AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ವಿಜಯ್ ರಾಘವೇಂದ್ರ-ಸ್ಪಂದನಾ ಬ್ಯಾಂಕಾಕ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ
ರಾಜೇಶ್ ದುಗ್ಗುಮನೆ
|

Updated on:Aug 07, 2023 | 11:05 AM

Share

ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಅಭಿಮಾನಿಗಳಿಗೆ ಬೇಸರದ ಸುದ್ದಿ ಸಿಕ್ಕಿದೆ. ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಬ್ಯಾಂಕಾಕ್​​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಪುನೀತ್ ರಾಜ್​ಕುಮಾರ್ ಸೇರಿ ಅನೇಕ ಸೆಲೆಬ್ರಿಟಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈಗ ಸ್ಪಂದನಾ ಕೂಡ ನಿಧನ ಹೊಂದಿದ್ದು ನಿಜಕ್ಕೂ ಶಾಕಿಂಗ್ ಆಗಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

ಸ್ಪಂದನಾ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಅವರ ತಂದೆ ಬಿಕೆ ಶಿವರಾಮ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2007ರ ಆಗಸ್ಟ್ 26ರಂದು ವಿಜಯ್-ಸ್ಪಂದನಾ ಮದುವೆ ನಡೆಯಿತು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ. ಈಗ ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಸಂದರ್ಶನ: ಸೋಲೋ ಆ್ಯಕ್ಟರ್ ಸಿನಿಮಾ ಅನುಭವ ಹಂಚಿಕೊಂಡ ‘ರಾಘು’

2016ರಲ್ಲಿ ಸ್ಪಂದನಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ವಿ. ರವಿಚಂದ್ರನ್ ನಿರ್ದೇಶನದ ‘ಅಪೂರ್ವ’ ಸಿನಿಮಾದಲ್ಲಿ ಸ್ಪಂದನಾ ನಟಿಸಿದ್ದರು. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿಯಾಗಿ ಅವರು ನಟಿಸಿದ್ದರು. ಈಗ ಸ್ಪಂದನಾ ಸಾವಿನ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ವಿಜಯ್ ಅವರಿಗೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ದೇವರಲ್ಲಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Mon, 7 August 23

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ