ನಮ್ಮವ್ರೇ ನಮ್ಮ ಕಾಲು ಎಳೀತಾರೆ: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಕೊರತೆಗೆ ಪ್ರೇಮ್ ಬೇಸರ

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಬರಬೇಕಿದೆ ಎಂದು ನಟಿ ರಮ್ಯಾ ಅವರು ಇತ್ತೀಚೆಗೆ ಹೇಳಿದ್ದರು. ಈಗ ನಿರ್ದೇಶಕ ಜೋಗಿ ಪ್ರೇಮ್ ಕೂಡ ಅದೇ ವಿಚಾರವಾಗಿ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಎಂಬುದನ್ನು ಅವರು ಹೇಳಿದ್ದಾರೆ. ‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆ ವೇಳೆ ಪ್ರೇಮ್ ಅವರು ಮಾತನಾಡಿದರು.

ನಮ್ಮವ್ರೇ ನಮ್ಮ ಕಾಲು ಎಳೀತಾರೆ: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಕೊರತೆಗೆ ಪ್ರೇಮ್ ಬೇಸರ
Director Prem

Updated on: Jul 13, 2025 | 9:47 AM

ಕನ್ನಡ ಸಿನಿಮಾ‌ ಇಂಡಸ್ಟ್ರಿಯಲ್ಲಿ (Kannada Film Industry) ಒಗ್ಗಟ್ಟಿನ ಕೊರತೆ ಇದೆಯಾ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಿದೆ. ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಈಗ ನಿರ್ದೇಶಕ ಜೋಗಿ ಪ್ರೇಮ್ (Director Prem) ಕೂಡ ‘ನಮ್ಮಲ್ಲಿ ಒಗ್ಗಟ್ಟಿಲ್ಲ’ ಅಂತ ಆಕ್ರೋಶ ಹೊರ ಹಾಕಿದ್ದಾರೆ. ಇತ್ತೀಚೆಗೆ ‘ಕೆಡಿ: ದಿ ಡೆವಿಲ್’ (KD The Devil) ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಅವರು ಸ್ಯಾಂಡಲ್​ವುಡ್ ಪರಿಸ್ಥಿತಿ ಬಗ್ಗೆ ಮಾತನಾಡಿದರು.

‘ಬೇರೆಕಡೆವರು ನಮಗೆ ತುಂಬಾ ಸಪೋರ್ಟ್ ಮಾಡ್ತಾರೆ. ಆದ್ರೆ ಇಲ್ಲಿ ನಮ್ಮವ್ರೇ ನಮ್ಮ ಕಾಲು ಎಳೀತಾರೆ. ಅದು ನಿಲ್ಲಬೇಕು. ನಮ್ಮವರಿಗೆ ನಾವು ಸಪೋರ್ಟ್ ಮಾಡಬೇಕು.
ಇಲ್ಲಿ ಅಣ್ಣ ಇದ್ರೆ ತಮ್ಮ ಕಾಯ್ತಿರ್ತಾನೆ ಕಲ್ಲು ಎತ್ತಿ ಹಾಕೋಕೆ’ ಎಂದು ಜೋಗಿ ಪ್ರೇಮ್ ಹೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

‘ನಮ್ಮ ಮನೆಯಲ್ಲಿ ನಾವು ನಾವೇ ಹೊಡೆದಾಡಿಕೊಂಡು ಸಾಯೋದಕ್ಕಿಂತ ಎಲ್ಲರೂ ಚೆನ್ನಾಗಿರೋಣ ಅನ್ನೋದು ಒಂದು ಆಸೆ. ಇದು ಬಿಟ್ಟು ಬೇರೆ ಏನೂ ಉದ್ದೇಶ ಇಲ್ಲ. ಸಿನಿಮಾಗಿಂತ ದೊಡ್ಡವರು ಇಲ್ಲಿ ಯಾರೂ ಇಲ್ಲ. ನಾವು ಇರುವುದೇ ಜನರಿಗೆ ಮನರಂಜನೆ ನೀಡೋಕೆ. ಡಾ. ರಾಜ್​ಕುಮಾರ್ ಸಮಯದಲ್ಲಿ ಒಗ್ಗಟ್ಟು ಇತ್ತು. ಅಂಬರೀಷ್ ಕರೆದಾಗ ಎಲ್ಲರೂ ಬರುತ್ತಿದ್ದರು. ಈಗ ಯಾರೂ ಬರುತ್ತಿಲ್ಲ’ ಎಂದಿದ್ದಾರೆ ಪ್ರೇಮ್.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

‘ನಮಗೆ ಎನೋ ಸಮಸ್ಯೆ ಆಯಿತು ಎಂದಾಗ ನಾವು ಹೇಳಿಕೊಳ್ಳಬೇಕು. ಆಗ ಕರೆಯರೆ ಯಾರು ಬರುತ್ತಾರೆ? ಇದು ಸಮುದ್ರ ಇದ್ದಂಗೆ. ಅವರವರ ಸಾಮರ್ಥ್ಯ ಇದ್ದಷ್ಟು ಈಜುತ್ತಾರೆ ಅಷ್ಟೇ’ ಎಂದು ಪ್ರೇಮ್ ಹೇಳಿದ್ದಾರೆ.

ಇದನ್ನೂ ಓದಿ: ಓಪನ್ ಆಗಿ ಹೇಳ್ತೀನಿ, ಏನು ಬೇಕಾದ್ರೂ ಟ್ರೋಲ್ ಮಾಡಿಕೊಳ್ಳಿ: ಜೋಗಿ ಪ್ರೇಮ್

ಈ ಹಿಂದೆ ಕೂಡ ಕೆಲವು‌ ನಟರು ನಿರ್ದೇಶಕರು, ಸ್ಟಾರ್​ಗಳು ಹೊಸಬರಿಗೆ ಸಪೋರ್ಟ್ ಮಾಡಲ್ಲ ಅಂತ ಹೇಳಿದ್ದರು. ಕರವೇ ಅಧ್ಯಕ್ಷ ನಾರಾಯಣ ಗೌಡ ಕೂಡ ‘ಕನ್ನಡ ಚಿತ್ರರಂಗವನ್ನು ರಿಪೇರಿ ಮಾಡಬೇಕಿದೆ, ಹೊಸಬರ ಟೀಸರ್ ರಿಲೀಸ್​ಗೆ ಸ್ಟಾರ್ ನಟರಿಗೆ ಆಹ್ವಾನ ನೀಡೋಕೆ‌ ಹೋದ್ರೂ ಯಾರೂ ಸ್ಪಂದಿಸಿಲ್ಲ’ ಅಂತ ಆಕ್ರೋಶ ಹೊರ ಹಾಕಿದ್ದರು.

‘ಹೆಣ್ಮಕ್ಕಳಿಗೆ ಚಿತ್ರರಂಗದಲ್ಲಿ ಹೆಚ್ಚು ಮನ್ನಣೆ ಸಿಗುತ್ತಿಲ್ಲ. ಈಗ ಒಗ್ಗಟ್ಟು ಇಲ್ಲದಂತೆ ಆಗಿದೆ. ಒಂದು ಸಿನಿಮಾ ರಿಲೀಸ್ ಆದರೆ ಯಾರೂ ಅದರ ಪ್ರಚಾರ ಮಾಡೋಕೆ ಹೋಗುತ್ತಿಲ್ಲ. ಬೇರೆಯವರ ಬಗ್ಗೆ ಯಾರೂ ಮಾತನಾಡುತ್ತಿಲ್ಲ’ ಎಂದು ರಮ್ಯಾ ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us