AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananth Nag Birthday: 74ನೇ ವಸಂತಕ್ಕೆ ಕಾಲಿಟ್ಟ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್

ಕನ್ನಡದ ಹಿರಿಯ ನಟ, ಚಿತ್ರರಂಗದ ಎವರ್ ಗ್ರೀನ್ ಹೀರೊ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಅನಂತ್ ನಾಗ್ ಜನ್ಮದಿನವಿಂದು. 1948ರಲ್ಲಿ ಜನಿಸಿದ ಅವರು ಇಂದು 74ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.

Ananth Nag Birthday: 74ನೇ ವಸಂತಕ್ಕೆ ಕಾಲಿಟ್ಟ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್
ಅನಂತ್ ನಾಗ್
TV9 Web
| Edited By: |

Updated on:Sep 04, 2021 | 11:21 AM

Share

ವಿಭಿನ್ನ ಪಾತ್ರಗಳ ಮುಖಾಂತರ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ, ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಜನ್ಮದಿನವಿಂದು. 1948ರ ಸೆಪ್ಟೆಂಬರ್ 4ರಂದು ಭಟ್ಕಳ ತಾಲೂಕಿನ ಶಿರಾಲಿಯ ನಾಗರಕಟ್ಟೆಯಲ್ಲಿ ಜನಿಸಿದರು. ಇಂದು 74ನೇ ವಸಂತಕ್ಕೆ ಕಾಲಿಡುತ್ತಿರುವ ಅವರಿಗೆ ಕನ್ನಡ ಚಿತ್ರರಂಗ ಶುಭಾಶಯಗಳನ್ನು ಕೋರಿದೆ. ಪ್ರಸ್ತುತ ಚಿತ್ರರಂಗದಲ್ಲಿ ಸತತವಾಗಿ ತೊಡಗಿಸಿಕೊಂಡಿರುವ ಅವರು, ತಮ್ಮ ಪೋಷಕ ಪಾತ್ರಗಳ ಮುಖಾಂತರ ಗಮನ ಸೆಳೆಯುತ್ತಿದ್ದಾರೆ.

ನಾಗರಕಟ್ಟೆಯಲ್ಲಿ ಜನಿಸಿದ ಅನಂತ್​ನಾಗ್, ಬಾಲ್ಯವನ್ನು ಅಲ್ಲೇ ಕಳೆದರು. ನಂತರ ಉಡುಪಿಯ ಅಜ್ಜರಕಾಡಿನ ಕ್ಯಾಥೋಲಿಕ್ ಸ್ಕೂಲ್​, ದಕ್ಷಿಣ ಕನ್ನಡದ ಆನಂದ ಆಶ್ರಮ, ಉತ್ತರ ಕನ್ನಡದ ಚಿತ್ರಾಪುರ ಮಠಗಳಲ್ಲಿ ತಮ್ಮ ಶಾಲಾ ವ್ಯಾಸಂಗವನ್ನು ಮಾಡಿದರು. 9ನೇ ತರಗತಿಗೆ ಮುಂಬೈಗೆ ತೆರಳಿ ವ್ಯಾಸಂಗವನ್ನು ಮುಂದುವರೆಸಿದರು. ಸೇನೆಗೆ ಸೇರುವ ಬಯಕೆಯಿದ್ದ ಅವರಿಗೆ ತೂಕ ಕಡಿಮೆಯಿದ್ದುದು ಹಾಗೂ ದೃಷ್ಟಿ ದೋಷದ ಸಮಸ್ಯೆ ಹಿನ್ನೆಡೆ ಉಂಟುಮಾಡಿತು. ನಂತರ ರಂಗಭೂಮಿಯ ಕಡೆಗೆ ಮುಖಮಾಡಿದ ಅವರು, ಕೊಂಕಣಿ, ಕನ್ನಡ ಹಾಗೂ ಮರಾಠಿ ಭಾಷೆಯ ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.

1973ರಲ್ಲಿ ಅನಂತ್​ನಾಗ್ ‘ಸಂಕಲ್ಪ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 1975ರಲ್ಲಿ ಜಿ.ವಿ.ಅಯ್ಯರ್ ಅವರ ‘ಹಂಸಗೀತೆ’ಯಲ್ಲಿ ಮುಖ್ಯಪಾತ್ರವನ್ನು ಅನಂತ್ ನಾಗ್ ನಿರ್ವಹಿಸಿದರು. ಆ ಚಿತ್ರ ರಾಷ್ಟ್ರ ಪ್ರಶಸ್ತಿಗೆ ಭಾಜನವಾಯಿತು. ಶಂಕರ್​ನಾಗ್ ನಿರ್ದೇಶನದ ‘ಮಾಲ್ಗುಡಿ ಡೇಸ್’ ಧಾರವಾಹಿಯಲ್ಲಿ ಅನಂತ್ ನಾಗ್ ಪಾತ್ರ ಎಲ್ಲರ ಮೆಚ್ಚುಗೆ ಗಳಿಸಿತು. ಅನಂತ್​ನಾಗ್ ಈವರೆಗೆ ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಅವುಗಳಲ್ಲಿ ಕನ್ನಡದ ಸುಮಾರು 200ಕ್ಕೂ ಅಧಿಕ ಚಿತ್ರಗಳು ಸೇರಿವೆ. ಇವುಗಳಲ್ಲದೇ ಹಿಂದಿ, ಮರಾಠಿ, ಮಲಯಾಳಂ, ತಮಿಳು, ತೆಲುಗು ಮೊದಲಾದ ಭಾಷೆಯ ಚಿತ್ರಗಳಲ್ಲಿ ಅನಂತ್​ನಾಗ್ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕೆಜಿಎಫ್ ಚಾಪ್ಟರ್ 1’, ‘ಕವಲುದಾರಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಮೊದಲಾದ ಚಿತ್ರಗಳ ಅಭಿನಯಕ್ಕೆ ಅನಂತ್ ನಾಗ್ ಅವರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಸದ್ಯ ಅನಂತ್ ಬತ್ತಳಿಕೆಯಲ್ಲಿ ‘ಗಾಳಿಪಟ 2’, ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸೇರಿದಂತೆ ಹಲವಾರು ಚಿತ್ರಗಳಿವೆ.

ಚಂದನವನದ ಖ್ಯಾತ ಛಾಯಾಗ್ರಾಹಕ ಸತ್ಯ ಹೆಗಡೆ ಅಪರೂಪದ ಚಿತ್ರದ ಮೂಲಕ ಅನಂತ್ ನಾಗ್​ಗೆ ಶುಭಾಶಯ ಕೋರಿದ್ದು ಹೀಗೆ:

ಅನಂತ್​ನಾಗ್ ಅವರಿಗೆ ಪದ್ಮ ಪ್ರಶಸ್ತಿ ಲಭಿಸಬೇಕು ಎಂಬುದು ಕನ್ನಡ ಅಭಿಮಾನಿಗಳ ಬಯಕೆ. ಅದಕ್ಕಾಗಿ ಇತ್ತೀಚೆಗೆ ಅನಂತ್ ಫಾರ್ ಪದ್ಮ ಎಂಬ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಕನ್ನಡ ಚಿತ್ರರಂಗ ಅಭೂತಪೂರ್ವವಾಗಿ ಬೆಂಬಲಿಸಿತ್ತು. ಅದರ ಭಾಗವಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಯುಟ್ಯೂಬ್ ಚಾನಲ್​ನಲ್ಲಿ ಅನಂತ್ ನಾಗ್ ಕುರಿತಂತೆ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಲಾಗಿತ್ತು.

ಅನಂತ್​ನಾಗ್ ಅವರ ಕುರಿತಂತೆ ರಿಷಬ್ ಶೆಟ್ಟಿ ಯೂಟ್ಯೂಬ್​ ಚಾನಲ್​ನಲ್ಲಿ ಪ್ರಕಟವಾಗಿರುವ ಸಾಕ್ಷ್ಯ ಚಿತ್ರ:

ಅನಂತ್ ನಾಗ್ 1987ರಲ್ಲಿ ಗಾಯತ್ರಿ ಅವರನ್ನು ವಿವಾಹವಾದರು. ದಂಪತಿಗೆ ಅದಿತಿ ಎಂಬ ಪುತ್ರಿಯಿದ್ದಾರೆ. ಎವರ್ ಗ್ರೀನ್ ಹೀರೊಗೆ ಬಂದಿರುವ ಪ್ರಶಸ್ತಿಗಳೂ ಹಲವಾರು. ಮಿಂಚಿನ ಓಟ, ಅವಸ್ಥೆ, ಹೊಸ ನೀರು, ಗಂಗವ್ವ ಗಂಗಾಮಾಯಿ ಚಿತ್ರಗಳ ಅಭಿನಯಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಲಭ್ಯವಾಗಿದೆ. ಡಾ.ವಿಷ್ಣುವರ್ಧನ್ ಜೀವಮಾನ ಸಾಧನೆ ಪ್ರಶಸ್ತಿಯೂ ಅನಂತ್ ನಾಗ್ ಅವರಿಗೆ ಲಭಿಸಿದೆ. ಇವುಗಳೊಂದಿಗೆ ಹಲವಾರು ಫಿಲ್ಮ್​ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ರಾಜಕೀಯದಲ್ಲೂ ಸಕ್ರಿಯರಾಗಿದ್ದು ಅನಂತ್ ನಾಗ್, ಶಾಸಕರಾಗಿ ಸಚಿವರೂ ಆಗಿದ್ದವರು.

ಇದನ್ನೂ ಓದಿ:

ಚಿರು ಫೋಟೋ ನೋಡಿದರೆ ಅಳು ನಿಲ್ಲಿಸ್ತಾನೆ ಮೇಘನಾ​ ಪುತ್ರ ರಾಯನ್​ ರಾಜ್​ ಸರ್ಜಾ

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಚಿನ್ನ: ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ

(Kannada Veteran actor Ananth Nag is celebrating his 74th birth day)

Published On - 11:01 am, Sat, 4 September 21

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!