AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್

ಇತ್ತೀಚೆಗೆ ರಕ್ಷಿತಾ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್
ರಕ್ಷಿತಾ ಸುರೇಶ್
TV9 Web
| Edited By: |

Updated on:May 08, 2023 | 8:44 AM

Share

ಕನ್ನಡದ ಗಾಯಕಿ ರಕ್ಷಿತಾ ಸುರೇಶ್ (Rakshita Suresh) ಅವರು ಮೇ 7ರಂದು ಮಲೇಷಿಯಾದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅವರು ಚಲಿಸುತ್ತಿದ್ದ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಕ್ಷಿತಾ ಅವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ (Social Media) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಿತಾ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಡಿರುವ ಪೋಸ್ಟ್​ಗೆ ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ರಿಲೀಸ್ ಆಗಿದೆ. ಮಣಿ ರತ್ನಂ ನಿರ್ದೇಶನದ ಈ ಸಿನಿಮಾದಲ್ಲಿ ವಿಕ್ರಮ್, ಕಾರ್ತಿ, ಐಶ್ವರ್ಯಾ ರೈ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಎ.ಆರ್​ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ‘ಕಿರುನಗೆ..’ ಸಾಂಗ್​ನ ರಕ್ಷಿತಾ ಹಾಡಿದ್ದರು. ಇತ್ತೀಚೆಗೆ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರಕ್ಷಿತಾ, ‘ಇಂದು ಭೀಕರ ಅಪಘಾತಕ್ಕೆ ಒಳಗಾದೆ. ನಾನು ಚಲಿಸುತ್ತಿದ್ದ ಕಾರು ಡಿವೈಡರ್​​ಗೆ ಹೊಡೆಯಿತು. ನಾನು ಮಲೇಷಿಯಾ ವಿಮಾನ ನಿಲ್ದಾಣಕ್ಕೆ ತೆರಳುವಾಗ ಈ ಅಪಘಾತ ಆಗಿದೆ. 10 ಸೆಕೆಂಡ್​ನಲ್ಲಿ ಇಡೀ ಜೀವನ ಒಮ್ಮೆ ಕಣ್ಮುಂದೆ ಹಾದು ಹೋಯಿತು’ ಎಂದಿದ್ದಾರೆ.

ಇದನ್ನೂ ಓದಿ: Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್

‘ಏರ್​ಬ್ಯಾಗ್​ಗೆ ಧನ್ಯವಾದ. ಇಲ್ಲವಾದಲ್ಲಿ ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಿ ಇರುತ್ತಿತ್ತು. ನಡೆದ ಘಟನೆಯಿಂದ ಇನ್ನೂ ನಡುಗುತ್ತಿದ್ದೇನೆ. ನಾನು, ನನ್ನ ಜೊತೆ ಇದ್ದವರು, ಕಾರು ಚಾಲಕರು ಸುರಕ್ಷಿತವಾಗಿದ್ದಾರೆ ಅನ್ನೋದು ಖುಷಿಯ ವಿಚಾರ. ಗಾಯಗಳು ಆಗಿವೆ. ನಾನು ಬದುಕುಳಿದಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Accident: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು, 10 ಮಂದಿಗೆ ಗಾಯ

ರಕ್ಷಿತಾ ಸುರೇಶ್ ಅವರು ರಿಯಾಲಿಟಿ ಶೋ ಮೂಲಕ ಪರಿಚಯ ಆದವರು. ‘ರಿದಮ್ ತಧೀಮ್​’ ಹಾಗೂ ‘ಲಿಟ್ಲ್​ ಸ್ಟಾರ್ ಸಿಂಗರ್’ ರಿಯಾಲಿಟಿ ಶೋಗಳನ್ನು ಅವರು ಗೆದ್ದಿದ್ದಾರೆ. ಅವರು ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ‘ಕಿರುನಗೆ’ ಹಾಡನ್ನು ಹಾಡಿದ್ದಾರೆ. ಇದಲ್ಲದೆ ಇನ್ನೂ ಹಲವು ಹಾಡುಗಳು ಅವರ ಕಂಠದಿಂದ ಮೂಡಿ ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Mon, 8 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ