AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ಕನ್ನಡದ ನಿರ್ದೇಶಕನ ಸಾವು

ಸಂಗೀತ್ ಸಾಗರ್ ಶಿವಮೊಗ್ಗದಲ್ಲಿ ‘ಪಾತ್ರಧಾರಿ’ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಸದ್ಯ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿಯೇ ಸಾಗರ್ ಮೃತದೇಹವನ್ನು ಇಡಲಾಗಿದೆ.

ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ಕನ್ನಡದ ನಿರ್ದೇಶಕನ ಸಾವು
ನಿರ್ದೇಶಕ
ರಾಜೇಶ್ ದುಗ್ಗುಮನೆ
|

Updated on: Dec 04, 2025 | 12:58 PM

Share

ಸಾವು ಯಾವ ಕ್ಷಣದಲ್ಲಿ ಹೇಗೆ ಬರುತ್ತದೆ ಎಂದು ಊಹಿಸೋದು ತುಂಬಾನೇ ಕಷ್ಟ. ನಟಿಸುವಾಗಲೇ ನಿಧನ ಹೊಂದಿದ ಅನೇಕ ಕಲಾವಿದರು ಇದ್ದಾರೆ. ಈಗ ಕನ್ನಡದ ನಿರ್ದೇಶಕನೋರ್ವ ಸಿನಿಮಾ ಚಿತ್ರೀಕರಣದ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ‘ಪಾತ್ರಧಾರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಮೃತ ದುರ್ಧೈವಿ. ಅವರ ಸಾವಿನಿಂದ ಇಡೀ ಕುಟುಂಬಕ್ಕೆ ಶಾಕ್ ಉಂಟಾಗಿದೆ. ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತೆ ಆಗಿದೆ.

ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ‘ಪಾತ್ರಧಾರಿ’ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಸದ್ಯ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿಯೇ ಸಾಗರ್ ಮೃತದೇಹವನ್ನು ಇಡಲಾಗಿದೆ.

ಇದನ್ನೂ ಓದಿ: ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?

ಈ ಮೊದಲು ‘ಸ್ನೇಹಿತ’ ಹೆಸರು 2021ರಲ್ಲು ರಿಲೀಸ್ ಆಯಿತು. ‘ಓ ಪ್ರೀತಿಯಾ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಕೆಲವು ಸಿನಿಮಾಗಳಿಗೆ ಸಂಗೀತ ಸಂಯೋಜಕನಾಗಿ ಕೆಲಸ ಮಾಡಿದ್ದಾರೆ.

ಸಾಗರ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಸಾಗರ್ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಸಾಗರ್ ಪತ್ನಿ ಸುಶ್ಮಿತಾ, ಮಗಳು ವಂಧ್ಯಾ ಕಣ್ಣೀರಲ್ಲಿ ಕೈತೊಳೆಯುವಂತೆ ಆಗಿದೆ. ಇನ್ನು, ಆಸ್ಪತ್ರೆಯ ಬಿಲ್ ಪಾವತಿಯಾಗಿಲ್ಲ. ಸಿನಿಮಾ ತಂಡದವರು ಬಿಲ್ ಪಾವತಿಸುತ್ತಾರೆ ಎಂದು ಕುಟುಂಬಸ್ಥರು ಕಾಯುತ್ತಿದ್ದಾರೆ. ಸಿನಿಮಾದ ನಿರ್ಮಾಪಕರು ಹಾಗೂ ಚಿತ್ರತಂಡ ಆಸ್ಪತ್ರೆಗೆ ಇನ್ನಷ್ಟೇ ಭೇಟಿ ನೀಡುವ ಸಾಧ್ಯತೆ ಇದೆ. ಬಿಲ್ ಪಾವತಿ ಬಳಿಕ ಮೃತದೇಹ ಕೊಂಡೋಯ್ಯವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ