AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ‘ಅಯೋಗ್ಯ’ರು: ಹಿಟ್ ಸಿನಿಮಾದ ಸೀಕ್ವೆಲ್

Aayogya Sequel: 2018ರಲ್ಲಿ ಬಿಡುಗಡೆಯಾಗಿ ದೊಡ್ಡ ಹಿಟ್ ಆಗಿದ್ದ "ಅಯೋಗ್ಯ" ಸಿನಿಮಾದ ಸೀಕ್ವೆಲ್ ಘೋಷಣೆಯಾಗಿದೆ. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಮತ್ತೆ ಒಟ್ಟಾಗಿ ನಟಿಸುತ್ತಿದ್ದಾರೆ. ಮೂಲ ಸಿನಿಮಾದ ನಿರ್ದೇಶಕ ಮಹೇಶ್ ಕುಮಾರ್ ಅವರೇ ಸೀಕ್ವೆಲ್ ನಿರ್ದೇಶಿಸಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಮತ್ತೆ ಒಂದಾದ ‘ಅಯೋಗ್ಯ’ರು: ಹಿಟ್ ಸಿನಿಮಾದ ಸೀಕ್ವೆಲ್
Ayogya 2
ಮಂಜುನಾಥ ಸಿ.
|

Updated on: Dec 03, 2024 | 11:14 AM

Share

ಹಿಟ್ ಸಿನಿಮಾಗಳ ಸೀಕ್ವೆಲ್ ಅಥವಾ ಪ್ರೀಕ್ವೆಲ್ ಮಾಡುವ ಟ್ರೆಂಡ್ ಇತ್ತೀಚೆಗೆ ಹೆಚ್ಚಾಗಿದೆ. ಯಾವುದೇ ಸಿನಿಮಾ ಹಿಟ್ ಆದರೂ ಅದರ ಸೀಕ್ವೆಲ್ ಅಥವಾ ಪ್ರೀಕ್ವೆಲ್​ಗಳನ್ನು ಮಾಡಲಾಗುತ್ತಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಹಿಟ್ ಸಿನಿಮಾಗಳು ಸೀಕ್ವೆಲ್​ಗಳು ನಿರ್ಮಾಣಗೊಂಡಿವೆ. ಇದೀಗ ಇದೇ ಪಟ್ಟಿಗೆ ಸೇರಲಿದೆ ಸತೀಶ್ ನೀನಾಸಂ, ರಚಿತಾ ರಾಮ್ ನಟನೆಯ ‘ಅಯೋಗ್ಯ’ ಸಿನಿಮಾ. 2018 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿದ್ದ ‘ಅಯೋಗ್ಯ’ ಸಿನಿಮಾದ ಸೀಕ್ವೆಲ್ ನಿರ್ಮಾಣವಾಗುತ್ತಿದ್ದು, ಅದೇ ಜೋಡಿ ಈಗ ಮತ್ತೆ ಒಂದಾಗಿದೆ.

2018 ರಲ್ಲಿ ‘ಅಯೋಗ್ಯ’ ಸಿನಿಮಾ ಮಾಡಿದ್ದ ತಂಡವೇ ಒಟ್ಟಾಗಿ ಈಗ ‘ಅಯೋಗ್ಯ’ ಸಿನಿಮಾದ ಸೀಕ್ವೆಲ್ ನಿರ್ಮಾಣಕ್ಕೆ ಮುಂದಾಗಿದೆ. ಹಿಟ್ ಜೋಡಿಯಾದ ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಮತ್ತೆ ಒಂದಾಗಿದ್ದಾರೆ. ‘ಅಯೋಗ್ಯ’ ಸಿನಿಮಾ ನಿರ್ದೇಶನ ಮಾಡಿದ್ದ ಮಹೇಶ್ ಕುಮಾರ್ ಅವರೇ ಸೀಕ್ವೆಲ್​ನ ನಿರ್ದೇಶನವನ್ನೂ ಸಹ ಮಾಡಲಿದ್ದಾರೆ. ಸಿನಿಮಾಕ್ಕೆ ಎಂ ಮುನೇಗೌಡ ಅವರು ಬಂಡವಾಳ ಹೂಡಲಿದ್ದಾರೆ. 2018 ರ ‘ಅಯೋಗ್ಯ’ ಸಿನಿಮಾಕ್ಕೆ ಚಂದ್ರಶೇಖರ್ ಬಂಡವಾಳ ಹೂಡಿದ್ದರು.

ಸಿನಿಮಾದ ಘೋಷಣೆ ಅಧಿಕೃತವಾಗಿ ಆಗಿದ್ದು, ಸಿನಿಮಾದ ಮುಹೂರ್ತ ಡಿಸೆಂಬರ್ 11 ರಂದು ಅದ್ಧೂರಿಯಾಗಿ ನಡೆಯಲಿದೆ. ‘ಅಯೋಗ್ಯ’ ಸಿನಿಮಾಕ್ಕೆ ಸಂಗೀತ ನೀಡಿದ್ದ ಅರ್ಜುನ್ ಜನ್ಯ ಅವರೇ ಹೊಸ ಸಿನಿಮಾಕ್ಕೂ ಸಂಗೀತ ನೀಡಲಿದ್ದಾರೆ. ವಿಶ್ವಜಿತ್ ರಾವ್ ಅವರು ಕ್ಯಾಮೆರಾ ಕೆಲಸ ನಿರ್ವಹಿಸಲಿದ್ದಾರೆ. ಸುರೇಶ್ ಆರ್ಮುಗಂ ಎಡಿಟರ್. ಸಂಭಾಷಣೆಯನ್ನು ಮಾಸ್ತಿ ಬರೆಯಲಿದ್ದಾರೆ. ಭರ್ಜರಿ ಚೇತನ್ ಹಾಡುಗಳಿಗೆ ಸಾಹಿತ್ಯ ಒದಗಿಸಲಿದ್ದಾರೆ.

ಇದನ್ನೂ ಓದಿ:ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ

ರಚಿತಾ ರಾಮ್ ಅವರು ಈಗಾಗಲೇ ‘ಸಂಜು ವೆಡ್ಸ್ ಗೀತಾ’ ಸಿನಿಮಾದ ಸೀಕ್ವೆಲ್​ನಲ್ಲಿ ನಟಿಸಿದ್ದಾರೆ. ಇದೀಗ ‘ಅಯೋಗ್ಯ’ ಸೀಕ್ವೆಲ್​ನಲ್ಲಿ ನಟಿಸುತ್ತಿದ್ದಾರೆ. ಸತೀಶ್ ನೀನಾಸಂಗೆ ಇದು ಮೊದಲ ಸೀಕ್ವೆಲ್ ಸಿನಿಮಾ. 2018 ರಲ್ಲಿ ಬಿಡುಗಡೆ ಆಗಿದ್ದ ‘ಅಯೋಗ್ಯ’ ಸಿನಿಮಾ ಲಘು ಹಾಸ್ಯ ಮತ್ತು ಹಳ್ಳಿ ಕತೆ, ಒಳ್ಳೆಯ ಹಾಡುಗಳಿಂದಾಗಿ ಜನರ ಮೆಚ್ಚುಗೆ ಗಳಿಸಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ