AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashitha First Reaction: ಆಶಿತಾ ಮೀಟೂ ವಿವಾದ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ‘ಬಾ ಬಾರೋ ರಸಿಕ’ ಚಿತ್ರದ ನಟಿ

Sandalwood Actress Ashitha: ‘ಬೇರೆ ಬೇರೆ ಚಿತ್ರರಂಗದಿಂದ ಬಂದು ಮೀಟೂ ಆಫರ್​ ನೀಡುವವರು ಇದ್ದರು. ಆದರೆ ನಾನು ಅದಕ್ಕೆ ಒಪ್ಪಿಕೊಳ್ಳಲಿಲ್ಲ. ಅದರಿಂದ ನಾನು ಚಿತ್ರರಂಗದಿಂದ ಹೊರಬಂದೆ’ ಎಂದು ಆಶಿತಾ ಹೇಳಿದ್ದಾರೆ.

Ashitha First Reaction: ಆಶಿತಾ ಮೀಟೂ ವಿವಾದ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ‘ಬಾ ಬಾರೋ ರಸಿಕ’ ಚಿತ್ರದ ನಟಿ
ಆಶಿತಾ
TV9 Web
| Edited By: |

Updated on:Sep 16, 2022 | 4:31 PM

Share

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟಿ ಆಶಿತಾ ಅವರು ಮೀಟೂ (Me Too) ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಯೂಟ್ಯೂಬ್​ ಚಾನೆಲ್​ವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಅವರು ಈ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಎಲ್ಲದರ ಬಗ್ಗೆ ‘ಟಿವಿ9 ಕನ್ನಡ’ ಜೊತೆ ಮಾತನಾಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಸಾಮಾನ್ಯವಾಗಿ ನಾವೆಲ್ಲ ಕಲಾವಿದರು ಈ ರೀತಿ ಕಷ್ಟ ಅನುಭವಿಸುತ್ತೇವೆ. ನನ್ನ ಜೊತೆಯೇ ಹೀಗೆಲ್ಲ ಆಯ್ತು ಅಂತ ನಾನು ಹೇಳಿಲ್ಲ. ಸಂದರ್ಶನದಲ್ಲಿ ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ. ಅನೇಕ ಅವಕಾಶಗಳು ಬಂದಾಗ ನನಗೆ ಇಷ್ಟ ಆಗಿಲ್ಲ. ಬರೀ ಮೀಟೂ ಎನ್ನುವುದು ಮಾತ್ರವೇ ಕಾರಣ ಅಲ್ಲ’ ಎಂದು ಆಶಿತಾ (Ashitha) ಹೇಳಿದ್ದಾರೆ.

‘ವೈಯಕ್ತಿಕವಾಗಿ ನನಗೆ ಈ ರೀತಿ ಆಗಿದೆ ಎನ್ನಲಾರೆ. ನಟಿ ಎಂದಮೇಲೆ ಕೆಲವು ಘಟನೆಗಳ ಬಗ್ಗೆ ಕೇಳಿರುತ್ತೇವೆ. ಬೇರೆ ಬೇರೆ ಚಿತ್ರರಂಗದಿಂದ ಬಂದು ಮೀಟೂ ಆಫರ್​ ನೀಡುವವರು ಇದ್ದರು. ಆದರೆ ನಾನು ಅದಕ್ಕೆ ಒಪ್ಪಿಕೊಳ್ಳಲಿಲ್ಲ. ಅದರಿಂದ ನಾನು ಚಿತ್ರರಂಗದಿಂದ ಹೊರಬಂದೆ. ಆಗಿನ ಕಾಲದಲ್ಲಿ ಆಗಿದ್ದು ಅಲ್ಲಿಯೇ ಬಿಟ್ಟೆ. ಹಾಗೇನಾದರೂ ಆಗಿದ್ದರೆ ನಾನು ಇನ್ನೂ ಇಂಡಸ್ಟ್ರಿಯಲ್ಲಿ ಇರಬೇಕಾಗಿತ್ತು’ ಎಂದು ಆಶಿತಾ ಹೇಳಿದ್ದಾರೆ.

‘ನಾನು ಚಿತ್ರರಂಗ ತೊರೆಯಲು ಮೀಟೂ ಮಾತ್ರವೇ ಕಾರಣವಲ್ಲ. ಬೇರೆ ಬೇರೆ ಕಾರಣಗಳು ಇದ್ದವು. ನಾನು ವಿದ್ಯಾಭ್ಯಾಸ ಮಾಡುತ್ತಿದ್ದರಿಂದ ಕೆಲವು ಸಿನಿಮಾದ ಅವಕಾಶಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದಿದ್ದಾರೆ ಆಶಿತಾ. ‘ಆಕಾಶ್​’, ‘ತವರಿನ ಸಿರಿ’, ‘ಬಾ ಬಾರೋ ರಸಿಕ’, ‘ರೋಡ್​ ರೋಮಿಯೋ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಆಶಿತಾ ಫೇಮಸ್​ ಆಗಿದ್ದರು. ‘ರೋಡ್​ ರೋಮಿಯೋ’ ಚಿತ್ರದ ಬಳಿಕ ಅವರು ಬಣ್ಣದ ಲೋಕದಲ್ಲಿ ಹೆಚ್ಚಾಗಿ ಸಕ್ರಿಯವಾಗಲಿಲ್ಲ.

ಇದನ್ನೂ ಓದಿ
Image
ಶತ್ರುಘ್ನಾ ಸಿನ್ಹಾ ಮಾಟ ಮಾಡಿಸಿದ್ದರು ಎಂದು ಆರೋಪಿಸಿದ್ದ ಮಾಜಿ ಬಿಗ್​ಬಾಸ್ ಸ್ಪರ್ಧಿಯ ಮೇಲೆ ಹರಿಹಾಯ್ದ ಲವ್ ಸಿನ್ಹಾ; ಏನಿದು ಪ್ರಕರಣ?
Image
ಮೀಟೂ ಆರೋಪಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಸಿಎಂ; ಅಸಮಾಧಾನ ಹೊರಹಾಕಿದ ಗಾಯಕಿ
Image
ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​
Image
ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

ಯೂಟ್ಯೂಬ್​ ಸಂದರ್ಶನದಲ್ಲಿ ಆಶಿತಾ ಹೇಳಿದ್ದೇನು?

ನಟ, ನಿರ್ದೇಶಕ ರಘುರಾಮ್​ ಅವರ ಯೂಟ್ಯೂಬ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ಆಶಿತಾ ನೇರವಾಗಿ ಮಾತಾಡಿದ್ದಾರೆ. ಶೂಟಿಂಗ್ ಸೆಟ್​ನಲ್ಲಿ ಎದುರಾದ ಎಲ್ಲ ಕಷ್ಟದ ಅನುಭವವನ್ನು ಅವರು ತೆರೆದಿಟ್ಟಿದ್ದಾರೆ.

‘ದೊಡ್ಡ ದೊಡ್ಡ ಚಿತ್ರಗಳ ಅವಕಾಶ ಬಂದರೂ ನನಗೆ ಒಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ. ಅವರು ಕೇಳಿದ್ದನ್ನು ನಾನು ಮಾಡುತ್ತಿಲ್ಲ ಎಂಬ ಕಾರಣಕ್ಕೆ ಸೆಟ್​ನಲ್ಲಿ ನನಗೆ ಕಷ್ಟ ಕೊಟ್ಟಿದ್ದಾರೆ. ಟೇಕ್​ ಸರಿಯಿದ್ದರೂ ಕೂಡ ರೀಟೇಕ್​ ಕೇಳುತ್ತಿದ್ದರು. ಇದನ್ನು ಮಾಡಿದರೆ ಮಾತ್ರ ಚಾನ್ಸ್​ ಕೊಡುತ್ತೇವೆ, ಹೆಚ್ಚಿನ ಪೇಮೆಂಟ್​ ಕೊಡುತ್ತೇವೆ ಎನ್ನುತ್ತಿದ್ದರು. ಹಾಗಾಗಿ ನನಗೆ ಈ ಕ್ಷೇತ್ರ ಬೇಡ ಎನಿಸಿತು’ ಎಂದು ಆಶಿತಾ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:22 pm, Fri, 16 September 22

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ