AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಕನ್ನಡದ ‘ಕೆಂಡ’ ಸಿನಿಮಾ ಆಯ್ಕೆ

ಕನ್ನಡದ ‘ಕೆಂಡ’ ಸಿನಿಮಾ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್​’ಗೆ ಆಯ್ಕೆ ಆಗಿದೆ. ಇದು ಸಹದೇವ್ ಕೆಲವಡಿ ಅವರ ನಿರ್ದೇಶನದಲ್ಲಿ ಬರುತ್ತಿರುವ ಮೊದಲ ಸಿನಿಮಾ. ಈ ಮೂಲಕ ಸಹದೇವ್ ಕೆಲವಡಿ ಅವರು ತಮ್ಮ ಮೊದಲ ಪ್ರಯತ್ನದಲ್ಲೇ ಗೆಲುವಿನ ಮೆಟ್ಟಿಲೊಂದನ್ನು ಹತ್ತಿದಂತಾಗಿದೆ. ಒಂದಷ್ಟು ಕಾರಣಗಳಿಂದ ಈ ಸಿನಿಮಾ ತಂಡ ಗಮನ ಸೆಳೆಯುತ್ತಿದೆ.

‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಕನ್ನಡದ ‘ಕೆಂಡ’ ಸಿನಿಮಾ ಆಯ್ಕೆ
‘ಕೆಂಡ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Apr 23, 2024 | 6:02 PM

Share

ಸಹದೇವ್ ಕೆಲವಡಿ ಅವರು ನಿರ್ದೇಶನ ಮಾಡಿರುವ ‘ಕೆಂಡ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ‘ಗಂಟುಮೂಟೆ’ ಚಿತ್ರದ ಖ್ಯಾತಿಯ ರೂಪಾ ರಾವ್ (Roopa Rao) ಅವರು ನಿರ್ಮಾಣ ಮಾಡಿರುವ ಈ ಚಿತ್ರವು ಭಿನ್ನವಾದ ಒಂದು ಕಥಾಹಂದರವನ್ನು ಹೊಂದಿದೆ ಎಂಬ ವಿಚಾರ ಈಗಾಗಲೇ ಟೀಸರ್​, ಪೋಸ್ಟರ್, ಹಾಡುಗಳ​ ಮೂಲಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ‘ಕೆಂಡ’ (Kenda) ಸಿನಿಮಾದ ಬಗ್ಗೆ ಇನ್ನೊಂದು ಖುಷಿಯ ಸಮಾಚಾರವನ್ನು ಚಿತ್ರತಂಡವರು ಹಂಚಿಕೊಂಡಿದ್ದಾರೆ. ಅದೇನೆಂದರೆ, ‘ಕೆಂಡ’ ಚಿತ್ರವು ಈಗ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್’ಗೆ (Dadasaheb Phalke Film Festival) ಆಯ್ಕೆ ಆಗಿದೆ.

14ನೇ ಸಾಲಿನ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್-2024’ ದೆಹಲಿಯಲ್ಲಿ ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ‘ಕೆಂಡ’ ಸಿನಿಮಾ ಪ್ರವೇಶ ಪಡೆದುಕೊಂಡಿದೆ. ಇದು ಚಿತ್ರತಂಡಕ್ಕೆ ಮಾತ್ರವಲ್ಲದೇ, ಕನ್ನಡ ಸಿನಿಮಾರಂಗದ ಪಾಲಿಗೂ ಹೆಮ್ಮೆಯ ಸಂಗತಿ. ಈ ಚಿತ್ರೋತ್ಸವವು ಪ್ರತಿಷ್ಠೆಯನ್ನು ಕಾಯ್ದುಕೊಂಡು ಬಂದಿದ್ದು, ಇದಕ್ಕೆ ತಮ್ಮ ಸಿನಿಮಾ ಆಯ್ಕೆ ಆಗಬೇಕು ಎಂದು ಎಷ್ಟೋ ಚಿತ್ರತಂಡದವರು ಕನಸು ಕಂಡಿರುತ್ತಾರೆ. ಹಾಗಂತ, ಈ ಸಿನಿಮೋತ್ಸವಕ್ಕೆ ಆಯ್ಕೆ ಆಗುವುದು ಸುಲಭವಲ್ಲ.

‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್’ನ ಹಲವು ಮಾನದಂಡಗಳಲ್ಲಿ ಪಾಸ್​ ಆಗಿ ಸೈ ಎನಿಸಿಕೊಳ್ಳಬೇಕು. ಆಗ ಮಾತ್ರವೇ ಸಿನಿಮಾ ಆಯ್ಕೆ ಆಗಲು ಸಾಧ್ಯ. ಎಲ್ಲ ರೀತಿಯಿಂದಲೂ ಆ ರೀತಿಯ ಅಗತ್ಯ ಗುಣಮಟ್ಟ ಕಾಯ್ದುಕೊಂಡ ಸಿನಿಮಾಗಳು ಮಾತ್ರ ಇದರಲ್ಲಿ ಅವಕಾಶ ಪಡೆಯುತ್ತವೆ. ಆ ಎಲ್ಲ ಮಾನದಂಡಗಳನ್ನು ದಾಟಿಕೊಂಡು ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್’ಗೆ ‘ಕೆಂಡ’ ಸಿನಿಮಾ ಆಯ್ಕೆ ಆಗಿದೆ ಎಂದು ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಕೆಂಡ’ ಸಿನಿಮಾಗೆ ಜಯಂತ್ ಕಾಯ್ಕಿಣಿ ಪುತ್ರ ರಿತ್ವಿಕ್​ ಸಂಗೀತ ನಿರ್ದೇಶನ

‘ಅಮೇಯುಕ್ತಿ ಸ್ಟುಡಿಯೋಸ್’ ಮೂಲಕ ‘ಕೆಂಡ’ ಸಿನಿಮಾವನ್ನು ರೂಪಾ ರಾವ್ ಅವರು ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಅವರ ಸಂಗೀತ ನಿರ್ದೇಶನ ಈ ಸಿನಿಮಾಗಿದೆ. ಪ್ರದೀಪ್ ನಾಯಕ್ ಅವರು ಸಂಕಲನ ಮಾಡಿದ್ದಾರೆ. ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನ ಮಾಡಿದ್ದಾರೆ. ಬಿ.ವಿ. ಭರತ್, ವಿನೋದ್ ಸುಶೀಲ, ಪ್ರಣವ್ ಶ್ರೀಧರ್, ಗೋಪಾಲಕೃಷ್ಣ ದೇಶಪಾಂಡೆ, ಬಿಂದು ರಕ್ಷಿದಿ, ಸಚಿನ್ ಶ್ರೀನಾಥ್, ಶರತ್ ಗೌಡ, ಸತೀಶ್​ ಕುಮಾರ್, ಪೃಥ್ವಿ ಬನವಾಸಿ, ಅರ್ಚನ ಶ್ಯಾಮ್, ದೀಪ್ತಿ ನಾಗೇಂದ್ರ ಮುಂತಾದ ಕಲಾವಿದರು ‘ಕೆಂಡ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು