AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ನಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂಟಿಂಗ್ ಸ್ಥಗಿತ

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಲ್ಕು ದಿನದಲ್ಲಿ ಮೂರು ವಿಘ್ನ: ನಾಲ್ಕು ದಿನದಲ್ಲಿ ‘ಭಜರಂಗಿ 2’ ಚಿತ್ರಕ್ಕೆ ಮೂರು ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ […]

ಭಜರಂಗಿ 2  ಸಿನಿಮಾ ಸೆಟ್​ನಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂಟಿಂಗ್ ಸ್ಥಗಿತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 19, 2020 | 6:00 PM

Share

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಾಲ್ಕು ದಿನದಲ್ಲಿ ಮೂರು ವಿಘ್ನ: ನಾಲ್ಕು ದಿನದಲ್ಲಿ ‘ಭಜರಂಗಿ 2’ ಚಿತ್ರಕ್ಕೆ ಮೂರು ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಸೆಟ್ ಹಾಕಲಾಗಿದೆ. ಜನವರಿ 16ರಂದು ಶಾರ್ಟ್​ ಸರ್ಕ್ಯೂಟ್​ನಿಂದ ಮೊದಲ ಬಾರಿಗೆ ಸೆಟ್​ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣವೇ ಬೆಂಕಿ ನಂದಿಸಿದ್ದರಿಂದ ಯಾವುದೇ ಅಪಾಯ ಸಮಭವಿಸಿರಲಿಲ್ಲ. ನಂತರ ಜನವರಿ 18ರಂದು ಕಲಾವಿದರಿದ್ದ ಬಸ್ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ಬಳಿ ಅಪಘಾತಕ್ಕೀಡಾಗಿತ್ತು. ಶೂಟಿಂಗ್​ಗೆ ತೆರಳುತ್ತಿದ್ದ ಕಲಾವಿದರ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿತ್ತು. ಅಪಘಾತಕ್ಕೀಡಾದ ಬಸ್​ನಲ್ಲಿ 60 ಮಂದಿ ಕಲಾವಿದರಿದ್ದರು.

ಭಜರಂಗಿ 2 ಶೂಟಿಂಗ್ ಸ್ಥಗಿತ: ಇಂದು ಮೋಹನ್.ಬಿ ಕೆರೆ ಸ್ಟುಡಿಯೋದಲ್ಲಿ ಸುಮಾರು 200 ಜನ ಕಲಾವಿದರು ಕೆಲಸ ಮಾಡುತ್ತಿದ್ದರು. ಭಜರಂಗಿ 2 ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ​ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಸದ್ಯ ಭಜರಂಗಿ 2 ಚಿತ್ರದ ಶೂಟಿಂಗ್ ಸ್ಥಗಿತಗೊಳಿಸಿದ ಚಿತ್ರ ತಂಡ ಸ್ಥಳದಿಂದ ವಾಪಸಾಗಿದೆ.

https://www.facebook.com/Tv9Kannada/videos/200225714355799/

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್