AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾಗೆ ವಿಶ್ ಮಾಡಿ ‘ಕೆಡಿ’ ಚಿತ್ರದ ಬೆಂಬಲಕ್ಕೆ ನಿಂತ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಧ್ರುವ ಸರ್ಜಾಗೆ ಸೆಲೆಬ್ರಿಟಿಗಳು ಬೆಂಬಲ ಸೂಚಿಸುತ್ತಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಶುಭ ಕೋರಿ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ. ಇದರಿಂದಾಗಿ ಚಿತ್ರತಂಡಕ್ಕೆ ಇನ್ನಷ್ಟು ಬಲ ಬಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಧ್ರುವ ಸರ್ಜಾಗೆ ವಿಶ್ ಮಾಡಿ ‘ಕೆಡಿ’ ಚಿತ್ರದ ಬೆಂಬಲಕ್ಕೆ ನಿಂತ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು
Dhruva Sarja
ಮದನ್​ ಕುಮಾರ್​
|

Updated on: May 01, 2026 | 10:48 PM

Share

ಏಪ್ರಿಲ್ 30ರಂದು ತೆರೆಕಂಡ ‘ಕೆಡಿ’ ಸಿನಿಮಾ (KD Movie) ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ನಿರ್ದೇಶಕ ಜೋಗಿ ಪ್ರೇಮ್ ಅವರು ಆ್ಯಕ್ಷನ್ ಮತ್ತು ಸೆಂಟಿಮೆಂಟ್ ಬೆರೆತ ಕಥೆಯನ್ನು ತೆರೆಗೆ ತಂದಿದ್ದಾರೆ. ಅದ್ದೂರಿ ಬಜೆಟ್​​ನಲ್ಲಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ‘ಕೆಡಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ ಸ್ಯಾಂಡಲ್​ವುಡ್ ಮಂದಿ ಖುಷಿ ಆಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ಸಿನಿಮಾಗೆ ಶುಭ ಹಾರೈಸಿದ್ದಾರೆ.

ಸಾಮಾನ್ಯವಾಗಿ ಚಿತ್ರರಂಗದಲ್ಲಿ ಎಲ್ಲ ಸೆಲೆಬ್ರಿಟಿಗಳು ತಮ್ಮದಲ್ಲದ ಸಿನಿಮಾಗೆ ಶುಭ ಹಾರೈಸುವುದು ವಿರಳ. ಆದರೆ ‘ಕೆಡಿ’ ಸಿನಿಮಾಗಾಗಿ ಹತ್ತು ಹಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಪೋಸ್ಟ್ ಮಾಡುತ್ತಿದ್ದಾರೆ. ಆ ಮೂಲಕ ಧ್ರುವ ಸರ್ಜಾ ಹಾಗೂ ಇಡೀ ತಂಡದ ಬೆನ್ನು ತಟ್ಟಲಾಗುತ್ತಿದೆ. ಇದರಿಂದ ‘ಕೆಡಿ’ ಬಳಗಕ್ಕೆ ಬಲ ಹೆಚ್ಚಿದಂತಾಗಿದೆ.

ಎಪಿ ಅರ್ಜುನ್, ತರುಣ್ ಸುಧೀರ್, ಡಾರ್ಲಿಂಗ್ ಕೃಷ್ಣ, ಉಗ್ರಂ ಮಂಜು, ಡಾಲಿ ಧನಂಜಯ್, ನವೀನ್ ಶಂಕರ್, ರಾಗಿಣಿ ದ್ವಿವೇದಿ, ದೀಕ್ಷಿತ್ ಶೆಟ್ಟಿ, ಚಂದನ್ ಶೆಟ್ಟಿ, ಚೈತ್ರಾ ಆಚಾರ್, ಜ್ಯೋತಿ ರೈ, ಅಶ್ವಿನಿ ಪುನೀತ್ ರಾಜ್​ಕುಮಾರ್, ಪ್ರಮೋದ್, ತನಿಷಾ ಕುಪ್ಪಂಡ, ಅಮೃತಾ ಅಯ್ಯಂಗಾರ್, ಪೃಥ್ವಿ ಅಂಬಾರ್, ಸಿಂಪಲ್ ಸುನಿ, ಸಂಜನಾ ಆನಂದ್, ರೂಪೇಶ್ ಶೆಟ್ಟಿ, ಯಶ ಶಿವಕುಮಾರ್, ಭಾವನಾ ರಾವ್, ಚೇತನ್ ಕುಮಾರ್, ಸತೀಶ್ ನೀನಾಸಂ, ಚಿಕ್ಕಣ್ಣ ಸೇರಿದಂತೆ ಹಲವರು ಈ ಸಿನಿಮಾಗೆ ವಿಶ್ ಮಾಡಿದ್ದಾರೆ.

‘ಕೆಡಿ’ ಬಿಡುಗಡೆಗೂ ಮುನ್ನವೇ ಈ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆದವು. ಪ್ರೇಮ್ ನಿರ್ದೇಶನದ ಸಿನಿಮಾಗಳಲ್ಲಿ ಹಾಡುಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಅದು ‘ಕೆಡಿ’ ವಿಚಾರದಲ್ಲೂ ಮುಂದುವರಿದಿದೆ. ಅರ್ಜುನ್ ಜನ್ಯ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಹಾಡುಗಳನ್ನು ಪ್ರೇಕ್ಷಕರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಇದನ್ನೂ ಓದಿ: KD Movie Review: ಧ್ರುವ ಸರ್ಜಾ ಅಭಿಮಾನಿಗಳಿಗೆ ಇಷ್ಟ ಆಗುವ ರಕ್ತದೋಕುಳಿಯ ‘ಕೆಡಿ’ ಕಹಾನಿ

ಮೊದಲ ದಿನ ಈ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿತು. ಮೇ 1ರಂದು ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜೆ ಇದೆ. ಬಳಿಕ ವೀಕೆಂಡ್ ಬರಲಿದೆ. ಹಾಗಾಗಿ ಸತತವಾಗಿ ಈ ಸಿನಿಮಾಗೆ ನಾಲ್ಕು ದಿನಗಳ ಕಾಲ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಅವಕಾಶ ಸಿಗುತ್ತಿದೆ. ಶೀಘ್ರದಲ್ಲೇ ಈ ಸಿನಿಮಾ ಬೇರೆ ಭಾಷೆಗಳಲ್ಲೂ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ