AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಕೋಟಿ ರಾಮು ಅಂತ್ಯಕ್ರಿಯೆಗೆ ಕುಣಿಗಲ್​ನಲ್ಲಿ ಸಕಲ ಸಿದ್ಧತೆ

ಬೆಂಗಳೂರಿನಿಂದ ಬೆಳಗ್ಗೆ 9 ಗಂಟೆಗೆ ರಾಮು ಅವರ ಪಾರ್ಥಿವ ಶರೀರ ರವಾನೆ ಆಗಿದೆ. ಪತ್ನಿ ಮಾಲಾಶ್ರೀ ಮತ್ತು ಕುಟುಂಬದ ಕೆಲವೇ ಕೆಲವು ಮಂದಿ ಸದಸ್ಯರು ಅಂತ್ರಕ್ರಿಯೆಯಲ್ಲಿ ಭಾಗಿ ಆಗಲಿದ್ದಾರೆ.

ನಿರ್ಮಾಪಕ ಕೋಟಿ ರಾಮು ಅಂತ್ಯಕ್ರಿಯೆಗೆ ಕುಣಿಗಲ್​ನಲ್ಲಿ ಸಕಲ ಸಿದ್ಧತೆ
ನಿರ್ಮಾಪಕ ಕೋಟಿ ರಾಮು
Follow us
ಮದನ್​ ಕುಮಾರ್​
|

Updated on: Apr 27, 2021 | 10:41 AM

ಕೋಟಿ ರಾಮು ಎಂದೇ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ರಾಮು ಅವರು ಕೊರೊನಾ ವೈರಸ್​ ಸೋಂಕಿನಿಂದ ಸೋಮವಾರ (ಏ.26) ನಿಧನರಾಗಿದ್ದು ನೋವಿನ ಸಂಗತಿ. ಇಡೀ ಕನ್ನಡ ಚಿತ್ರರಂಗಕ್ಕೆ ಈ ಘಟನೆಯಿಂದ ಆಘಾತ ಆಗಿದ್ದು, ಎಲ್ಲರೂ ಶ್ರದ್ಧಾಂಜಲಿ ಅರ್ಪಿಸಿಸುತ್ತಿದ್ದಾರೆ. ರಾಮು ಪತ್ನಿ, ನಟಿ ಮಾಲಾಶ್ರೀ ಅವರನ್ನು ಸೆಲೆಬ್ರಿಟಿಗಳು ಸಂತೈಸುತ್ತಿದ್ದಾರೆ. ಇಂದು (ಏ.27) ರಾಮು ಅಂತ್ಯಕ್ರಿಯೆ ನೆರವೇರುತ್ತಿದೆ.

ತುಮಕೂರು ತಾಲೂಕಿನ ಕುಣಿಗಲ್ ಬಳಿಯ ಕೊಡಿಗೇನಹಳ್ಳಿಯಲ್ಲಿ ರಾಮು ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 12.30ರ ಸುಮಾರಿಗೆ ಅಂತ್ಯ ಸಂಸ್ಕಾರ ನೆರವೇರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನಿಂದ ಬೆಳಗ್ಗೆ 9 ಗಂಟೆಗೆ ರಾಮು ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗಿದೆ. ಮಾಲಾಶ್ರೀ ಸೇರಿದಂತೆ ಕುಟುಂಬದ ಕೆಲವೇ ಕೆಲವು ಮಂದಿ ಸದಸ್ಯರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗಲಿದ್ದಾರೆ. ಅದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.

‘ರಾಮು ಅವರು ಭಾನುವಾರದವರೆಗೂ ಮಾತಾಡಿದ್ದರು. ನಿನ್ನೆ ಕೂಡ ಮಧ್ಯಾಹ್ನ ಮೇಡಂ ಊಟ ತಂದು ಕೊಟ್ಟಿದ್ರು. ಆಗಲೂ ಚೆನ್ನಾಗೇ ಇದ್ರು. ಅರ್ಜುನ್ ಗೌಡ ಸಿನಿಮಾ ಬಗ್ಗೆ ಬಹಳ ನೀರೀಕ್ಷೆ ಇಟ್ಕೊಂಡಿದ್ರು. ಅದರ ಬಗ್ಗೆ ಬಹಳ ದೊಡ್ಡ ಕನಸು ಕಂಡಿದ್ದರು’ ಎಂದು ಅವರ ಆಪ್ತ ಗೋವಿಂದ್​ ರಾಜ್​ ಹೇಳಿದ್ದಾರೆ.

ರಾಮು ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ದರ್ಶನ್​, ಸುಮಲತಾ ಅಂಬರೀಶ್​, ಪುನೀತ್​ ರಾಜ್​ಕುಮಾರ್, ಶಿವರಾಜ್​ಕುಮಾರ್​, ಮಿಲನಾ ನಾಗರಾಜ್​, ದೇವರಾಜ್​, ಪ್ರಜ್ವಲ್​ ದೇವರಾಜ್​ ಮುಂತಾದವರು ರಾಮು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಜನರೆಲ್ಲರೂ ಕೊವಿಡ್​ನಿಂದ ಪಾರಾಗಲು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ಸೆಲೆಬ್ರಿಟಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೇವಲ 21ನೇ ವಯಸ್ಸಿಗೆ ಚಿತ್ರರಂಗಕ್ಕೆ ಬಂದ ರಾಮು, ನಂತರ ಕೋಟಿ ರಾಮು ಆಗಿದ್ದರ ಹಿಂದಿದೆ ಅಚ್ಚರಿಯ ಕಥೆ

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?