Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ವಿಜಯ್ ರಾಘವೇಂದ್ರ-ಸ್ಪಂದನಾ ಬ್ಯಾಂಕಾಕ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ
Follow us
ರಾಜೇಶ್ ದುಗ್ಗುಮನೆ
|

Updated on:Aug 07, 2023 | 11:05 AM

ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಅಭಿಮಾನಿಗಳಿಗೆ ಬೇಸರದ ಸುದ್ದಿ ಸಿಕ್ಕಿದೆ. ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಬ್ಯಾಂಕಾಕ್​​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಪುನೀತ್ ರಾಜ್​ಕುಮಾರ್ ಸೇರಿ ಅನೇಕ ಸೆಲೆಬ್ರಿಟಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈಗ ಸ್ಪಂದನಾ ಕೂಡ ನಿಧನ ಹೊಂದಿದ್ದು ನಿಜಕ್ಕೂ ಶಾಕಿಂಗ್ ಆಗಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

ಸ್ಪಂದನಾ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಅವರ ತಂದೆ ಬಿಕೆ ಶಿವರಾಮ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2007ರ ಆಗಸ್ಟ್ 26ರಂದು ವಿಜಯ್-ಸ್ಪಂದನಾ ಮದುವೆ ನಡೆಯಿತು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ. ಈಗ ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಸಂದರ್ಶನ: ಸೋಲೋ ಆ್ಯಕ್ಟರ್ ಸಿನಿಮಾ ಅನುಭವ ಹಂಚಿಕೊಂಡ ‘ರಾಘು’

2016ರಲ್ಲಿ ಸ್ಪಂದನಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ವಿ. ರವಿಚಂದ್ರನ್ ನಿರ್ದೇಶನದ ‘ಅಪೂರ್ವ’ ಸಿನಿಮಾದಲ್ಲಿ ಸ್ಪಂದನಾ ನಟಿಸಿದ್ದರು. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿಯಾಗಿ ಅವರು ನಟಿಸಿದ್ದರು. ಈಗ ಸ್ಪಂದನಾ ಸಾವಿನ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ವಿಜಯ್ ಅವರಿಗೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ದೇವರಲ್ಲಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Mon, 7 August 23

ಬಿಜೆಪಿ, ಜೆಡಿಎಸ್ ಕೆಲಸವೇ ಅರೋಪ ಮಾಡೋದು, ನಮ್ಮದು ಉತ್ತರ ಕೋಡೋದು: ಸಚಿವ
ಬಿಜೆಪಿ, ಜೆಡಿಎಸ್ ಕೆಲಸವೇ ಅರೋಪ ಮಾಡೋದು, ನಮ್ಮದು ಉತ್ತರ ಕೋಡೋದು: ಸಚಿವ
ತಹವ್ವೂರ್ ರಾಣಾ ಹಸ್ತಾಂತರದಲ್ಲಿ ಕಾಂಗ್ರೆಸ್ ಪಾತ್ರ ಇದೆ;ಪಿ. ಚಿದಂಬರಂ
ತಹವ್ವೂರ್ ರಾಣಾ ಹಸ್ತಾಂತರದಲ್ಲಿ ಕಾಂಗ್ರೆಸ್ ಪಾತ್ರ ಇದೆ;ಪಿ. ಚಿದಂಬರಂ
ಯಾವುದೇ ಅಹಿತಕರ ಘಟನೆಗೆ ಆಸ್ಪದವೀಯದ ಪೋಲೀಸರು
ಯಾವುದೇ ಅಹಿತಕರ ಘಟನೆಗೆ ಆಸ್ಪದವೀಯದ ಪೋಲೀಸರು
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ