AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್​ ಒಡನಾಡಿ, ನಿರ್ದೇಶಕ ವಿಆರ್​ ಭಾಸ್ಕರ್​ ಅನಾರೋಗ್ಯದಿಂದ ನಿಧನ

ವಿ.ಆರ್​. ಭಾಸ್ಕರ್ ಅವರು ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನವರು. ಚಿಕ್ಕ ವಯಸ್ಸಿನಿಂದಲೂ ಸಿನಿಮಾ ಬಗ್ಗೆ ಅವರು ಆಸಕ್ತಿ ಹೊಂದಿದ್ದರು. ವಿಷ್ಣುವರ್ಧನ್​ ನಟನೆಯ ಅನೇಕ ಸಿನಿಮಾಗಳಿಗೆ ಭಾಸ್ಕರ್​ ಕೆಲಸ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು (ಸೆಪ್ಟೆಂಬರ್​ 14) ಮುಂಜಾನೆ ನಿಧನರಾದರು. ಮೈಸೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ವಿಷ್ಣುವರ್ಧನ್​ ಒಡನಾಡಿ, ನಿರ್ದೇಶಕ ವಿಆರ್​ ಭಾಸ್ಕರ್​ ಅನಾರೋಗ್ಯದಿಂದ ನಿಧನ
ವಿ.ಆರ್​. ಭಾಸ್ಕರ್​
Follow us
ಮದನ್​ ಕುಮಾರ್​
|

Updated on:Sep 14, 2023 | 1:06 PM

ಕನ್ನಡ ಚಿತ್ರರಂಗದಲ್ಲಿ (Sandalwood) ಗುರುತಿಸಿಕೊಂಡಿದ್ದ ನಿರ್ದೇಶಕ, ಸಂಭಾಷಣಕಾರ, ಗೀತ ಸಾಹಿತಿ ವಿ.ಆರ್​. ಭಾಸ್ಕರ್​ (V R Bhaskar) ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ಮೈಸೂರಿನಲ್ಲಿ ಗುರುವಾರ (ಸೆ.14) ವಿಧಿವಶರಾಗಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದ ಭಾಸ್ಕರ್​ ಅವರು ಡಾ. ವಿಷ್ಣುವರ್ಧನ್​ (Dr Vishnuvardhan) ಅವರ ಜೊತೆ ಒಡನಾಟ ಹೊಂದಿದ್ದರು. ನಟನಾಗಿಯೂ ಅವರು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ವಿ.ಆರ್​. ಭಾಸ್ಕರ್​ ಅವರ ಜೀವನದಲ್ಲಿ ಕಷ್ಟ ಆವರಿಸಿತ್ತು. ಕೆಲವೇ ದಿನಗಳ ಹಿಂದೆ ಪತ್ನಿ ಮತ್ತು ಮಗನನ್ನು ಕೂಡ ಅವರು ಅನಾರೋಗ್ಯದಿಂದ ಕಳೆದುಕೊಂಡಿದ್ದರು. ಮೈಸೂರಿನಲ್ಲೇ ವಿ.ಆರ್​. ಭಾಸ್ಕರ್​ ಅಂತ್ಯಕ್ರಿಯೆ ನಡೆಯಲಿದೆ.

ವಿ.ಆರ್​. ಭಾಸ್ಕರ್ ಅವರು ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನವರು. ಚಿಕ್ಕ ವಯಸ್ಸಿನಿಂದಲೂ ಸಿನಿಮಾ ಬಗ್ಗೆ ಅವರು ಆಸಕ್ತಿ ಹೊಂದಿದ್ದರು. ಮೈಸೂರಿಗೆ ಬಂದ ಬಳಿಕ ಸಿನಿಮಾದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ನಿರ್ಧರಿಸಿದರು. ಆದರೆ ಆರಂಭದ ದಿನಗಳಲ್ಲಿ ಕುಟುಂಬದಿಂದ ಭಾಸ್ಕರ್​ ಅವರಿಗೆ ಉತ್ತೇಜನ ಸಿಗಲಿಲ್ಲ. ನಂತರ ಹಠ ಹಿಡಿದು ಫಿಲ್ಮ್​ ಇನ್ಸ್​ಟಿಟ್ಯೂಟ್​ಗೆ ಸೇರಿಕೊಂಡು ಸಿನಿಮಾದ ಪಾಠಗಳನ್ನು ಕಲಿತರು.

ಇದನ್ನೂ ಓದಿ: ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

‘ರುದ್ರನಾಗ’ ಸಿನಿಮಾಗೆ ಸಹ ನಿರ್ದೇಶಕರಾಗಿ ವಿ.ಆರ್​. ಭಾಸ್ಕರ್​ ಅವರು ಕೆಲಸ ಮಾಡಿದ್ದರು. ಅವರ ಕೆಲಸವನ್ನು ಮೆಚ್ಚಿದ ವಿಷ್ಣುವರ್ಧನ್​ ಅವರು ಅನೇಕ ಅವಕಾಶಗಳನ್ನು ನೀಡಿದರು. ವಿಷ್ಣುವರ್ಧನ್​ ಅವರು ಸ್ವಂತ ಬ್ಯಾನರ್​ನಲ್ಲಿ ‘ಆರಾಧನೆ’ ಸಿನಿಮಾ ಮಾಡಿದ್ದರು. ಆ ಚಿತ್ರದಲ್ಲಿಯೂ ಅವರಿಗೆ ಅವಕಾಶ ಸಿಕ್ಕಿತು. ‘ರುದ್ರನಾಗ’ದಿಂದ ‘ಆಪ್ತರಕ್ಷಕ’ ತನಕ ವಿಷ್ಣುವರ್ಧನ್​ ನಟನೆಯ ಬಹುತೇಕ ಸಿನಿಮಾಗಳಲ್ಲಿ ವಿ.ಆರ್​. ಭಾಸ್ಕರ್​ ಕೆಲಸ ಮಾಡಿದ್ದರು.

ಇದನ್ನೂ ಓದಿ: ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ವಿ.ಆರ್​. ಭಾಸ್ಕರ್ ಅವರಿಗೆ 60 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ತಾಯಿಯು ಚಾಮುಂಡಿ ಬೆಟ್ಟದ ಬಳಿ ಇರುವ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ನಡೆಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:56 pm, Thu, 14 September 23

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್