AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು

ನಟಿ ಅದಿತಿ ಪ್ರಭುದೇವ ಅವರಿಗೆ 2024ರ ವರ್ಷ ತುಂಬ ಸ್ಪೆಷಲ್​. ಯಾಕೆಂದ್ರೆ, ಸದ್ಯದಲ್ಲೇ ಅವರು ತಾಯಿ ಆಗಲಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ಗುರುಕಿರಣ್​, ಶರಣ್​ ಮುಂತಾದ ಸೆಲೆಬ್ರಿಟಿಗಳು ಬಂದು ಅದಿತಿ ಪ್ರಭುದೇವ ಹಾಗೂ ಯಶಸ್​ ದಂಪತಿಗೆ ಶುಭ ಹಾರೈಸಿದ್ದಾರೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು
ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ
ಮದನ್​ ಕುಮಾರ್​
|

Updated on: Feb 19, 2024 | 10:23 AM

Share

ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ಜನವರಿ 1ರಂದು ಅವರು ಪ್ರೆಗ್ನೆನ್ಸಿ ಸುದ್ದಿ ನೀಡಿದ್ದರು. ಈಗ ಅವರ ಮನೆಯಲ್ಲಿ ಸಂಭ್ರಮದಿಂದ ಸೀಮಂತ ಶಾಸ್ತ್ರ ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ (Aditi Prabhudeva Baby Shower) ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ ಅವರಿಗೆ ವಿಶ್​ ಮಾಡಿದ್ದಾರೆ. ಶೀಘ್ರದಲ್ಲೇ ಅದಿತಿ ಪ್ರಭುದೇವ ಹಾಗೂ ಯಶಸ್​ ಪಾಟ್ಲಾ (Yashas Patla) ದಂಪತಿಯ ಮನೆಗೆ ಮಗುವಿನ ಆಗಮನ ಆಗಲಿದೆ.

ಸ್ಯಾಂಡಲ್​​ವುಡ್​ನಲ್ಲಿ ಬ್ಯುಸಿ ಆಗಿರುವ ಅದಿತಿ ಪ್ರಭುದೇವ ಅವರು ಮದುವೆ ಬಗ್ಗೆ ಅನೌನ್ಸ್​ ಮಾಡಿದ್ದಾಗ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಕೈತುಂಬ ಸಿನಿಮಾಗಳು ಇರುವಾಗಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು. 2022ರ ನವೆಂಬರ್​ನಲ್ಲಿ ಉದ್ಯಮಿ ಯಶಸ್​ ಜೊತೆ ಅವರ ವಿವಾಹ ನೆರವೇರಿತ್ತು. ಈಗ ತಾಯಿ ಆಗುತ್ತಿರುವ ಸಂಭ್ರಮದಲ್ಲಿ ಅದಿತಿ ಪ್ರಭುದೇವ ಇದ್ದಾರೆ.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರದ ವಿಡಿಯೋ:

ಮದುವೆ ಬಳಿಕ ಅದಿತಿ ಪ್ರಭುದೇವ ಅವರು ಸಿನಿಮಾ ಒಪ್ಪಿಕೊಳ್ಳುವುದು ಕಡಿಮೆ ಆಯಿತು. ಪ್ರಗ್ನೆಂಟ್​ ಆದ ನಂತರ ಅವರು ಸಂಪೂರ್ಣವಾಗಿ ಆರೋಗ್ಯದ ಕಡೆಗೆ ಗಮನ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಅಂತರ ಕಾಯ್ದಕೊಂಡಿದ್ದಾರೆ. ಅವರ ಸೀಮಂತ ಶಾಸ್ತ್ರಕ್ಕೆ ನಟ ಶರಣ್​, ಸಂಗೀತ ನಿರ್ದೇಶಕ ಗುರುಕಿರಣ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

ಅದಿತಿ ಪ್ರಭುದೇವ ಅವರು ಮೂಲತಃ ದಾವಣಗೆರೆಯವರು. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ‘ಗುಂಡ್ಯಾನ್​ ಹೆಂಡ್ತಿ’ ಸೀರಿಯಲ್​ನಲ್ಲಿ ನಟಿಸಿರು. ಬಳಿಕ ‘ನಾಗ ಕನ್ನಿಕೆ’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಈ ಸಂದರ್ಭದಲ್ಲಿ ಅವರಿಗೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಸಿಕ್ಕಿತು. ಅಜಯ್​ ರಾವ್​ ನಟನೆಯ ‘ಧೈರ್ಯಂ’ ಸಿನಿಮಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅವರು ಚಂದನವನಕ್ಕೆ ಕಾಲಿಟ್ಟರು. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ಅಭಿನಯಿಸಿದರು. ಬಜಾರ್​, ಸಿಂಗ, ರಂಗನಾಯಕಿ, ಓಲ್ಡ್​ ಮಾಂಕ್​, ತೋತಾಪುರಿ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅದಿತಿ ಪ್ರಭುದೇವ ಅವರು ಪ್ರಸಿದ್ಧಿ ಪಡೆದಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿಡುಗಡೆಯಾದ ‘ಲವ್​ ಯೂ ಅಭಿ’ ವೆಬ್​ ಸರಣಿಯಲ್ಲೂ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!