AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್

ಇತ್ತೀಚೆಗೆ ರಕ್ಷಿತಾ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್
ರಕ್ಷಿತಾ ಸುರೇಶ್
TV9 Web
| Edited By: |

Updated on:May 08, 2023 | 8:44 AM

Share

ಕನ್ನಡದ ಗಾಯಕಿ ರಕ್ಷಿತಾ ಸುರೇಶ್ (Rakshita Suresh) ಅವರು ಮೇ 7ರಂದು ಮಲೇಷಿಯಾದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅವರು ಚಲಿಸುತ್ತಿದ್ದ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಕ್ಷಿತಾ ಅವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ (Social Media) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಿತಾ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಡಿರುವ ಪೋಸ್ಟ್​ಗೆ ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ರಿಲೀಸ್ ಆಗಿದೆ. ಮಣಿ ರತ್ನಂ ನಿರ್ದೇಶನದ ಈ ಸಿನಿಮಾದಲ್ಲಿ ವಿಕ್ರಮ್, ಕಾರ್ತಿ, ಐಶ್ವರ್ಯಾ ರೈ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಎ.ಆರ್​ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ‘ಕಿರುನಗೆ..’ ಸಾಂಗ್​ನ ರಕ್ಷಿತಾ ಹಾಡಿದ್ದರು. ಇತ್ತೀಚೆಗೆ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರಕ್ಷಿತಾ, ‘ಇಂದು ಭೀಕರ ಅಪಘಾತಕ್ಕೆ ಒಳಗಾದೆ. ನಾನು ಚಲಿಸುತ್ತಿದ್ದ ಕಾರು ಡಿವೈಡರ್​​ಗೆ ಹೊಡೆಯಿತು. ನಾನು ಮಲೇಷಿಯಾ ವಿಮಾನ ನಿಲ್ದಾಣಕ್ಕೆ ತೆರಳುವಾಗ ಈ ಅಪಘಾತ ಆಗಿದೆ. 10 ಸೆಕೆಂಡ್​ನಲ್ಲಿ ಇಡೀ ಜೀವನ ಒಮ್ಮೆ ಕಣ್ಮುಂದೆ ಹಾದು ಹೋಯಿತು’ ಎಂದಿದ್ದಾರೆ.

ಇದನ್ನೂ ಓದಿ: Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್

‘ಏರ್​ಬ್ಯಾಗ್​ಗೆ ಧನ್ಯವಾದ. ಇಲ್ಲವಾದಲ್ಲಿ ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಿ ಇರುತ್ತಿತ್ತು. ನಡೆದ ಘಟನೆಯಿಂದ ಇನ್ನೂ ನಡುಗುತ್ತಿದ್ದೇನೆ. ನಾನು, ನನ್ನ ಜೊತೆ ಇದ್ದವರು, ಕಾರು ಚಾಲಕರು ಸುರಕ್ಷಿತವಾಗಿದ್ದಾರೆ ಅನ್ನೋದು ಖುಷಿಯ ವಿಚಾರ. ಗಾಯಗಳು ಆಗಿವೆ. ನಾನು ಬದುಕುಳಿದಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Accident: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು, 10 ಮಂದಿಗೆ ಗಾಯ

ರಕ್ಷಿತಾ ಸುರೇಶ್ ಅವರು ರಿಯಾಲಿಟಿ ಶೋ ಮೂಲಕ ಪರಿಚಯ ಆದವರು. ‘ರಿದಮ್ ತಧೀಮ್​’ ಹಾಗೂ ‘ಲಿಟ್ಲ್​ ಸ್ಟಾರ್ ಸಿಂಗರ್’ ರಿಯಾಲಿಟಿ ಶೋಗಳನ್ನು ಅವರು ಗೆದ್ದಿದ್ದಾರೆ. ಅವರು ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ‘ಕಿರುನಗೆ’ ಹಾಡನ್ನು ಹಾಡಿದ್ದಾರೆ. ಇದಲ್ಲದೆ ಇನ್ನೂ ಹಲವು ಹಾಡುಗಳು ಅವರ ಕಂಠದಿಂದ ಮೂಡಿ ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Mon, 8 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್