AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಕನ್ನಡದ ‘ಕೆಂಡ’ ಸಿನಿಮಾ ಆಯ್ಕೆ

ಕನ್ನಡದ ‘ಕೆಂಡ’ ಸಿನಿಮಾ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್​’ಗೆ ಆಯ್ಕೆ ಆಗಿದೆ. ಇದು ಸಹದೇವ್ ಕೆಲವಡಿ ಅವರ ನಿರ್ದೇಶನದಲ್ಲಿ ಬರುತ್ತಿರುವ ಮೊದಲ ಸಿನಿಮಾ. ಈ ಮೂಲಕ ಸಹದೇವ್ ಕೆಲವಡಿ ಅವರು ತಮ್ಮ ಮೊದಲ ಪ್ರಯತ್ನದಲ್ಲೇ ಗೆಲುವಿನ ಮೆಟ್ಟಿಲೊಂದನ್ನು ಹತ್ತಿದಂತಾಗಿದೆ. ಒಂದಷ್ಟು ಕಾರಣಗಳಿಂದ ಈ ಸಿನಿಮಾ ತಂಡ ಗಮನ ಸೆಳೆಯುತ್ತಿದೆ.

‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಕನ್ನಡದ ‘ಕೆಂಡ’ ಸಿನಿಮಾ ಆಯ್ಕೆ
‘ಕೆಂಡ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Apr 23, 2024 | 6:02 PM

Share

ಸಹದೇವ್ ಕೆಲವಡಿ ಅವರು ನಿರ್ದೇಶನ ಮಾಡಿರುವ ‘ಕೆಂಡ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ‘ಗಂಟುಮೂಟೆ’ ಚಿತ್ರದ ಖ್ಯಾತಿಯ ರೂಪಾ ರಾವ್ (Roopa Rao) ಅವರು ನಿರ್ಮಾಣ ಮಾಡಿರುವ ಈ ಚಿತ್ರವು ಭಿನ್ನವಾದ ಒಂದು ಕಥಾಹಂದರವನ್ನು ಹೊಂದಿದೆ ಎಂಬ ವಿಚಾರ ಈಗಾಗಲೇ ಟೀಸರ್​, ಪೋಸ್ಟರ್, ಹಾಡುಗಳ​ ಮೂಲಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ‘ಕೆಂಡ’ (Kenda) ಸಿನಿಮಾದ ಬಗ್ಗೆ ಇನ್ನೊಂದು ಖುಷಿಯ ಸಮಾಚಾರವನ್ನು ಚಿತ್ರತಂಡವರು ಹಂಚಿಕೊಂಡಿದ್ದಾರೆ. ಅದೇನೆಂದರೆ, ‘ಕೆಂಡ’ ಚಿತ್ರವು ಈಗ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್’ಗೆ (Dadasaheb Phalke Film Festival) ಆಯ್ಕೆ ಆಗಿದೆ.

14ನೇ ಸಾಲಿನ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್-2024’ ದೆಹಲಿಯಲ್ಲಿ ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ‘ಕೆಂಡ’ ಸಿನಿಮಾ ಪ್ರವೇಶ ಪಡೆದುಕೊಂಡಿದೆ. ಇದು ಚಿತ್ರತಂಡಕ್ಕೆ ಮಾತ್ರವಲ್ಲದೇ, ಕನ್ನಡ ಸಿನಿಮಾರಂಗದ ಪಾಲಿಗೂ ಹೆಮ್ಮೆಯ ಸಂಗತಿ. ಈ ಚಿತ್ರೋತ್ಸವವು ಪ್ರತಿಷ್ಠೆಯನ್ನು ಕಾಯ್ದುಕೊಂಡು ಬಂದಿದ್ದು, ಇದಕ್ಕೆ ತಮ್ಮ ಸಿನಿಮಾ ಆಯ್ಕೆ ಆಗಬೇಕು ಎಂದು ಎಷ್ಟೋ ಚಿತ್ರತಂಡದವರು ಕನಸು ಕಂಡಿರುತ್ತಾರೆ. ಹಾಗಂತ, ಈ ಸಿನಿಮೋತ್ಸವಕ್ಕೆ ಆಯ್ಕೆ ಆಗುವುದು ಸುಲಭವಲ್ಲ.

‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್’ನ ಹಲವು ಮಾನದಂಡಗಳಲ್ಲಿ ಪಾಸ್​ ಆಗಿ ಸೈ ಎನಿಸಿಕೊಳ್ಳಬೇಕು. ಆಗ ಮಾತ್ರವೇ ಸಿನಿಮಾ ಆಯ್ಕೆ ಆಗಲು ಸಾಧ್ಯ. ಎಲ್ಲ ರೀತಿಯಿಂದಲೂ ಆ ರೀತಿಯ ಅಗತ್ಯ ಗುಣಮಟ್ಟ ಕಾಯ್ದುಕೊಂಡ ಸಿನಿಮಾಗಳು ಮಾತ್ರ ಇದರಲ್ಲಿ ಅವಕಾಶ ಪಡೆಯುತ್ತವೆ. ಆ ಎಲ್ಲ ಮಾನದಂಡಗಳನ್ನು ದಾಟಿಕೊಂಡು ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್’ಗೆ ‘ಕೆಂಡ’ ಸಿನಿಮಾ ಆಯ್ಕೆ ಆಗಿದೆ ಎಂದು ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಕೆಂಡ’ ಸಿನಿಮಾಗೆ ಜಯಂತ್ ಕಾಯ್ಕಿಣಿ ಪುತ್ರ ರಿತ್ವಿಕ್​ ಸಂಗೀತ ನಿರ್ದೇಶನ

‘ಅಮೇಯುಕ್ತಿ ಸ್ಟುಡಿಯೋಸ್’ ಮೂಲಕ ‘ಕೆಂಡ’ ಸಿನಿಮಾವನ್ನು ರೂಪಾ ರಾವ್ ಅವರು ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಅವರ ಸಂಗೀತ ನಿರ್ದೇಶನ ಈ ಸಿನಿಮಾಗಿದೆ. ಪ್ರದೀಪ್ ನಾಯಕ್ ಅವರು ಸಂಕಲನ ಮಾಡಿದ್ದಾರೆ. ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನ ಮಾಡಿದ್ದಾರೆ. ಬಿ.ವಿ. ಭರತ್, ವಿನೋದ್ ಸುಶೀಲ, ಪ್ರಣವ್ ಶ್ರೀಧರ್, ಗೋಪಾಲಕೃಷ್ಣ ದೇಶಪಾಂಡೆ, ಬಿಂದು ರಕ್ಷಿದಿ, ಸಚಿನ್ ಶ್ರೀನಾಥ್, ಶರತ್ ಗೌಡ, ಸತೀಶ್​ ಕುಮಾರ್, ಪೃಥ್ವಿ ಬನವಾಸಿ, ಅರ್ಚನ ಶ್ಯಾಮ್, ದೀಪ್ತಿ ನಾಗೇಂದ್ರ ಮುಂತಾದ ಕಲಾವಿದರು ‘ಕೆಂಡ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ