ನಿರ್ಮಾಣದ ಮೊದಲ ಚಿತ್ರಕ್ಕೆ ವಂಶಿ ಹೀರೋ

ಡಾ. ರಾಜ್​ಕುಮಾರ್ ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ತೊಡಗಿಕೊಂಡಿದೆ. ಕೆಲವರು ತೆರೆಮೇಲೆ ಮಿಂಚಿದರೆ, ಇನ್ನುಳಿದವರು ತೆರೆಹಿಂದೆ ಬ್ಯುಸಿ ಆಗಿದ್ದಾರೆ. ಶಿವರಾಜ್​ಕುಮಾರ್​ (Niveditha Shivarajkumar) ಅವರ ಪುತ್ರಿ ನಿವೇದಿತಾ ಅವರು ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಸಂಸ್ಥೆ ಮೂಲಕ ಈಗಾಗಲೇ ಸೀರಿಯಲ್​ ಮತ್ತು ವೆಬ್​ ಸೀರಿಸ್​ಗಳು​ ನಿರ್ಮಾಣ ಆಗಿವೆ. ಈಗ ಇದೇ ಮೊದಲ ಬಾರಿಗೆ ಸಿನಿಮಾವೊಂದನ್ನು ನಿರ್ಮಿಸಲು ನಿವೇದಿತಾ ಶಿವರಾಜ್​ಕುಮಾರ್ (Niveditha Shivarajkumar)​ ಮುಂದಾಗಿದ್ದಾರೆ. ಈ ಬಗ್ಗೆ ಈಗ ಅಪ್​ಡೇಟ್​ ಸಿಕ್ಕಿದೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್​’ (Shri Mutthu Cine Services) ಬ್ಯಾನರ್​ನಡಿ ಸಿದ್ಧವಾಗಲಿರುವ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಒಂದಷ್ಟು ಮಾಹಿತಿ ಬಿಟ್ಟು ಕೊಡಲಾಗಿದೆ.

ಶಿವರಾಜ್​ಕುಮಾರ್​ ಅವರು ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾರೆ. ಅದೇ ರೀತಿ ನಿವೇದಿತಾ ಶಿವರಾಜ್​ಕುಮಾರ್​ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್​’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ. ‘ಹೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ. ಹುಟ್ಟು-ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ’ ಎಂಬ ಪೋಸ್ಟರ್ ಮೂಲಕ ನಿವೇದಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಸೇರಿದ ಗೀತಾ ಶಿವರಾಜ್​ಕುಮಾರ್​ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

ಇದನ್ನೂ ಓದಿ
Image
ಈ ಬಾರಿಯ ಲಾಲ್​ಬಾಗ್ ಫ್ಲಾವರ್ ಶೋ ಮೂಲಕ ಡಾ ರಾಜ್ ಮತ್ತು ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ!
Image
Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
Image
ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು; ನಟಿ ಲಕ್ಷ್ಮೀ
Image
‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

ನಿವೇದಿತಾ ನಿರ್ಮಾಣದ ಮೊದಲ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಮೂಲಕ ಮೂಡಿಬಂದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಅವರು ಕೆಲಸ ಮಾಡಿದ್ದರು. ಇತ್ತೀಚೆಗೆ ಬಂದ ‘ಪೆಂಟಗನ್​’ ಚಿತ್ರದಲ್ಲೂ ಒಂದು ಪ್ರಮುಖ ಪಾತ್ರ ಮಾಡಿದ್ದರು. ಈಗ ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಆ ಹೆಣ್ಮಕ್ಕಳಿಗೆ ಒಳ್ಳೇ ಹೆಸರು ಬಂದಿದ್ದು ಖುಷಿ’: ‘ವೇದ’ ಗೆಲುವಿನ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಮಾತು

ಸಿನಿಮಾ ನಿರ್ಮಾಣದಲ್ಲಿ ಅಣ್ಣಾವ್ರ ಕುಟುಂಬಕ್ಕೆ ಅಪಾರ ಅನುಭವ ಇದೆ. ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಈ ಕುಟುಂಬಕ್ಕೆ ಸಲ್ಲುತ್ತದೆ. ಡಾ. ಪಾರ್ವತಮ್ಮ ರಾಜ್​ಕುಮಾರ್​ ಅವರು ‘ಪೂರ್ಣಿಮಾ ಎಂಟರ್ ಪ್ರೈಸನ್’ ಮೂಲಕ ಅನೇಕ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದರು. ‘ಗೀತಾ ಪಿಕ್ಚರ್ಸ್’ ಮೂಲಕ ಗೀತಾ ಶಿವರಾಜ್​ಕುಮಾರ್ ಅವರು ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಆರಂಭಿಸಿದ್ದ ‘ಪಿಆರ್​ಕೆ’ ಪ್ರೊಡಕ್ಷನ್ ಸಂಸ್ಥೆಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಮುಂದುವರಿಸಿಕೊಂಡು ಹೋಗತ್ತಿದ್ದಾರೆ. ಅದೇ ರೀತಿ ನಿವೇದಿತಾ ಶಿವರಾಜ್​ಕುಮಾರ್ ಅವರು ತಮ್ಮ ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಮೂಲಕ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ