AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು

ನಟಿ ಅದಿತಿ ಪ್ರಭುದೇವ ಅವರಿಗೆ 2024ರ ವರ್ಷ ತುಂಬ ಸ್ಪೆಷಲ್​. ಯಾಕೆಂದ್ರೆ, ಸದ್ಯದಲ್ಲೇ ಅವರು ತಾಯಿ ಆಗಲಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ಗುರುಕಿರಣ್​, ಶರಣ್​ ಮುಂತಾದ ಸೆಲೆಬ್ರಿಟಿಗಳು ಬಂದು ಅದಿತಿ ಪ್ರಭುದೇವ ಹಾಗೂ ಯಶಸ್​ ದಂಪತಿಗೆ ಶುಭ ಹಾರೈಸಿದ್ದಾರೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು
ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ
Follow us
ಮದನ್​ ಕುಮಾರ್​
|

Updated on: Feb 19, 2024 | 10:23 AM

ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ಜನವರಿ 1ರಂದು ಅವರು ಪ್ರೆಗ್ನೆನ್ಸಿ ಸುದ್ದಿ ನೀಡಿದ್ದರು. ಈಗ ಅವರ ಮನೆಯಲ್ಲಿ ಸಂಭ್ರಮದಿಂದ ಸೀಮಂತ ಶಾಸ್ತ್ರ ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ (Aditi Prabhudeva Baby Shower) ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ ಅವರಿಗೆ ವಿಶ್​ ಮಾಡಿದ್ದಾರೆ. ಶೀಘ್ರದಲ್ಲೇ ಅದಿತಿ ಪ್ರಭುದೇವ ಹಾಗೂ ಯಶಸ್​ ಪಾಟ್ಲಾ (Yashas Patla) ದಂಪತಿಯ ಮನೆಗೆ ಮಗುವಿನ ಆಗಮನ ಆಗಲಿದೆ.

ಸ್ಯಾಂಡಲ್​​ವುಡ್​ನಲ್ಲಿ ಬ್ಯುಸಿ ಆಗಿರುವ ಅದಿತಿ ಪ್ರಭುದೇವ ಅವರು ಮದುವೆ ಬಗ್ಗೆ ಅನೌನ್ಸ್​ ಮಾಡಿದ್ದಾಗ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಕೈತುಂಬ ಸಿನಿಮಾಗಳು ಇರುವಾಗಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು. 2022ರ ನವೆಂಬರ್​ನಲ್ಲಿ ಉದ್ಯಮಿ ಯಶಸ್​ ಜೊತೆ ಅವರ ವಿವಾಹ ನೆರವೇರಿತ್ತು. ಈಗ ತಾಯಿ ಆಗುತ್ತಿರುವ ಸಂಭ್ರಮದಲ್ಲಿ ಅದಿತಿ ಪ್ರಭುದೇವ ಇದ್ದಾರೆ.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರದ ವಿಡಿಯೋ:

ಮದುವೆ ಬಳಿಕ ಅದಿತಿ ಪ್ರಭುದೇವ ಅವರು ಸಿನಿಮಾ ಒಪ್ಪಿಕೊಳ್ಳುವುದು ಕಡಿಮೆ ಆಯಿತು. ಪ್ರಗ್ನೆಂಟ್​ ಆದ ನಂತರ ಅವರು ಸಂಪೂರ್ಣವಾಗಿ ಆರೋಗ್ಯದ ಕಡೆಗೆ ಗಮನ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಅಂತರ ಕಾಯ್ದಕೊಂಡಿದ್ದಾರೆ. ಅವರ ಸೀಮಂತ ಶಾಸ್ತ್ರಕ್ಕೆ ನಟ ಶರಣ್​, ಸಂಗೀತ ನಿರ್ದೇಶಕ ಗುರುಕಿರಣ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

ಅದಿತಿ ಪ್ರಭುದೇವ ಅವರು ಮೂಲತಃ ದಾವಣಗೆರೆಯವರು. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ‘ಗುಂಡ್ಯಾನ್​ ಹೆಂಡ್ತಿ’ ಸೀರಿಯಲ್​ನಲ್ಲಿ ನಟಿಸಿರು. ಬಳಿಕ ‘ನಾಗ ಕನ್ನಿಕೆ’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಈ ಸಂದರ್ಭದಲ್ಲಿ ಅವರಿಗೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಸಿಕ್ಕಿತು. ಅಜಯ್​ ರಾವ್​ ನಟನೆಯ ‘ಧೈರ್ಯಂ’ ಸಿನಿಮಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅವರು ಚಂದನವನಕ್ಕೆ ಕಾಲಿಟ್ಟರು. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ಅಭಿನಯಿಸಿದರು. ಬಜಾರ್​, ಸಿಂಗ, ರಂಗನಾಯಕಿ, ಓಲ್ಡ್​ ಮಾಂಕ್​, ತೋತಾಪುರಿ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅದಿತಿ ಪ್ರಭುದೇವ ಅವರು ಪ್ರಸಿದ್ಧಿ ಪಡೆದಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿಡುಗಡೆಯಾದ ‘ಲವ್​ ಯೂ ಅಭಿ’ ವೆಬ್​ ಸರಣಿಯಲ್ಲೂ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್