AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ನಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂಟಿಂಗ್ ಸ್ಥಗಿತ

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಲ್ಕು ದಿನದಲ್ಲಿ ಮೂರು ವಿಘ್ನ: ನಾಲ್ಕು ದಿನದಲ್ಲಿ ‘ಭಜರಂಗಿ 2’ ಚಿತ್ರಕ್ಕೆ ಮೂರು ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ […]

ಭಜರಂಗಿ 2  ಸಿನಿಮಾ ಸೆಟ್​ನಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂಟಿಂಗ್ ಸ್ಥಗಿತ
ಸಾಧು ಶ್ರೀನಾಥ್​
|

Updated on: Jan 19, 2020 | 6:00 PM

Share

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಾಲ್ಕು ದಿನದಲ್ಲಿ ಮೂರು ವಿಘ್ನ: ನಾಲ್ಕು ದಿನದಲ್ಲಿ ‘ಭಜರಂಗಿ 2’ ಚಿತ್ರಕ್ಕೆ ಮೂರು ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಸೆಟ್ ಹಾಕಲಾಗಿದೆ. ಜನವರಿ 16ರಂದು ಶಾರ್ಟ್​ ಸರ್ಕ್ಯೂಟ್​ನಿಂದ ಮೊದಲ ಬಾರಿಗೆ ಸೆಟ್​ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣವೇ ಬೆಂಕಿ ನಂದಿಸಿದ್ದರಿಂದ ಯಾವುದೇ ಅಪಾಯ ಸಮಭವಿಸಿರಲಿಲ್ಲ. ನಂತರ ಜನವರಿ 18ರಂದು ಕಲಾವಿದರಿದ್ದ ಬಸ್ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ಬಳಿ ಅಪಘಾತಕ್ಕೀಡಾಗಿತ್ತು. ಶೂಟಿಂಗ್​ಗೆ ತೆರಳುತ್ತಿದ್ದ ಕಲಾವಿದರ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿತ್ತು. ಅಪಘಾತಕ್ಕೀಡಾದ ಬಸ್​ನಲ್ಲಿ 60 ಮಂದಿ ಕಲಾವಿದರಿದ್ದರು.

ಭಜರಂಗಿ 2 ಶೂಟಿಂಗ್ ಸ್ಥಗಿತ: ಇಂದು ಮೋಹನ್.ಬಿ ಕೆರೆ ಸ್ಟುಡಿಯೋದಲ್ಲಿ ಸುಮಾರು 200 ಜನ ಕಲಾವಿದರು ಕೆಲಸ ಮಾಡುತ್ತಿದ್ದರು. ಭಜರಂಗಿ 2 ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ​ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಸದ್ಯ ಭಜರಂಗಿ 2 ಚಿತ್ರದ ಶೂಟಿಂಗ್ ಸ್ಥಗಿತಗೊಳಿಸಿದ ಚಿತ್ರ ತಂಡ ಸ್ಥಳದಿಂದ ವಾಪಸಾಗಿದೆ.

https://www.facebook.com/Tv9Kannada/videos/200225714355799/

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?