AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಅಕ್ರಮವಾಗಿ ಚಿನ್ನ ತಂದ ರನ್ಯಾ ರಾವ್; ವಿಮಾನ ನಿಲ್ದಾಣದಲ್ಲೇ ಐಪಿಎಸ್ ಅಧಿಕಾರಿ ಮಗಳು ವಶಕ್ಕೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ. ದುಬೈನಿಂದ ಬಂದ ಅವರನ್ನು ಡಿಆರ್​ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರನ್ಯಾ ರಾವ್ ಅವರು ಸುದೀಪ್ ಮತ್ತು ಗಣೇಶ್ ಅಭಿನಯದ ಚಿತ್ರಗಳಲ್ಲಿ ನಟಿಸಿದ್ದಾರೆ.

ದುಬೈನಿಂದ ಅಕ್ರಮವಾಗಿ ಚಿನ್ನ ತಂದ ರನ್ಯಾ ರಾವ್; ವಿಮಾನ ನಿಲ್ದಾಣದಲ್ಲೇ  ಐಪಿಎಸ್ ಅಧಿಕಾರಿ ಮಗಳು ವಶಕ್ಕೆ
ರನ್ಯಾ
ನವೀನ್ ಕುಮಾರ್ ಟಿ
| Edited By: |

Updated on:Mar 05, 2025 | 9:16 AM

Share

ಬೆಂಗಳೂರು, ಮಾರ್ಚ್ 4: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರನ್ನು ವಶಕ್ಕೆ ಪಡೆದ ಬಳಿಕ ವಿಚಾರಣೆ ನಡೆಸಲಾಗುತ್ತಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು. ನಟಿ ರನ್ಯಾ ರಾವ್ ಅವರು ಡಿಜಿಪಿ ರಾಮಚಂದ್ರ ರಾವ್ ಮಗಳು. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ ಡಿಆರ್​ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ  ಆರೋಪ ರನ್ಯಾ ಮೇಲೆ ಇದೆ.

ರನ್ಯಾ ಜನಿಸಿದ್ದು 1991ರಲ್ಲಿ. ಅವರು ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರದಲ್ಲಿ ಮಾನಸಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾ ಒಂದನ್ನು ಮಾಡಿದರು. ಆದರೆ, ಇದು ಅಷ್ಟಾಗಿ ಗೆಲುವು ತಂದುಕೊಡಲಿಲ್ಲ.

ಇದನ್ನೂ ಓದಿ: ಮಜಾ ಟಾಕೀಸ್​ನಲ್ಲಿ ಮಿನುಗು ತಾರೆಯರು; ಹಿರಿಯ ನಟಿಯರ ಸಮಾಗಮ

2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದರು. ಆ ಬಳಿಕ ಅವರಿಗೆ ಅಷ್ಟಾಗಿ ಆಫರ್​ಗಳು ಬರಲೇ ಇಲ್ಲ. ಆ ಬಳಿಕ ಅವರು ಸಿನಿಮಾ ಮಾಡಿಲ್ಲ. ಈಗ ಅವರು ಅಕ್ರಮ ಚಿನ್ನ ಸಾಗಣೆ ಮಾಡಿದ ಆರೋಪದಲ್ಲಿ ಸುದ್ದಿ ಆಗಿದ್ದಾರೆ.

ಪೊಲೀಸ್ ಅಧಿಕಾರಿ ಮಗಳು:

ಐಪಿಎಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ರನ್ಯಾ ಮಲಮಗಳು. ರಾಮಚಂದ್ರ ರಾವ್ 2ನೇ ಮದುವೆ ಆಗಿದ್ದಾರೆ. ಆ ಮಹಿಳೆಗೂ ಇದು ಎರಡನೇ ಮದುವೆ. ರಾಮಚಂದ್ರ ಪತ್ನಿಯ ಮೊದಲ ಪತಿಯಿಂದ ಹುಟ್ಟಿದವರೇ ರನ್ಯಾ. ಮೊಟ್ಟ ಮೊದಲನೇ ಬಾರಿಗೆ IPS ಅಧಿಕಾರಿಯ ಮಗಳ ಅರೆಸ್ಟ್ ಆದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Tue, 4 March 25

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!