Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashok Rao: ಕನ್ನಡದ ಹಿರಿಯ ನಟ ಅಶೋಕ್​​ ರಾವ್​ ನಿಧನ; ಕ್ಯಾನ್ಸರ್​ನಿಂದ ಕೊನೆಯುಸಿರೆಳೆದ ಕಲಾವಿದ

Ashok Rao Death: ಚಿತ್ರನಟ ಅಶೋಕ್​ ರಾವ್​ ಕ್ಯಾನ್ಸರ್​ನಿಂದ ಮೃತಪಟ್ಟಿದ್ದಾರೆ. ರಾತ್ರಿ 12.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ.

Ashok Rao: ಕನ್ನಡದ ಹಿರಿಯ ನಟ ಅಶೋಕ್​​ ರಾವ್​ ನಿಧನ; ಕ್ಯಾನ್ಸರ್​ನಿಂದ ಕೊನೆಯುಸಿರೆಳೆದ ಕಲಾವಿದ
ನಟ ಅಶೋಕ್ ರಾವ್
Follow us
TV9 Web
| Updated By: ಮದನ್​ ಕುಮಾರ್​

Updated on:Feb 02, 2022 | 12:46 PM

ನೂರಾರು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಹಿರಿಯ ನಟ ಅಶೋಕ್​ ರಾವ್​ (Actor Ashok Rao) ಅವರು ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ (Cancer) ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಈಗ ಮೃತಪಟ್ಟಿದ್ದು, ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ತೀವ್ರ ನೋವು ಉಂಟಾಗಿದೆ. ಡಾ. ರಾಜ್​ಕುಮಾರ್​ (Dr. Rajkumar) ಸೇರಿದಂತೆ ಅನೇಕ ಸ್ಟಾರ್​ ಕಲಾವಿದರ ಜೊತೆ ಅಶೋಕ್​ ರಾವ್​ ತೆರೆಹಂಚಿಕೊಂಡಿದ್ದರು. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಅವರ ಅನುಭವ ಅಪಾರ. ಅವರಿಗೆ 75 ವರ್ಷ ವಯಸ್ಸಾಗಿತ್ತು. ರಾತ್ರಿ 12.30ಕ್ಕೆ ಅವರು ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. ಪತ್ನಿ, ಮಗಳು ಹಾಗೂ ಮಗನನ್ನು ಅಶೋಕ್​ ರಾವ್​ ಅಗಲಿದ್ದಾರೆ. ಕೆಲವು ವರ್ಷಗಳಿಂದ ಅವರು ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿಯವರೆಗೂ ಚೆನ್ನಾಗಿದ್ದರು. ಆದರೆ ಈಗ ಅವರು ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾರದಿಂದ ಅಶೋಕ್​ ರಾವ್​ ಮೃತರಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಇಂದು (ಫೆ.2)  ಮಧ್ಯಾಹ್ನ 2.30ರ ಸುಮಾರಿಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಹಲವು ವರ್ಷಗಳ ತಮ್ಮ ಸಿನಿಮಾ ಜರ್ನಿಯಲ್ಲಿ ಅಶೋಕ್​ ರಾವ್​ ಅವರು ಅನೇಕ ಬಗೆಯ ಪಾತ್ರಗಳನ್ನು ಮಾಡಿದ್ದರು. ವಿಲನ್​ ಪಾತ್ರಗಳ ಮೂಲಕ ಅವರು ಮಿಂಚಿದ್ದರು. ಡಾ. ರಾಜ್​ಕುಮಾರ್​ ನಟನೆಯ ‘ಪರಶುರಾಮ್​’ ಸಿನಿಮಾದಲ್ಲಿ ಖಳ ನಟನಾಗಿ ಅವರು ಗಮನ ಸೆಳೆದಿದ್ದರು. ಅಶೋಕ್​ ರಾವ್​ ಅವರ ಪ್ರತಿಭೆಯನ್ನು ಗಮನಿಸಿದ್ದ ರಾಜ್​ಕುಮಾರ್​ ಅವರೇ ಕರೆದು ‘ಪರಷುರಾಮ್​’ ಸಿನಿಮಾದ ವಿಲನ್​ ಪಾತ್ರವನ್ನು ಅವರಿಗೆ ನೀಡಿದ್ದರು.

ಅಶೋಕ್ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸ್ಯಾಂಡಲ್​ವುಡ್​​ ಸಿನಿಮಾ ಪ್ರೇಕ್ಷಕರು, ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಅಶೋಕ್ ರಾವ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸೋಶಿಯಲ್​ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ.

ಅಶೋಕ್ ರಾವ್ ಅವರು ಜನಿಸಿದ್ದು ಕಾಸರಗೋಡಿನಲ್ಲಿ. ತಮಿಳುನಾಡಿನಲ್ಲಿ ಅವರು ವಿದ್ಯಾಭಾಸ ಪಡೆದರು. ಸೇಲಂ ಬಳಿಯ ಒಂದು ವಸತಿ ಶಾಲೆಯಲ್ಲಿ ಅಶೋಕ ರಾವ್​ ಶಿಕ್ಷಣ ಪಡೆದರು. ಆಗಲೇ ಅವರಿಗೆ ನಾಟಕಗಳ ಬಗ್ಗೆ ಆಸಕ್ತಿ ಮೂಡಿತ್ತು. ಕಂಚಿನ ಕಂಠದ ಕಾರಣಕ್ಕೆ ಅವರಿಗೆ ಕೆಲವು ಪಾತ್ರಗಳು ಸಿಕ್ಕವು. ಶಾಲಾ ದಿನಗಳಿಂದಲೂ ಅಭಿನಯದ ಬಗ್ಗೆ ಆಸಕ್ತಿ ಮೂಡಿಸಿಕೊಂಡಿದ್ದ ಅವರು ವಿದ್ಯಾಭ್ಯಾಸ ಮುಗಿಸಿದ ಬಳಿಕ ಹಲವು ಇಂಗ್ಲಿಷ್​ ನಾಟಕಗಳಲ್ಲಿ ನಟಿಸಿದ್ದರು. ಬಳಿಕ ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು.

ಅಶೋಕ್​ ರಾವ್​ ನಟಿಸಿದ ಮೊದಲ ಸಿನಿಮಾ ‘ಪರಶುರಾಮ್​’. ಮೊದಲ ಚಿತ್ರದಲ್ಲಿಯೇ ಡಾ. ರಾಜ್​ಕುಮಾರ್​ ಎದುರು ಮುಖ್ಯ ವಿಲನ್​ ಆಗಿ ನಟಿಸುವ ಅವಕಾಶ ಅವರನ್ನು ಅರಸಿ ಬಂದಿತ್ತು. ಸಿಕ್ಕ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡ ಅಶೋಕ್​ ರಾವ್​ ಅವರು ಬಳಿಕ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡರು.

ಇದನ್ನೂ ಓದಿ:

‘ದೇವರು ಇದ್ದಾನೋ ಇಲ್ಲವೋ?’: ಸಮನ್ವಿ ನಿಧನದ ಬಳಿಕ ಸೃಜನ್​ ಲೋಕೇಶ್​ ನೋವಿನ ನುಡಿ

Katte Ramachandra: ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ

Published On - 12:01 pm, Wed, 2 February 22

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ