AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್

ಇತ್ತೀಚೆಗೆ ರಕ್ಷಿತಾ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್
ರಕ್ಷಿತಾ ಸುರೇಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 08, 2023 | 8:44 AM

ಕನ್ನಡದ ಗಾಯಕಿ ರಕ್ಷಿತಾ ಸುರೇಶ್ (Rakshita Suresh) ಅವರು ಮೇ 7ರಂದು ಮಲೇಷಿಯಾದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅವರು ಚಲಿಸುತ್ತಿದ್ದ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಕ್ಷಿತಾ ಅವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ (Social Media) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಿತಾ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಡಿರುವ ಪೋಸ್ಟ್​ಗೆ ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ರಿಲೀಸ್ ಆಗಿದೆ. ಮಣಿ ರತ್ನಂ ನಿರ್ದೇಶನದ ಈ ಸಿನಿಮಾದಲ್ಲಿ ವಿಕ್ರಮ್, ಕಾರ್ತಿ, ಐಶ್ವರ್ಯಾ ರೈ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಎ.ಆರ್​ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ‘ಕಿರುನಗೆ..’ ಸಾಂಗ್​ನ ರಕ್ಷಿತಾ ಹಾಡಿದ್ದರು. ಇತ್ತೀಚೆಗೆ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರಕ್ಷಿತಾ, ‘ಇಂದು ಭೀಕರ ಅಪಘಾತಕ್ಕೆ ಒಳಗಾದೆ. ನಾನು ಚಲಿಸುತ್ತಿದ್ದ ಕಾರು ಡಿವೈಡರ್​​ಗೆ ಹೊಡೆಯಿತು. ನಾನು ಮಲೇಷಿಯಾ ವಿಮಾನ ನಿಲ್ದಾಣಕ್ಕೆ ತೆರಳುವಾಗ ಈ ಅಪಘಾತ ಆಗಿದೆ. 10 ಸೆಕೆಂಡ್​ನಲ್ಲಿ ಇಡೀ ಜೀವನ ಒಮ್ಮೆ ಕಣ್ಮುಂದೆ ಹಾದು ಹೋಯಿತು’ ಎಂದಿದ್ದಾರೆ.

ಇದನ್ನೂ ಓದಿ: Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್

‘ಏರ್​ಬ್ಯಾಗ್​ಗೆ ಧನ್ಯವಾದ. ಇಲ್ಲವಾದಲ್ಲಿ ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಿ ಇರುತ್ತಿತ್ತು. ನಡೆದ ಘಟನೆಯಿಂದ ಇನ್ನೂ ನಡುಗುತ್ತಿದ್ದೇನೆ. ನಾನು, ನನ್ನ ಜೊತೆ ಇದ್ದವರು, ಕಾರು ಚಾಲಕರು ಸುರಕ್ಷಿತವಾಗಿದ್ದಾರೆ ಅನ್ನೋದು ಖುಷಿಯ ವಿಚಾರ. ಗಾಯಗಳು ಆಗಿವೆ. ನಾನು ಬದುಕುಳಿದಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Accident: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು, 10 ಮಂದಿಗೆ ಗಾಯ

ರಕ್ಷಿತಾ ಸುರೇಶ್ ಅವರು ರಿಯಾಲಿಟಿ ಶೋ ಮೂಲಕ ಪರಿಚಯ ಆದವರು. ‘ರಿದಮ್ ತಧೀಮ್​’ ಹಾಗೂ ‘ಲಿಟ್ಲ್​ ಸ್ಟಾರ್ ಸಿಂಗರ್’ ರಿಯಾಲಿಟಿ ಶೋಗಳನ್ನು ಅವರು ಗೆದ್ದಿದ್ದಾರೆ. ಅವರು ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ‘ಕಿರುನಗೆ’ ಹಾಡನ್ನು ಹಾಡಿದ್ದಾರೆ. ಇದಲ್ಲದೆ ಇನ್ನೂ ಹಲವು ಹಾಡುಗಳು ಅವರ ಕಂಠದಿಂದ ಮೂಡಿ ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Mon, 8 May 23

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ