AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajyotsava Award: ಖ್ಯಾತ ನಟರಾದ ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Kannada Rajyotsava Award 2023: ಡಿಂಗ್ರಿ ನಾಗರಾಜ್​ ಮತ್ತು ಬ್ಯಾಂಕ್​ ಜನಾರ್ದನ್​ ಅವರು ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿದ್ದಾರೆ. ಈ ಖ್ಯಾತ ನಟರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ. ಚಿತ್ರರಂಗದವರು, ಆಪ್ತರು ಈ ಕಲಾವಿದರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

Rajyotsava Award: ಖ್ಯಾತ ನಟರಾದ ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​
ಮದನ್​ ಕುಮಾರ್​
|

Updated on:Oct 31, 2023 | 5:28 PM

Share

2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ (Karnataka Rajyotsava Award) ಪ್ರಶಸ್ತಿ ಪ್ರಕಟ ಆಗಿದೆ. ನಾಡಿನ ವಿವಿಧ ಕ್ಷೇತ್ರಗಳ ಅನೇಕ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಬಾರಿ ಚಲನಚಿತ್ರ ಕ್ಷೇತ್ರದಿಂದ ಅನುಭವಿ ಕಲಾವಿದರಾದ ಬ್ಯಾಂಕ್​ ಜನಾರ್ದನ್​ ಮತ್ತು ಡಿಂಗ್ರಿ ನಾಗರಾಜ್ (Dingri Nagaraj)​ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಈ ಕಲಾವಿದರು ಸಕ್ರಿಯರಾಗಿದ್ದಾರೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಡಿಂಗ್ರಿ ನಾಗರಾಜ್​ ಮತ್ತು ಬ್ಯಾಂಕ್​ ಜನಾರ್ದನ್ (Bank Janardhan)​ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ. ಚಿತ್ರರಂಗದವರು, ಆಪ್ತರು, ಅಭಿಮಾನಿಗಳು ಈ ಕಲಾವಿದರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರವು ಇಂದು (ಅಕ್ಟೋಬರ್​ 31) ಮಧ್ಯಾಹ್ನ ಬಿಡುಗಡೆ ಮಾಡಿದೆ. ಸಂಘ-ಸಂಸ್ಥೆಗಳು ಮತ್ತು ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತಿದೆ. ಸಂಗೀತ, ಸಿನಿಮಾ, ಕ್ರೀಡೆ, ನ್ಯಾಯಾಂಗ, ರಂಗಭೂಮಿ, ಶಿಕ್ಷಣ, ಪರಿಸರ, ಮಾಧ್ಯಮ, ತಂತ್ರಜ್ಞಾನ ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಗೆ ಅನೇಕರು ಭಾಜನರಾಗಿದ್ದಾರೆ.

ಇದನ್ನೂ ಓದಿ: Rajyotsava Award 2023 Winners List: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿಜೇತರ ಪಟ್ಟಿ

ಪೋಷಕ ಪಾತ್ರಗಳಲ್ಲಿ ಬ್ಯಾಂಕ್​ ಜನಾರ್ದನ್​ ಮತ್ತು ಡಿಂಗ್ರಿ ನಾಗರಾಜ್​ ಅವರು ಹೆಸರು ಮಾಡಿದ್ದಾರೆ. ಹಲವು ಸಿನಿಮಾಗಳಲ್ಲಿ ಅವರು ಹಾಸ್ಯ ಪಾತ್ರಗಳನ್ನು ನಿಭಾಯಿಸುವ ಮೂಲಕ ಜನರ ಮನ ಗೆದ್ದಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ‘ಶ್​’, ‘ಅಜಗಜಾಂತರ’, ‘ತರ್ಲೆ ನನ್ಮಗ’, ‘ಗೌರಿ ಗಣೇಶ​’ ಮುಂತಾದ ಸಿನಿಮಾಗಳಲ್ಲಿ ಬ್ಯಾಂಕ್​​ ಜನಾರ್ದನ್​ ಅವರ ನಟನೆಯನ್ನು ಮರೆಯುವಂತಿಲ್ಲ. ಕೆಲವೇ ದಿನಗಳ ಹಿಂದೆ ಅವರಿಗೆ ಹೃದಯಾಘಾತ ಆದ ಸುದ್ದಿ ಕೇಳಿಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಸದ್ಯ ಬ್ಯಾಂಕ್​​ ಜನಾರ್ದನ್​ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kannada Rajyotsava Speech: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಭಾಷಣ ಹೀಗಿರಲಿ

ಡಿಂಗ್ರಿ ನಾಗರಾಜ್​ ಮೂಲತಃ ಬೆಂಗಳೂರಿನವರು. ಅವರ ತಂದೆ ನಾಟಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲ ನಟನಾಗಿಯೇ ಡಿಂಗ್ರಿ ನಾಗರಾಜ್​ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಂತರ ಅವರಿಗೆ ಸಿನಿಮಾಗಳಲ್ಲಿ ನಟಿಸುವ ಅವಕಾಶ ಸಿಕ್ಕಿತು. ಹಲವಾರು ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದರು. ಸ್ಯಾಂಡಲ್​ವುಡ್​ನ ಅನೇಕ ಸ್ಟಾರ್​ ಹೀರೋಗಳು ಜೊತೆ ಕೆಲಸ ಮಾಡುವ ಅವಕಾಶ ಅವರಿಗೆ ಒದಗಿಬಂತು. ಈಗ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಅವರ ಖ್ಯಾತಿ ಹೆಚ್ಚಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:03 pm, Tue, 31 October 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ