AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು

ನಟಿ ಅದಿತಿ ಪ್ರಭುದೇವ ಅವರಿಗೆ 2024ರ ವರ್ಷ ತುಂಬ ಸ್ಪೆಷಲ್​. ಯಾಕೆಂದ್ರೆ, ಸದ್ಯದಲ್ಲೇ ಅವರು ತಾಯಿ ಆಗಲಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ಗುರುಕಿರಣ್​, ಶರಣ್​ ಮುಂತಾದ ಸೆಲೆಬ್ರಿಟಿಗಳು ಬಂದು ಅದಿತಿ ಪ್ರಭುದೇವ ಹಾಗೂ ಯಶಸ್​ ದಂಪತಿಗೆ ಶುಭ ಹಾರೈಸಿದ್ದಾರೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ; ಶುಭ ಕೋರಿದ ಸೆಲೆಬ್ರಿಟಿಗಳು, ಅಭಿಮಾನಿಗಳು
ಅದಿತಿ ಪ್ರಭುದೇವ ಸೀಮಂತ ಶಾಸ್ತ್ರ
ಮದನ್​ ಕುಮಾರ್​
|

Updated on: Feb 19, 2024 | 10:23 AM

Share

ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ಜನವರಿ 1ರಂದು ಅವರು ಪ್ರೆಗ್ನೆನ್ಸಿ ಸುದ್ದಿ ನೀಡಿದ್ದರು. ಈಗ ಅವರ ಮನೆಯಲ್ಲಿ ಸಂಭ್ರಮದಿಂದ ಸೀಮಂತ ಶಾಸ್ತ್ರ ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ (Aditi Prabhudeva Baby Shower) ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ ಅವರಿಗೆ ವಿಶ್​ ಮಾಡಿದ್ದಾರೆ. ಶೀಘ್ರದಲ್ಲೇ ಅದಿತಿ ಪ್ರಭುದೇವ ಹಾಗೂ ಯಶಸ್​ ಪಾಟ್ಲಾ (Yashas Patla) ದಂಪತಿಯ ಮನೆಗೆ ಮಗುವಿನ ಆಗಮನ ಆಗಲಿದೆ.

ಸ್ಯಾಂಡಲ್​​ವುಡ್​ನಲ್ಲಿ ಬ್ಯುಸಿ ಆಗಿರುವ ಅದಿತಿ ಪ್ರಭುದೇವ ಅವರು ಮದುವೆ ಬಗ್ಗೆ ಅನೌನ್ಸ್​ ಮಾಡಿದ್ದಾಗ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಕೈತುಂಬ ಸಿನಿಮಾಗಳು ಇರುವಾಗಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು. 2022ರ ನವೆಂಬರ್​ನಲ್ಲಿ ಉದ್ಯಮಿ ಯಶಸ್​ ಜೊತೆ ಅವರ ವಿವಾಹ ನೆರವೇರಿತ್ತು. ಈಗ ತಾಯಿ ಆಗುತ್ತಿರುವ ಸಂಭ್ರಮದಲ್ಲಿ ಅದಿತಿ ಪ್ರಭುದೇವ ಇದ್ದಾರೆ.

ಅದಿತಿ ಪ್ರಭುದೇವ ಸೀಮಂತ ಶಾಸ್ತ್ರದ ವಿಡಿಯೋ:

ಮದುವೆ ಬಳಿಕ ಅದಿತಿ ಪ್ರಭುದೇವ ಅವರು ಸಿನಿಮಾ ಒಪ್ಪಿಕೊಳ್ಳುವುದು ಕಡಿಮೆ ಆಯಿತು. ಪ್ರಗ್ನೆಂಟ್​ ಆದ ನಂತರ ಅವರು ಸಂಪೂರ್ಣವಾಗಿ ಆರೋಗ್ಯದ ಕಡೆಗೆ ಗಮನ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಅಂತರ ಕಾಯ್ದಕೊಂಡಿದ್ದಾರೆ. ಅವರ ಸೀಮಂತ ಶಾಸ್ತ್ರಕ್ಕೆ ನಟ ಶರಣ್​, ಸಂಗೀತ ನಿರ್ದೇಶಕ ಗುರುಕಿರಣ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

ಅದಿತಿ ಪ್ರಭುದೇವ ಅವರು ಮೂಲತಃ ದಾವಣಗೆರೆಯವರು. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ‘ಗುಂಡ್ಯಾನ್​ ಹೆಂಡ್ತಿ’ ಸೀರಿಯಲ್​ನಲ್ಲಿ ನಟಿಸಿರು. ಬಳಿಕ ‘ನಾಗ ಕನ್ನಿಕೆ’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಈ ಸಂದರ್ಭದಲ್ಲಿ ಅವರಿಗೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಸಿಕ್ಕಿತು. ಅಜಯ್​ ರಾವ್​ ನಟನೆಯ ‘ಧೈರ್ಯಂ’ ಸಿನಿಮಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅವರು ಚಂದನವನಕ್ಕೆ ಕಾಲಿಟ್ಟರು. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ಅಭಿನಯಿಸಿದರು. ಬಜಾರ್​, ಸಿಂಗ, ರಂಗನಾಯಕಿ, ಓಲ್ಡ್​ ಮಾಂಕ್​, ತೋತಾಪುರಿ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅದಿತಿ ಪ್ರಭುದೇವ ಅವರು ಪ್ರಸಿದ್ಧಿ ಪಡೆದಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿಡುಗಡೆಯಾದ ‘ಲವ್​ ಯೂ ಅಭಿ’ ವೆಬ್​ ಸರಣಿಯಲ್ಲೂ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು