Ananth Nag Birthday: 74ನೇ ವಸಂತಕ್ಕೆ ಕಾಲಿಟ್ಟ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್

ಕನ್ನಡದ ಹಿರಿಯ ನಟ, ಚಿತ್ರರಂಗದ ಎವರ್ ಗ್ರೀನ್ ಹೀರೊ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಅನಂತ್ ನಾಗ್ ಜನ್ಮದಿನವಿಂದು. 1948ರಲ್ಲಿ ಜನಿಸಿದ ಅವರು ಇಂದು 74ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.

Ananth Nag Birthday: 74ನೇ ವಸಂತಕ್ಕೆ ಕಾಲಿಟ್ಟ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್
ಅನಂತ್ ನಾಗ್
Follow us
| Updated By: shivaprasad.hs

Updated on:Sep 04, 2021 | 11:21 AM

ವಿಭಿನ್ನ ಪಾತ್ರಗಳ ಮುಖಾಂತರ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ, ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಜನ್ಮದಿನವಿಂದು. 1948ರ ಸೆಪ್ಟೆಂಬರ್ 4ರಂದು ಭಟ್ಕಳ ತಾಲೂಕಿನ ಶಿರಾಲಿಯ ನಾಗರಕಟ್ಟೆಯಲ್ಲಿ ಜನಿಸಿದರು. ಇಂದು 74ನೇ ವಸಂತಕ್ಕೆ ಕಾಲಿಡುತ್ತಿರುವ ಅವರಿಗೆ ಕನ್ನಡ ಚಿತ್ರರಂಗ ಶುಭಾಶಯಗಳನ್ನು ಕೋರಿದೆ. ಪ್ರಸ್ತುತ ಚಿತ್ರರಂಗದಲ್ಲಿ ಸತತವಾಗಿ ತೊಡಗಿಸಿಕೊಂಡಿರುವ ಅವರು, ತಮ್ಮ ಪೋಷಕ ಪಾತ್ರಗಳ ಮುಖಾಂತರ ಗಮನ ಸೆಳೆಯುತ್ತಿದ್ದಾರೆ.

ನಾಗರಕಟ್ಟೆಯಲ್ಲಿ ಜನಿಸಿದ ಅನಂತ್​ನಾಗ್, ಬಾಲ್ಯವನ್ನು ಅಲ್ಲೇ ಕಳೆದರು. ನಂತರ ಉಡುಪಿಯ ಅಜ್ಜರಕಾಡಿನ ಕ್ಯಾಥೋಲಿಕ್ ಸ್ಕೂಲ್​, ದಕ್ಷಿಣ ಕನ್ನಡದ ಆನಂದ ಆಶ್ರಮ, ಉತ್ತರ ಕನ್ನಡದ ಚಿತ್ರಾಪುರ ಮಠಗಳಲ್ಲಿ ತಮ್ಮ ಶಾಲಾ ವ್ಯಾಸಂಗವನ್ನು ಮಾಡಿದರು. 9ನೇ ತರಗತಿಗೆ ಮುಂಬೈಗೆ ತೆರಳಿ ವ್ಯಾಸಂಗವನ್ನು ಮುಂದುವರೆಸಿದರು. ಸೇನೆಗೆ ಸೇರುವ ಬಯಕೆಯಿದ್ದ ಅವರಿಗೆ ತೂಕ ಕಡಿಮೆಯಿದ್ದುದು ಹಾಗೂ ದೃಷ್ಟಿ ದೋಷದ ಸಮಸ್ಯೆ ಹಿನ್ನೆಡೆ ಉಂಟುಮಾಡಿತು. ನಂತರ ರಂಗಭೂಮಿಯ ಕಡೆಗೆ ಮುಖಮಾಡಿದ ಅವರು, ಕೊಂಕಣಿ, ಕನ್ನಡ ಹಾಗೂ ಮರಾಠಿ ಭಾಷೆಯ ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.

1973ರಲ್ಲಿ ಅನಂತ್​ನಾಗ್ ‘ಸಂಕಲ್ಪ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 1975ರಲ್ಲಿ ಜಿ.ವಿ.ಅಯ್ಯರ್ ಅವರ ‘ಹಂಸಗೀತೆ’ಯಲ್ಲಿ ಮುಖ್ಯಪಾತ್ರವನ್ನು ಅನಂತ್ ನಾಗ್ ನಿರ್ವಹಿಸಿದರು. ಆ ಚಿತ್ರ ರಾಷ್ಟ್ರ ಪ್ರಶಸ್ತಿಗೆ ಭಾಜನವಾಯಿತು. ಶಂಕರ್​ನಾಗ್ ನಿರ್ದೇಶನದ ‘ಮಾಲ್ಗುಡಿ ಡೇಸ್’ ಧಾರವಾಹಿಯಲ್ಲಿ ಅನಂತ್ ನಾಗ್ ಪಾತ್ರ ಎಲ್ಲರ ಮೆಚ್ಚುಗೆ ಗಳಿಸಿತು. ಅನಂತ್​ನಾಗ್ ಈವರೆಗೆ ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಅವುಗಳಲ್ಲಿ ಕನ್ನಡದ ಸುಮಾರು 200ಕ್ಕೂ ಅಧಿಕ ಚಿತ್ರಗಳು ಸೇರಿವೆ. ಇವುಗಳಲ್ಲದೇ ಹಿಂದಿ, ಮರಾಠಿ, ಮಲಯಾಳಂ, ತಮಿಳು, ತೆಲುಗು ಮೊದಲಾದ ಭಾಷೆಯ ಚಿತ್ರಗಳಲ್ಲಿ ಅನಂತ್​ನಾಗ್ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕೆಜಿಎಫ್ ಚಾಪ್ಟರ್ 1’, ‘ಕವಲುದಾರಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಮೊದಲಾದ ಚಿತ್ರಗಳ ಅಭಿನಯಕ್ಕೆ ಅನಂತ್ ನಾಗ್ ಅವರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಸದ್ಯ ಅನಂತ್ ಬತ್ತಳಿಕೆಯಲ್ಲಿ ‘ಗಾಳಿಪಟ 2’, ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸೇರಿದಂತೆ ಹಲವಾರು ಚಿತ್ರಗಳಿವೆ.

ಚಂದನವನದ ಖ್ಯಾತ ಛಾಯಾಗ್ರಾಹಕ ಸತ್ಯ ಹೆಗಡೆ ಅಪರೂಪದ ಚಿತ್ರದ ಮೂಲಕ ಅನಂತ್ ನಾಗ್​ಗೆ ಶುಭಾಶಯ ಕೋರಿದ್ದು ಹೀಗೆ:

ಅನಂತ್​ನಾಗ್ ಅವರಿಗೆ ಪದ್ಮ ಪ್ರಶಸ್ತಿ ಲಭಿಸಬೇಕು ಎಂಬುದು ಕನ್ನಡ ಅಭಿಮಾನಿಗಳ ಬಯಕೆ. ಅದಕ್ಕಾಗಿ ಇತ್ತೀಚೆಗೆ ಅನಂತ್ ಫಾರ್ ಪದ್ಮ ಎಂಬ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಕನ್ನಡ ಚಿತ್ರರಂಗ ಅಭೂತಪೂರ್ವವಾಗಿ ಬೆಂಬಲಿಸಿತ್ತು. ಅದರ ಭಾಗವಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಯುಟ್ಯೂಬ್ ಚಾನಲ್​ನಲ್ಲಿ ಅನಂತ್ ನಾಗ್ ಕುರಿತಂತೆ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಲಾಗಿತ್ತು.

ಅನಂತ್​ನಾಗ್ ಅವರ ಕುರಿತಂತೆ ರಿಷಬ್ ಶೆಟ್ಟಿ ಯೂಟ್ಯೂಬ್​ ಚಾನಲ್​ನಲ್ಲಿ ಪ್ರಕಟವಾಗಿರುವ ಸಾಕ್ಷ್ಯ ಚಿತ್ರ:

ಅನಂತ್ ನಾಗ್ 1987ರಲ್ಲಿ ಗಾಯತ್ರಿ ಅವರನ್ನು ವಿವಾಹವಾದರು. ದಂಪತಿಗೆ ಅದಿತಿ ಎಂಬ ಪುತ್ರಿಯಿದ್ದಾರೆ. ಎವರ್ ಗ್ರೀನ್ ಹೀರೊಗೆ ಬಂದಿರುವ ಪ್ರಶಸ್ತಿಗಳೂ ಹಲವಾರು. ಮಿಂಚಿನ ಓಟ, ಅವಸ್ಥೆ, ಹೊಸ ನೀರು, ಗಂಗವ್ವ ಗಂಗಾಮಾಯಿ ಚಿತ್ರಗಳ ಅಭಿನಯಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಲಭ್ಯವಾಗಿದೆ. ಡಾ.ವಿಷ್ಣುವರ್ಧನ್ ಜೀವಮಾನ ಸಾಧನೆ ಪ್ರಶಸ್ತಿಯೂ ಅನಂತ್ ನಾಗ್ ಅವರಿಗೆ ಲಭಿಸಿದೆ. ಇವುಗಳೊಂದಿಗೆ ಹಲವಾರು ಫಿಲ್ಮ್​ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ರಾಜಕೀಯದಲ್ಲೂ ಸಕ್ರಿಯರಾಗಿದ್ದು ಅನಂತ್ ನಾಗ್, ಶಾಸಕರಾಗಿ ಸಚಿವರೂ ಆಗಿದ್ದವರು.

ಇದನ್ನೂ ಓದಿ:

ಚಿರು ಫೋಟೋ ನೋಡಿದರೆ ಅಳು ನಿಲ್ಲಿಸ್ತಾನೆ ಮೇಘನಾ​ ಪುತ್ರ ರಾಯನ್​ ರಾಜ್​ ಸರ್ಜಾ

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಚಿನ್ನ: ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ

(Kannada Veteran actor Ananth Nag is celebrating his 74th birth day)

Published On - 11:01 am, Sat, 4 September 21

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್