AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್

2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದರು.

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್
ವೀರೇಂದ್ರ ಬಾಬು
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಾಜೇಶ್ ದುಗ್ಗುಮನೆ|

Updated on: Aug 12, 2023 | 10:24 AM

Share

ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಆರೋಪಿ ವೀರೇಂದ್ರ ಬಾಬು (Veerendra Babu) ಅವರನ್ನು ಅರೆಸ್ಟ್ ಮಾಡಿದ್ದಾರೆ. ವೀರೇಂದ್ರ ಅವರು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ತೋರಿಸಿ 15 ಲಕ್ಷ ರೂಪಾಯಿ ನೀಡುವಂತೆ ವೀರೇಂದ್ರ ಬಾಬು ಬ್ಲಾಕ್​ಮೇಲ್ ಮಾಡಿದ್ದರು ಎನ್ನುವ ಆರೋಪ ಇದೆ.

2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಹೇಳಿದ್ದರು. ಅಂದು ಒಡವೆ ಮಾರಿ ಹಣ ನೀಡಿ ಸುಮ್ಮನಾಗಿದ್ದರು.

ಆದರೆ ಕಳೆದ ಜುಲೈ 30ರಂದು ಮತ್ತೆ ಮಹಿಳೆಯನ್ನು ವೀರೇಂದ್ರ ಬಾಬು ಕರೆಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಕಾರಿನಲ್ಲಿ ತಮ್ಮನ್ನು ಸುತ್ತಾಡಿಸಿ, ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರುವ ಆರೋಪ‌‌ವನ್ನು ಮಹಿಳೆ ಮಾಡಿದ್ದಾರೆ. ಗನ್ ಇಟ್ಟು ಬೆದರಿಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ

ಈ ಘಟನೆಗೆ ಸಂಬಂಧಿಸಿ ಮಹಿಳೆ ದೂರು ದಾಖಲು ಮಾಡಿದ್ದಾರೆ. ಇದನ್ನು ಆಧರಿಸಿ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಆರೋಪದಡಿ ವೀರೇಂದ್ರ ಬಾಬು ಹಾಗೂ ಸ್ನೇಹಿತರ ಮೇಲೆ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸದ್ಯ ಕೊಡಿಗೆಹಳ್ಳಿ ಪೊಲೀಸರಿಂದ ಅರೋಪಿ ಅರೆಸ್ಟ್ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ