Cannes: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ ಕನ್ನಡದ ನಟಿ ಇತಿ ಆಚಾರ್ಯ

Iti Acharya: ನಟನೆ ಮತ್ತು ಮಾಡೆಲಿಂಗ್​ನಲ್ಲಿ ಇತಿ ಆಚಾರ್ಯ ಗುರುತಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕಾನ್​ ಚಿತ್ರೋತ್ಸವ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

Cannes: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ ಕನ್ನಡದ ನಟಿ ಇತಿ ಆಚಾರ್ಯ
ಇತಿ ಆಚಾರ್ಯ
Follow us
|

Updated on: May 20, 2023 | 2:43 PM

ವಿವಿಧ ದೇಶಗಳ ಸೆಲೆಬ್ರಿಟಿಗಳು ಕಾನ್​ ಫಿಲ್ಮ್​ ಫಿಸ್ಟಿವಲ್​ನಲ್ಲಿ (Cannes Film Festival) ಭಾಗವಹಿಸಿದ್ದಾರೆ. ಮೇ 16ರಿಂದ 27ರ ತನಕ ನಡೆಯುತ್ತಿರುವ ಈ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುವುದು ಎಂದರೆ ಹೆಮ್ಮೆಯೇ ಸರಿ. ಬಾಲಿವುಡ್​ನ ಅನೇಕ ನಟಿಯರು ಇದರಲ್ಲಿ ಭಾಗಿ ಆಗಿದ್ದಾರೆ. ಕಾನ್​ (Cannes) ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಒಂದು ವಿಶೇಷ ಆಕರ್ಷಣೆ. ಕೆಂಪು ಹಾಸಿನ ಮೇಲೆ ಹಲವು ಕಲಾವಿದರು ಹೆಜ್ಜೆ ಹಾಕಿದ್ದಾರೆ. ಕನ್ನಡದ ನಟಿ ಇತಿ ಆಚಾರ್ಯ (Iti Acharya) ಅವರು ಇದೇ ಮೊದಲ ಬಾರಿಗೆ ಕಾನ್​ ಚಿತ್ರೋತ್ಸವಕ್ಕೆ ತೆರಳಿದ್ದಾರೆ ಎಂಬುದು ವಿಶೇಷ. ಆ ಸಂದರ್ಭದ ಫೋಟೋ ಹಂಚಿಕೊಂಡು ಅವರು ಖುಷಿಪಟ್ಟಿದ್ದಾರೆ. ವಿಮ್ ವೆಂಡರ್ಸ್ ನಿರ್ದೇಶಿಸಿದ ‘ಅನ್ಸೆಲ್ಮ್’ ಸಿನಿಮಾಕ್ಕಾಗಿ ಕಾನ್​ ಚಿತ್ರೋತ್ಸವದಲ್ಲಿ ಭಾಗಿಯಾಗುವ ಅವಕಾಶ ಇತಿ ಆಚಾರ್ಯ ಅವರಿಗೆ ಸಿಕ್ಕಿದೆ.

ಇತಿ ಆಚಾರ್ಯ ಅವರು ಕಪ್ಪು ಬಣ್ಣದ ಗೌನ್ ತೊಟ್ಟಿದ್ದಾರೆ. ಅದಕ್ಕೆ ಒಪ್ಪುವಂತೆ ಬೆಂಗಳೂರಿನ ಖಿಯಾ ಜ್ಯುವೆಲ್ಲರಿಯ ವಜ್ರದ ಆಭರಣ, ದೆಹಲಿ ಮೂಲದ ತಾರಿಣಿ ನಿರುಲಾ ಅವರ ಕರಕುಶಲ ಹಮ್ಮಿಂಗ್ ಬರ್ಡ್‌ ಕಪ್ಪು ಕೈ ಕ್ಲಚ್ ಹಿಡಿದು ಕಾನ್​ ಸಿನಿಮೋತ್ಸವದ ರಂಗೇರಿಸಿದ್ದಾರೆ ಇತಿ ಆಚಾರ್ಯ. ರೆಡ್​ ಕಾರ್ಪೆಟ್​ನಲ್ಲಿ ಅವರು ಕ್ಯಾಮೆರಾಗಳಿಗೆ ಪೋಸ್​ ನೀಡಿದ್ದಾರೆ.

ನಟನೆ ಮತ್ತು ಮಾಡೆಲಿಂಗ್​ನಲ್ಲಿ ಇತಿ ಆಚಾರ್ಯ ಗುರುತಿಸಿಕೊಂಡಿದ್ದಾರೆ. ಅವರು 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಆಗಿದ್ದರು. ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್​ ಬಿಲ್ ಬೋರ್ಡ್ ಹೋರ್ಡಿಂಗ್ಸ್​ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ.

ಇದನ್ನೂ ಓದಿ: 75th Cannes Film Festival: ಆಕರ್ಷಣೀಯ ಉಡುಗೆಯೊಂದಿಗೆ ಮಿಂಚಿದ ನಟಿ ದೀಪಿಕಾ ಪಡುಕೋಣೆ

ಕಾನ್​ ಚಿತ್ರೋತ್ಸವದಲ್ಲಿ ನಟಿಮಣಿಯರು:

ಈ ಬಾರಿ ಭಾರತದ ಅನೇಕ ನಟಿಯರು ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ. ಐಶ್ವರ್ಯಾ ರೈ ಬಚ್ಚನ್​, ಮೃಣಾಲ್​ ಠಾಕೂರ್​, ಸಾರಾ ಅಲಿ ಖಾನ್​, ಖುಷ್ಬೂ ಸುಂದರ್​, ಇಶಾ ಗುಪ್ತಾ ಮುಂತಾದ ನಟಿಯರು ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ್ದಾರೆ. ಅವರ ಸಾಲಿಗೆ ಇತಿ ಆಚಾರ್ಯ ಕೂಡ ಸೇರ್ಪಡೆ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ