AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು; ಎಲ್ಲ ಪಾತ್ರಕ್ಕೂ ಸಿಕ್ಕಿದೆ ಆದ್ಯತೆ

Salaar Movie: ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಪ್ರಭಾಸ್, ಪೃಥ್ವಿರಾಜ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವರು ಇದರಲ್ಲಿ ನಟಿಸಿದ್ದಾರೆ.

‘ಸಲಾರ್’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು; ಎಲ್ಲ ಪಾತ್ರಕ್ಕೂ ಸಿಕ್ಕಿದೆ ಆದ್ಯತೆ
‘ಸಲಾರ್’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು
ರಾಜೇಶ್ ದುಗ್ಗುಮನೆ
|

Updated on: Dec 22, 2023 | 12:11 PM

Share

‘ಸಲಾರ್’ ಸಿನಿಮಾಗೂ ಕನ್ನಡ ಚಿತ್ರರಂಗಕ್ಕೂ ಕನೆಕ್ಷನ್ ಇದೆ. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಕನ್ನಡದ ‘ಹೊಂಬಾಳೆ ಫಿಲ್ಮ್ಸ್​’. ಈ ಚಿತ್ರವನ್ನು ನಿರ್ದೇಶನ ಮಾಡಿರೋ ಪ್ರಶಾಂತ್ ನೀಲ್ (Prashanth Neel) ಕೂಡ ಕರ್ನಾಟಕದವರು. ಈ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಕನ್ನಡದವರು. ಈ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರು ಕನ್ನಡದವರು ಅನ್ನೋದು ವಿಶೇಷ. ಹಲವು ಪ್ರಮುಖ ಪಾತ್ರಗಳಲ್ಲಿ ಕನ್ನಡದ ಕಲಾವಿದರು ನಟಿಸಿದ್ದಾರೆ. ಈ ಮೂಲಕ ಟಾಲಿವುಡ್​ನಲ್ಲಿ ನಮ್ಮ ಕಲಾವಿದರು ಮಿಂಚಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಪ್ರಭಾಸ್, ಪೃಥ್ವಿರಾಜ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವರು ಇದರಲ್ಲಿ ನಟಿಸಿದ್ದಾರೆ. ದೇವರಾಜ್ ಅವರು ಕನ್ನಡದ ಹಿರಿಯ ಕಲಾವಿದ. ಅವರು ಪರಭಾಷೆಯಲ್ಲಿ ಈಗಾಗಲೇ ನಟಿಸಿದ್ದಾರೆ. ‘ಸಲಾರ್’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಪಾತ್ರ ಗಮನ ಸೆಳೆಯುತ್ತಿದೆ. ‘ರತ್ನನ್ ಪ್ರಪಂಚ’ ಮೂಲಕ ಗಮನ ಸೆಳೆದ ಪ್ರಮೋದ್ ಅವರು ‘ಸಲಾರ್’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರ ತಮ್ಮನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಅವರು ಭರವಸೆಯ ನಟನಾಗಿ ಕಾಣಿಸುತ್ತಾರೆ.

‘ಗುಳ್ಟು’ ಮೂಲಕ ನವೀನ್ ಶಂಕರ್ ಅವರು ಕನ್ನಡದ ಭರವಸೆಯ ನಟ ಎನಿಸಿಕೊಂಡರು. ಅವರು ಡಾಲಿ ಧನಂಜಯ್ ನಟನೆಯ ‘ಗುರದೇವ ಹೊಯ್ಸಳ’ ಸಿನಿಮಾದಲ್ಲಿ ಆ್ಯಕ್ಷನ್ ಮೆರೆದಿದ್ದರು. ‘ಸಲಾರ್’ ಸಿನಿಮಾದಲ್ಲಿ ಅವರು ಒಂದು ಪಾತ್ರ ಮಾಡಿದ್ದಾರೆ. ಅವರಿಗೆ ಹೆಚ್ಚು ಸಂಭಾಷಣೆ ಸಿಕ್ಕಿಲ್ಲ. ಆದಾಗ್ಯೂ ಅವರ ಪಾತ್ರಕ್ಕೆ ತೂಕ ಇದೆ. ಗರುಡ ರಾಮ್ ಅವರು ‘ಕೆಜಿಎಫ್’ ಸಿನಿಮಾ ಮೂಲಕ ಗಮನ ಸೆಳೆದರು. ಅವರೂ ‘ಸಲಾರ್’ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಉಳಿದಂತೆ ರವಿ ಭಟ್, ಮಧು ಗುರುಸ್ವಾಮಿ, ಭಜರಂಗಿ ಲೋಕಿ, ಅಶ್ವಿನ್​ ಹಾಸನ್ ಅವರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಕಲಾವಿದರಿಗೆ ಹೆಚ್ಚಿನ ಅವಕಾಶ ಸಿಕ್ಕಿರುವುದರಿಂದ ಕನ್ನಡದ ಸಿನಿಪ್ರಿಯರು ಖುಷಿಪಟ್ಟಿದ್ದಾರೆ. ಕನ್ನಡ ನಿರ್ಮಾಣ ಸಂಸ್ಥೆಯಿಂದ ಈ ರೀತಿಯ ಕಾರ್ಯಗಳು ಮತ್ತಷ್ಟು ಆಗಲಿ ಎಂದು ಅನೇಕರು ಆಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು