AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊನ್ನು ಸಮಸ್ಯೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಅಕ್ಟೋಬರ್ 24ಕ್ಕೆ ಬಿಡುಗಡೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ದಿನಾಂಕವನ್ನು ಪೋಸ್ಟರ್ ಮೂಲಕ ಚಿತ್ರತಂಡ ಘೋಷಿಸಿದೆ. ತೊನ್ನು ಸಮಸ್ಯೆ ಕುರಿತು ನಿರ್ಮಾಣ ಆಗಿರುವ ಮೊದಲ ಸಿನಿಮಾ ಇದು ಎಂಬುದು ವಿಶೇಷ. ಅಕ್ಟೋಬರ್ 24ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಕಾಜಲ್ ಕುಂದರ್, ಮಹೇಶ್ ಗೌಡ ಮುಂತಾದವರು ನಟಿಸಿದ್ದಾರೆ.

ತೊನ್ನು ಸಮಸ್ಯೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಅಕ್ಟೋಬರ್ 24ಕ್ಕೆ ಬಿಡುಗಡೆ
Mahesh Gowda, Kajal Kundar
ಮದನ್​ ಕುಮಾರ್​
|

Updated on: Sep 21, 2025 | 1:22 PM

Share

‘ಮಹಿರಾ’ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ (Mahesh Gowda) ಅವರು ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಿರ್ಮಾಣವನ್ನು ಕೂಡ ಅವರೇ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಮುಖ್ಯ ಭೂಮಿಕೆಯಲ್ಲೂ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಒಂದು ಡಿಫರೆಂಟ್ ಕಥಾಹಂದರ ಇದೆ. ಜನಪ್ರಿಯ ಅಲೆಗಳ ಕಥಾಹಂದರವನ್ನು ಬಿಟ್ಟು ಅವರು ಬೇರೆ ಏನನ್ನೋ ಜನರಿಗೆ ತಲುಪಿಸಲು ಹೊರಟಿದ್ದಾರೆ. ಪೋಸ್ಟರ್​​ಗಳ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ತೊನ್ನು (Vitiligo) ಎಂಬ ಚರ್ಮ ಸಮಸ್ಯೆಯ ಬಗ್ಗೆ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ (Bilichukki Hallihakki) ಸಿನಿಮಾದಲ್ಲಿ ಹೇಳಲಾಗುತ್ತಿದೆ.

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ದಿನಾಂಕವನ್ನು ಪೋಸ್ಟರ್ ಮೂಲಕ ಚಿತ್ರತಂಡ ಘೋಷಿಸಿದೆ. ಅಕ್ಟೋಬರ್ 24ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಇದು ಒಂದು ಭಿನ್ನ ಕಥೆ ಹೊಂದಿರುವ ಸಿನಿಮಾ. ನಮ್ಮ ಸುತ್ತಮುತ್ತಲೇ ತೊನ್ನು (ವಿಟಿಲಿಗೋ) ಎಂಬ ಚರ್ಮ ಬಾಧೆ ಅನೇಕರನ್ನು ಆವರಿಸಿದೆ. ಆ ವಿಷಯದ ಕುರಿತು ಸಿದ್ಧವಾಗುತ್ತಿರುವ ಮೊದಲ ಸಿನಿಮಾ ಇದೆ ಎಂಬುದು ವಿಶೇಷ.

ತೊನ್ನು ಸಮಸ್ಯೆ ಬಗ್ಗೆ ಅನೇಕರಿಗೆ ಸರಿಯಾಗಿ ತಿಳಿದಿಲ್ಲ. ಇದರ ಸುತ್ತ ಅನೇಕ ಚಿತ್ರವಿಚಿತ್ರ ನಂಬಿಕೆಗಳು ಇವೆ. ಹೊರಜಗತ್ತಿಗೆ ಇದೊಂದು ಚರ್ಚ ವ್ಯಾಧಿ ಆಗಿದ್ದರೂ ಕೂಡ ಅದಕ್ಕೆ ಸಂಬಂಧಿಸಿದಂತೆ ದೊಡ್ಡ ಕಥೆ ಇದೆಯಂತೆ. ತೊನ್ನು ಇರುವವರ ಮನೋವ್ಯಾಕುಲವನ್ನು ಸುಲಭಕ್ಕೆ ಅಂದಾಜಿಸಲು ಸಾಧ್ಯವಿಲ್ಲ. ಅದರ ಕುರಿತಾಗಿ ನಿರ್ದೇಶಕ ಮಹೇಶ್ ಗೌಡ ಅವರು ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಮಾಡಿದ್ದಾರೆ.

ನಿರ್ದೇಶಕ ಮಹೇಶ್ ಗೌಡ ಅವರು ಈ ಮೊದಲು ‘ಮಹಿರಾ’ ಸಿನಿಮಾ ಮೂಲಕ ಗುರುತಿಸಿಕೊಂಡಿದ್ದರು. ಒಂದಷ್ಟು ಸಮಯದ ಸಿದ್ಧತೆಗಳ ಬಳಿಕ ‘ಹೊನ್ನುಡಿ ಪ್ರೊಡಕ್ಷನ್ಸ್’ ಬ್ಯಾನರ್ ಮೂಲಕ ಈಗ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ರಂಗಭೂಮಿ ನಟಿ ಕಾಜಲ್ ಕುಂದರ್ ಅವರು ಕವಿತಾ ಎಂಬ ಪಾತ್ರವನ್ನು ಮಾಡಿದ್ದಾರೆ.

ಇದನ್ನೂ ಓದಿ: ತೊನ್ನು ಕಾಯಿಲೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಕಾಜಲ್ ಕುಂದರ್ ನಾಯಕಿ

ಸ್ವತಃ ವಿಟಿಲಿಗೋ ಸಮಸ್ಯೆ ಹೊಂದಿರುವ ಮಹೇಶ್ ಗೌಡ ಅವರಿಗೆ ಇದರ ಬಗ್ಗೆ ಹೆಚ್ಚು ಅನುಭವ ಇದೆ. ಹಾಗಾಗಿ ಅವರೇ ಈ ಸಿನಿಮಾದ ನಾಯಕನಾಗಿ ಅಭಿನಯಿಸಿದ್ದಾರೆ. ಈ ಕಥೆಯನ್ನು ಪಕ್ಕಾ ಕಮರ್ಶಿಯಲ್ ಶೈಲಿಯಲ್ಲಿ, ಮನರಂಜನೆಯ ಅಂಶಗಳ ಜೊತೆಯಲ್ಲಿ ಕಟ್ಟಿಕೊಡಲಾಗಿದೆ ಎಂದು ಚಿತ್ರತಂಡ ಹೇಳಿದೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!