AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್

2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದರು.

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್
ವೀರೇಂದ್ರ ಬಾಬು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 12, 2023 | 10:24 AM

Share

ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಆರೋಪಿ ವೀರೇಂದ್ರ ಬಾಬು (Veerendra Babu) ಅವರನ್ನು ಅರೆಸ್ಟ್ ಮಾಡಿದ್ದಾರೆ. ವೀರೇಂದ್ರ ಅವರು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ತೋರಿಸಿ 15 ಲಕ್ಷ ರೂಪಾಯಿ ನೀಡುವಂತೆ ವೀರೇಂದ್ರ ಬಾಬು ಬ್ಲಾಕ್​ಮೇಲ್ ಮಾಡಿದ್ದರು ಎನ್ನುವ ಆರೋಪ ಇದೆ.

2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಹೇಳಿದ್ದರು. ಅಂದು ಒಡವೆ ಮಾರಿ ಹಣ ನೀಡಿ ಸುಮ್ಮನಾಗಿದ್ದರು.

ಆದರೆ ಕಳೆದ ಜುಲೈ 30ರಂದು ಮತ್ತೆ ಮಹಿಳೆಯನ್ನು ವೀರೇಂದ್ರ ಬಾಬು ಕರೆಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಕಾರಿನಲ್ಲಿ ತಮ್ಮನ್ನು ಸುತ್ತಾಡಿಸಿ, ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರುವ ಆರೋಪ‌‌ವನ್ನು ಮಹಿಳೆ ಮಾಡಿದ್ದಾರೆ. ಗನ್ ಇಟ್ಟು ಬೆದರಿಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ

ಈ ಘಟನೆಗೆ ಸಂಬಂಧಿಸಿ ಮಹಿಳೆ ದೂರು ದಾಖಲು ಮಾಡಿದ್ದಾರೆ. ಇದನ್ನು ಆಧರಿಸಿ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಆರೋಪದಡಿ ವೀರೇಂದ್ರ ಬಾಬು ಹಾಗೂ ಸ್ನೇಹಿತರ ಮೇಲೆ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸದ್ಯ ಕೊಡಿಗೆಹಳ್ಳಿ ಪೊಲೀಸರಿಂದ ಅರೋಪಿ ಅರೆಸ್ಟ್ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್