Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು; ಎಲ್ಲ ಪಾತ್ರಕ್ಕೂ ಸಿಕ್ಕಿದೆ ಆದ್ಯತೆ

Salaar Movie: ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಪ್ರಭಾಸ್, ಪೃಥ್ವಿರಾಜ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವರು ಇದರಲ್ಲಿ ನಟಿಸಿದ್ದಾರೆ.

‘ಸಲಾರ್’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು; ಎಲ್ಲ ಪಾತ್ರಕ್ಕೂ ಸಿಕ್ಕಿದೆ ಆದ್ಯತೆ
‘ಸಲಾರ್’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು
Follow us
ರಾಜೇಶ್ ದುಗ್ಗುಮನೆ
|

Updated on: Dec 22, 2023 | 12:11 PM

‘ಸಲಾರ್’ ಸಿನಿಮಾಗೂ ಕನ್ನಡ ಚಿತ್ರರಂಗಕ್ಕೂ ಕನೆಕ್ಷನ್ ಇದೆ. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಕನ್ನಡದ ‘ಹೊಂಬಾಳೆ ಫಿಲ್ಮ್ಸ್​’. ಈ ಚಿತ್ರವನ್ನು ನಿರ್ದೇಶನ ಮಾಡಿರೋ ಪ್ರಶಾಂತ್ ನೀಲ್ (Prashanth Neel) ಕೂಡ ಕರ್ನಾಟಕದವರು. ಈ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಕನ್ನಡದವರು. ಈ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರು ಕನ್ನಡದವರು ಅನ್ನೋದು ವಿಶೇಷ. ಹಲವು ಪ್ರಮುಖ ಪಾತ್ರಗಳಲ್ಲಿ ಕನ್ನಡದ ಕಲಾವಿದರು ನಟಿಸಿದ್ದಾರೆ. ಈ ಮೂಲಕ ಟಾಲಿವುಡ್​ನಲ್ಲಿ ನಮ್ಮ ಕಲಾವಿದರು ಮಿಂಚಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಪ್ರಭಾಸ್, ಪೃಥ್ವಿರಾಜ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವರು ಇದರಲ್ಲಿ ನಟಿಸಿದ್ದಾರೆ. ದೇವರಾಜ್ ಅವರು ಕನ್ನಡದ ಹಿರಿಯ ಕಲಾವಿದ. ಅವರು ಪರಭಾಷೆಯಲ್ಲಿ ಈಗಾಗಲೇ ನಟಿಸಿದ್ದಾರೆ. ‘ಸಲಾರ್’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಪಾತ್ರ ಗಮನ ಸೆಳೆಯುತ್ತಿದೆ. ‘ರತ್ನನ್ ಪ್ರಪಂಚ’ ಮೂಲಕ ಗಮನ ಸೆಳೆದ ಪ್ರಮೋದ್ ಅವರು ‘ಸಲಾರ್’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರ ತಮ್ಮನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಅವರು ಭರವಸೆಯ ನಟನಾಗಿ ಕಾಣಿಸುತ್ತಾರೆ.

‘ಗುಳ್ಟು’ ಮೂಲಕ ನವೀನ್ ಶಂಕರ್ ಅವರು ಕನ್ನಡದ ಭರವಸೆಯ ನಟ ಎನಿಸಿಕೊಂಡರು. ಅವರು ಡಾಲಿ ಧನಂಜಯ್ ನಟನೆಯ ‘ಗುರದೇವ ಹೊಯ್ಸಳ’ ಸಿನಿಮಾದಲ್ಲಿ ಆ್ಯಕ್ಷನ್ ಮೆರೆದಿದ್ದರು. ‘ಸಲಾರ್’ ಸಿನಿಮಾದಲ್ಲಿ ಅವರು ಒಂದು ಪಾತ್ರ ಮಾಡಿದ್ದಾರೆ. ಅವರಿಗೆ ಹೆಚ್ಚು ಸಂಭಾಷಣೆ ಸಿಕ್ಕಿಲ್ಲ. ಆದಾಗ್ಯೂ ಅವರ ಪಾತ್ರಕ್ಕೆ ತೂಕ ಇದೆ. ಗರುಡ ರಾಮ್ ಅವರು ‘ಕೆಜಿಎಫ್’ ಸಿನಿಮಾ ಮೂಲಕ ಗಮನ ಸೆಳೆದರು. ಅವರೂ ‘ಸಲಾರ್’ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಉಳಿದಂತೆ ರವಿ ಭಟ್, ಮಧು ಗುರುಸ್ವಾಮಿ, ಭಜರಂಗಿ ಲೋಕಿ, ಅಶ್ವಿನ್​ ಹಾಸನ್ ಅವರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಕಲಾವಿದರಿಗೆ ಹೆಚ್ಚಿನ ಅವಕಾಶ ಸಿಕ್ಕಿರುವುದರಿಂದ ಕನ್ನಡದ ಸಿನಿಪ್ರಿಯರು ಖುಷಿಪಟ್ಟಿದ್ದಾರೆ. ಕನ್ನಡ ನಿರ್ಮಾಣ ಸಂಸ್ಥೆಯಿಂದ ಈ ರೀತಿಯ ಕಾರ್ಯಗಳು ಮತ್ತಷ್ಟು ಆಗಲಿ ಎಂದು ಅನೇಕರು ಆಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ