Niveditha Shivarajkumar: ಸಿನಿಮಾ ನಿರ್ಮಾಪಕಿ ಆದ ಶಿವರಾಜ್​ಕುಮಾರ್​ ಪುತ್ರಿ ನಿವೇದಿತಾ; ಮೊದಲ ಚಿತ್ರದ ಬಗ್ಗೆ ಸಿಕ್ತು ಮಾಹಿತಿ

Shri Mutthu Cine Services: ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಸಂಸ್ಥೆಯನ್ನು ನಿವೇದಿತಾ ಶಿವರಾಜ್​ಕುಮಾರ್​ ಅವರು ಮುನ್ನಡೆಸುತ್ತಿದ್ದಾರೆ. ಅವರು ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ವಂಶಿ ಹೀರೋ ಆಗಿದ್ದಾರೆ.

Niveditha Shivarajkumar: ಸಿನಿಮಾ ನಿರ್ಮಾಪಕಿ ಆದ ಶಿವರಾಜ್​ಕುಮಾರ್​ ಪುತ್ರಿ ನಿವೇದಿತಾ; ಮೊದಲ ಚಿತ್ರದ ಬಗ್ಗೆ ಸಿಕ್ತು ಮಾಹಿತಿ
ವಂಶಿ, ನಿವೇದಿತಾ ಶಿವರಾಜ್​ಕುಮಾರ್
Follow us
|

Updated on: May 01, 2023 | 4:26 PM

ಡಾ. ರಾಜ್​ಕುಮಾರ್ ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ತೊಡಗಿಕೊಂಡಿದೆ. ಕೆಲವರು ತೆರೆಮೇಲೆ ಮಿಂಚಿದರೆ, ಇನ್ನುಳಿದವರು ತೆರೆಹಿಂದೆ ಬ್ಯುಸಿ ಆಗಿದ್ದಾರೆ. ಶಿವರಾಜ್​ಕುಮಾರ್​ (Niveditha Shivarajkumar) ಅವರ ಪುತ್ರಿ ನಿವೇದಿತಾ ಅವರು ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಸಂಸ್ಥೆ ಮೂಲಕ ಈಗಾಗಲೇ ಸೀರಿಯಲ್​ ಮತ್ತು ವೆಬ್​ ಸೀರಿಸ್​ಗಳು​ ನಿರ್ಮಾಣ ಆಗಿವೆ. ಈಗ ಇದೇ ಮೊದಲ ಬಾರಿಗೆ ಸಿನಿಮಾವೊಂದನ್ನು ನಿರ್ಮಿಸಲು ನಿವೇದಿತಾ ಶಿವರಾಜ್​ಕುಮಾರ್ (Niveditha Shivarajkumar)​ ಮುಂದಾಗಿದ್ದಾರೆ. ಈ ಬಗ್ಗೆ ಈಗ ಅಪ್​ಡೇಟ್​ ಸಿಕ್ಕಿದೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್​’ (Shri Mutthu Cine Services) ಬ್ಯಾನರ್​ನಡಿ ಸಿದ್ಧವಾಗಲಿರುವ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಒಂದಷ್ಟು ಮಾಹಿತಿ ಬಿಟ್ಟು ಕೊಡಲಾಗಿದೆ.

ಶಿವರಾಜ್​ಕುಮಾರ್​ ಅವರು ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾರೆ. ಅದೇ ರೀತಿ ನಿವೇದಿತಾ ಶಿವರಾಜ್​ಕುಮಾರ್​ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್​’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ. ‘ಹೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ. ಹುಟ್ಟು-ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ’ ಎಂಬ ಪೋಸ್ಟರ್ ಮೂಲಕ ನಿವೇದಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಸೇರಿದ ಗೀತಾ ಶಿವರಾಜ್​ಕುಮಾರ್​ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

ಇದನ್ನೂ ಓದಿ
Image
ಈ ಬಾರಿಯ ಲಾಲ್​ಬಾಗ್ ಫ್ಲಾವರ್ ಶೋ ಮೂಲಕ ಡಾ ರಾಜ್ ಮತ್ತು ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ!
Image
Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
Image
ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು; ನಟಿ ಲಕ್ಷ್ಮೀ
Image
‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

ನಿವೇದಿತಾ ನಿರ್ಮಾಣದ ಮೊದಲ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಮೂಲಕ ಮೂಡಿಬಂದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಅವರು ಕೆಲಸ ಮಾಡಿದ್ದರು. ಇತ್ತೀಚೆಗೆ ಬಂದ ‘ಪೆಂಟಗನ್​’ ಚಿತ್ರದಲ್ಲೂ ಒಂದು ಪ್ರಮುಖ ಪಾತ್ರ ಮಾಡಿದ್ದರು. ಈಗ ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಆ ಹೆಣ್ಮಕ್ಕಳಿಗೆ ಒಳ್ಳೇ ಹೆಸರು ಬಂದಿದ್ದು ಖುಷಿ’: ‘ವೇದ’ ಗೆಲುವಿನ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಮಾತು

ಸಿನಿಮಾ ನಿರ್ಮಾಣದಲ್ಲಿ ಅಣ್ಣಾವ್ರ ಕುಟುಂಬಕ್ಕೆ ಅಪಾರ ಅನುಭವ ಇದೆ. ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಈ ಕುಟುಂಬಕ್ಕೆ ಸಲ್ಲುತ್ತದೆ. ಡಾ. ಪಾರ್ವತಮ್ಮ ರಾಜ್​ಕುಮಾರ್​ ಅವರು ‘ಪೂರ್ಣಿಮಾ ಎಂಟರ್ ಪ್ರೈಸನ್’ ಮೂಲಕ ಅನೇಕ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದರು. ‘ಗೀತಾ ಪಿಕ್ಚರ್ಸ್’ ಮೂಲಕ ಗೀತಾ ಶಿವರಾಜ್​ಕುಮಾರ್ ಅವರು ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಆರಂಭಿಸಿದ್ದ ‘ಪಿಆರ್​ಕೆ’ ಪ್ರೊಡಕ್ಷನ್ ಸಂಸ್ಥೆಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಮುಂದುವರಿಸಿಕೊಂಡು ಹೋಗತ್ತಿದ್ದಾರೆ. ಅದೇ ರೀತಿ ನಿವೇದಿತಾ ಶಿವರಾಜ್​ಕುಮಾರ್ ಅವರು ತಮ್ಮ ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಮೂಲಕ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ