AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದಲ್ಲಿ ಮತ್ತೆ ಮೀಟೂ ಬಿರುಗಾಳಿ? ತನಿಖೆಗೆ 153 ಮಂದಿ ಒತ್ತಾಯ

ಸ್ಯಾಂಡಲ್​ವುಡ್​ನಲ್ಲಿ ಈ ಹಿಂದೆ ಕೆಲವು ನಟಿಯರು ಮೀಟೂ ಆರೋಪ ಮಾಡಿದ್ದರು. ಆನಂತರ ಆ ವಿಷಯ ತಣ್ಣಗಾಯಿತು. ಈಗ ಮಲಯಾಳಂ ಚಿತ್ರರಂಗದಲ್ಲಿ ‘ಹೇಮಾ ಸಮಿತಿ ವರದಿ’ ಸಲ್ಲಿಕೆ ಆದ ನಂತರ ಕನ್ನಡ ಚಿತ್ರರಂಗದಲ್ಲೂ ತನಿಖೆ ಆಗಬೇಕು ಎಂಬ ಅಭಿಪ್ರಾಯ ಹಲವರಿಂದ ವ್ಯಕ್ತವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೈರ್​ ಸಂಸ್ಥೆ ಪತ್ರ ಬರೆದಿದೆ.

ಕನ್ನಡ ಚಿತ್ರರಂಗದಲ್ಲಿ ಮತ್ತೆ ಮೀಟೂ ಬಿರುಗಾಳಿ? ತನಿಖೆಗೆ 153 ಮಂದಿ ಒತ್ತಾಯ
ಸಹಿ ಮಾಡಿದ ಪ್ರಮುಖ ಸೆಲೆಬ್ರಿಟಿಗಳು
ಮದನ್​ ಕುಮಾರ್​
|

Updated on: Sep 04, 2024 | 3:18 PM

Share

ಕೆಲವು ವರ್ಷಗಳ ಹಿಂದೆ ಸುದ್ದಿ ಆಗಿದ್ದ ಮೀಟೂ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಬೇರೆ ಬೇರೆ ಭಾಷೆಯ ಚಿತ್ರರಂಗದ ಹಲವು ನಟಿಯರು ತಮಗೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಕೇರಳದ ‘ಹೇಮಾ ಸಮಿತಿ ವರದಿ’. ಹೌದು, ಹೇಮಾ ಕಮಿಟಿ ರಿಪೋರ್ಟ್​ ಪ್ರಕಟ ಆದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ. ಫೈರ್​ (ಫಿಲ್ಮ್​ ಇಂಡಸ್ಟ್ರೀ ಫಾರ್​ ರೈಟ್ಸ್​ ಆ್ಯಂಡ್​ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ನಟರು, ನಟಿಯರು, ಸಾಹಿತಿಗಳು, ಪತ್ರಕರ್ತರು, ನಿರ್ದೇಶಕರು, ನಿರ್ಮಾಪಕರು ಹಾಗೂ ವಿವಿಧ ವಿಭಾಗಗಳ ತಂತ್ರಜ್ಞರು ಸೇರಿದಂತೆ ಒಟ್ಟು 153 ಜನರು ಸಹಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ಹಿಂಸೆಯ ಸಮಸ್ಯೆಗಳೂ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಫೈರ್​ ಸಂಸ್ಥೆ ಮನವಿ ಮಾಡಿದೆ.

ವರದಿಯನ್ನು 3 ತಿಂಗಳ ಒಳಗೆ ಪೂರ್ಣಗೊಳಿಸಬೇಕು ಮತ್ತು ವರದಿಯ ವಿವರನ್ನು ಶೀಘ್ರವೇ ಸಾರ್ವಜನಿಕಗೊಳಿಸಬೇಕು ಎಂದು ಫೈರ್​ ಸಂಸ್ಥೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಮಲಯಾಳಂ ಚಿತ್ರರಂಗದ ರೀತಿಯೇ ಕನ್ನಡ ಚಿತ್ರರಂಗದಲ್ಲೂ ಒಂದು ವೇಳೆ ತನಿಖೆ ನಡೆದು ವರದಿ ಪ್ರಕಟವಾದರೆ ಒಂದಷ್ಟು ಮಂದಿಯ ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಹೇಮಾ ಸಮಿತಿ ರೀತಿ ಟಾಲಿವುಡ್​ನಲ್ಲೂ ವರದಿ ಪ್ರಕಟವಾಗಲಿ’: ಸಮಂತಾ ಒತ್ತಾಯ

ಕವಿತಾ ಲಂಕೇಶ್​, ಐಂದ್ರಿತಾ ರೇ, ಅಕ್ಷತಾ ಪಾಂಡವಪುರ, ಶ್ರುತಿ ಹರಿಹರನ್​, ಆಶಿಕಾ ರಂಗನಾಥ್​, ಅಮೃತಾ ಅಯ್ಯಂಗಾರ್, ಕಿಶೋರ್​, ಕವಿರಾಜ್​, ಚೈತ್ರಾ ಜೆ. ಆಚಾರ್​, ಮಂಸೋರೆ, ಮೇಘನಾ ಗಾಂವ್ಕರ್​, ಮಾನ್ವಿತ ಕಾಮತ್​, ಪವನ್​ ಕುಮಾರ್​, ಪೂಜಾ ಗಾಂಧಿ, ಚೇತನ್​, ಜಯತೀರ್ಥ, ಸುದೀಪ್, ರಮ್ಯಾ, ಶಾನ್ವಿ ಶ್ರೀವಾಸ್ತವ ಮುಂತಾದವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಅತ್ತ, ಟಾಲಿವುಡ್​ನಲ್ಲಿ ಕೂಡ ‘ಹೇಮಾ ಸಮಿತಿ’ ಮಾದರಿಯಲ್ಲೇ ಕಮಿಟಿ ರಚಿಸಿ ತನಿಖೆ ಮಾಡಬೇಕು ಎಂದು ಸಮಂತಾ ರುತ್​ ಪ್ರಭು, ಲಕ್ಷ್ಮಿ ಮಂಚು ಮುಂತಾದವರು ಆಗ್ರಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ