ಕಾರ್ತಿಕ್ ಅಭಿಮಾನಿಗಳಿಗೆ ಗುಡ್ ನ್ಯೂಸ್; ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ ‘ಡೊಳ್ಳು’ ಸಿನಿಮಾ  

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’, ಸೂರ್ಯ ಅಭಿನಯದ ‘ಸೂರರೈ ಪೊಟ್ರು’, ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಬಾಜಿರಾವ್ ಮಸ್ತಾನಿ’, ಅಜಯ್ ದೇವಗನ್ ನಟನೆಯ ‘ತಾನಜಿ’ ಸಿನಿಮಾಗಳ ಜೊತೆಗೆ ‘ಡೊಳ್ಳು’ ಸಿನಿಮಾ ಕೂಡ ಮೆಕ್ಸಿಕೋ ಫಿಲ್ಮ್​ ಫೆಸ್ಟ್​ನಲ್ಲಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಕಾರ್ತಿಕ್ ಅಭಿಮಾನಿಗಳಿಗೆ ಗುಡ್ ನ್ಯೂಸ್; ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ ‘ಡೊಳ್ಳು’ ಸಿನಿಮಾ  
ಡೊಳ್ಳು ಸಿನಿಮಾ
Follow us
|

Updated on: Feb 28, 2024 | 12:35 PM

ಕಾರ್ತಿಕ್ ಮಹೇಶ್ (Karthik Mahesh) ಅವರು ಇತ್ತೀಚೆಗೆ ‘ಬಿಗ್ ಬಾಸ್’ ವಿನ್ ಆದರು. ಇದಾದ ಬಳಿಕ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಈಗ ಅವರ ನಟನೆಯ ‘ಡೊಳ್ಳು’ ಸಿನಿಮಾ ತಂಡ ಒಂದು ಸಿಹಿ ಸುದ್ದಿ ಹಂಚಿಕೊಂಡಿದೆ. ಈ ಸಿನಿಮಾ ಈಗಾಗಲೇ ಹಲವು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಬಂದಿದೆ. ಈಗ ಸಿನಿಮಾ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆಗೆ ಭಾಜನವಾಗಿದೆ. ‘ಡೊಳ್ಳು’ ಸಿನಿಮಾ ಮೆಕ್ಸಿಕೋದಲ್ಲಿ ನಡೆಯಲಿರುವ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ.

‘ಡೊಳ್ಳು’ ಚಿತ್ರವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದಾರೆ. ಕಾರ್ತಿಕ್ ಮಹೇಶ್, ನಿಧಿ ಹೆಗಡೆ, ಬಾಬು ಹಿರಣ್ಣಯ್ಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಪವನ್ ಒಡೆಯರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಈಗ ಮೆಕ್ಸಿಕೋ ಸಿನಿಮೋತ್ಸವದಲ್ಲಿ ಪ್ರದರ್ಶನ ಕಾಣಲು ರೆಡಿ ಆಗಿದೆ. ಈ ಖುಷಿ ಸುದ್ದಿಯನ್ನು ತಂಡ ಹಂಚಿಕೊಂಡಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’, ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಬಾಜಿರಾವ್ ಮಸ್ತಾನಿ’, ಸೂರ್ಯ ಅಭಿನಯದ ‘ಸೂರರೈ ಪೊಟ್ರು’, ಅಜಯ್ ದೇವಗನ್ ನಟನೆಯ ‘ತಾನಜಿ’ ಸಿನಿಮಾಗಳ ಜೊತೆಗೆ ‘ಡೊಳ್ಳು’ ಸಿನಿಮಾ ಕೂಡ ಮೆಕ್ಸಿಕೋ ಫಿಲ್ಮ್​ ಫೆಸ್ಟ್​ನಲ್ಲಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.

‘ಡೊಳ್ಳು’ ಸಿನಿಮಾದಲ್ಲಿ ಜನಪದ ವಾದ್ಯ ಡೊಳ್ಳಿನ ಕಥೆ ಇದೆ. ಭದ್ರ (ಕಾರ್ತಿಕ್) ಹಾಗೂ ಆತನ ತಂಡ ಡೊಳ್ಳು ಬಾರಿಸುವ ಮೂಲಕ ಜನಪದ ಕಲೆಯನ್ನು ಬೆಳೆಸುವ ಪ್ರಯತ್ನದಲ್ಲಿರುತ್ತದೆ. ಭದ್ರನ ಹೊರತಪಡಿಸಿ ಉಳಿದ ಎಲ್ಲರಿಗೂ ಬೆಂಗಳೂರಿನ ಜೀವನ ಆಕರ್ಷಣೀಯವಾಗಿ ಕಾಣುತ್ತದೆ. ಅವರು ಬಸ್ ಹತ್ತಿ ಬೆಂಗಳೂರು ಸೇರುತ್ತಾರೆ. ಆ ಬಳಿಕ ಭದ್ರ ಈ ಜನಪದ ಕಲೆಯನ್ನು ಹೇಗೆ ಉಳಿಸುತ್ತಾನೆ ಅನ್ನೋದು ಸಿನಿಮಾದ ಕಥೆ. ಪಕ್ಕಾ ಹಳ್ಳಿ ಸೊಗಡಿನಲ್ಲಿ ಸಿನಿಮಾ ಮೂಡಿ ಬಂದಿದೆ.

ಇದನ್ನೂ ಓದಿ: ಜನಪದ ಕಲೆಗಳ ಅಳಿವು-ಉಳಿವಿಗೆ ಕನ್ನಡಿ ಹಿಡಿದ ‘ಡೊಳ್ಳು’ ಸಿನಿಮಾ

ಪವನ್ ಒಡೆಯರ್ ಅವರು ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿ ಫೇಮಸ್ ಆಗಿದ್ದಾರೆ. ಪವನ್ ಒಡೆಯರ್ ತಮ್ಮದೇ ಹೋಂ ಬ್ಯಾನರ್ ‘ಒಡೆಯರ್ ಮೂವೀಸ್​’ ಮೂಲಕ ಪತ್ನಿ ಅಪೇಕ್ಷಾ ಜೊತೆಗೂಡಿ ‘ಡೊಳ್ಳು’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಮೊದಲು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ